ಬಡ್ತಿ ಮೀಸಲಾತಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ
Team Udayavani, Mar 15, 2017, 1:09 PM IST
ದಾವಣಗೆರೆ: ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ಬಡ್ತಿ ಮೀಸಲಾತಿ ಸೌಲಭ್ಯ ಒದಗಿಸುವುದು, ರಾಜ್ಯ ಸರ್ಕಾರ ನೂತನ ವಿಧೇಯಕ ಜಾರಿಗೊಳಿಸುವ ಮೂಲಕ ಅರ್ಹರಿಗೆ ಅನುಕೂಲ ಮಾಡಿಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪರಿಶಿಷ್ಟಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಒತ್ತಾಯಿಸಿ ಮಂಗಳವಾರ ಕ್ರಿಯಾ ಸಮಿತಿ ನೇತೃತ್ವದಲ್ಲಿ ವಿವಿಧ ಇಲಾಖೆಯ ಪರಿಶಿಷ್ಟ ಜಾತಿ, ಪಂಗಡದ ನೌಕರರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂವಿಧಾನ ಪರಿಚ್ಛೇದ 16(4) ರಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಉದ್ಯೋಗದಲ್ಲಿ ಮೀಸಲಾತಿ ಪ್ರದತ್ತ ಮಾಡಲಾಗಿದೆ.
ಬಡ್ತಿ ಮೀಸಲಾತಿಯನ್ನು ಸಂವಿಧಾನಬದ್ಧವಾಗಿಒದಗಿಸಲು 1978 ಏ. 27 ರಿಂದ ಸಾಂದರ್ಭಿಕ ಸೇವಾ ಹಿರಿತನ ಕಲ್ಪಿಸುವ ಮೂಲಕ ರಾಜ್ಯ ಸರ್ಕಾರ ಕಾಯ್ದೆ ಜಾರಿ ಮಾಡಿತ್ತು. ಈಚೆಗೆ ಬಡ್ತಿ ಮೀಸಲಾತಿ ವಿಚಾರ ಕುರಿತಂತೆ ಸರ್ವೋತ್ಛ ನ್ಯಾಯಾಲಯ ಕಳೆದ ಫೆ. 9 ರಂದು ಬಡ್ತಿ ಮೀಸಲಾತಿ ರದ್ದುಪಡಿಸಿ, ಹೊರಡಿಸಿರುವ ತೀರ್ಪು ದಲಿತ ನೌಕರರಿಗೆ ಅಕ್ಷರಶಃ ಮರಣಶಾಸನವಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆತಂಕ ವ್ಯಕ್ತಪಡಿಸಿದರು.
ಸರ್ವೋತ್ಛ ನ್ಯಾಯಾಲಯದ ತೀರ್ಪಿನಿಂದ 2002 ರಿಂದ ಈವರೆಗೆ ಮುಂಬಡ್ತಿ ಪಡೆದಿರುವ ರಾಜ್ಯ ಸರ್ಕಾರದ ವಿವಿಧ 36 ಇಲಾಖೆಯ 12 ಸಾವಿರ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗಲಿದ್ದಾರೆ. ರಾಜ್ಯ ಸರ್ಕಾರ ಸರ್ವೋತ್ಛ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸುವಲ್ಲಿ ವಿಫಲವಾದ ಕಾರಣ ಅರ್ಹ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಸ್ವಾತಂತ್ರ ಬಂದಾಗನಿಂದ ಈವರೆಗೆ ಮೀಸಲಾತಿ, 1978 ರಿಂದ ಬಡ್ತಿ ಮೀಸಲಾತಿ ಜಾರಿಯಲ್ಲಿ ತೋರುತ್ತಿರುವ ಅತೀವ ವಿಳಂಬ ನೀತಿ ಅರ್ಹ ದಲಿತ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಬಡ್ತಿ ಮೀಸಲಾತಿ ವಿಚಾರವನ್ನು ಲೋಕಸಭೆಯಲ್ಲಿ ಮಂಡಿಸಿ, ಸಂವಿಧಾನದ 117ನೇ ಕಲಂಗೆ ತಿದ್ದುಪಡಿ ತರುವ ಮೂಲಕ ಬಡ್ತಿ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಅರ್ಹ ದಲಿತ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗುವ ಕುರಿತಂತೆ ರಾಜ್ಯ ಸರ್ಕಾರ ಸರ್ವೋತ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಜೊತೆಗೆ ಈ ಬಜೆಟ್ ಅಧಿವೇಶನದಲ್ಲಿ ಬಡ್ತಿ ಮೀಸಲಾತಿ ಕುರಿತಂತೆ ನೂತನ ವಿಧೇಯಕ ಮಂಡಿಸಿ, ಅಂಗೀಕರಿಸಿ, ಸಂವಿಧಾನದ 9ನೇ ಅನುಚ್ಛೇದದಲ್ಲಿ ಸೇರಿಸುವತ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ, ಸಮಿತಿ ಗೌರವ ಅಧ್ಯಕ್ಷ ಡಾ| ಎ.ಬಿ. ರಾಮಚಂದ್ರಪ್ಪ, ಕಾರ್ಯಾಧ್ಯಕ್ಷ ಡಾ| ಎಸ್. ರಂಗಸ್ವಾಮಿ, ಅಧ್ಯಕ್ಷ ಕೆ.ಎಸ್. ಜಯಣ್ಣ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಹಾಲೇಶಪ್ಪ, ಮಂಜುನಾಥ್ ಸಾಸೀÌಹಳ್ಳಿ, ಬಿ.ಎಸ್. ವೆಂಕಟೇಶ್, ಜಯಪ್ಪನಾಯ್ಕ, ಕೆ. ಸುನೀತಾ, ಪ್ರೊ. ಮಂಜಣ್ಣ, ಪರಶುರಾಮ್, ಮಹಾರುದ್ರಪ್ಪ, ಪ್ರಕಾಶ್, ಬಸವರಾಜ್, ರವಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.