![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 17, 2017, 1:02 PM IST
ದಾವಣಗೆರೆ: ಮುಂದಿನ ಜೂನ್ ತಿಂಗಳವರೆಗೆ ಬರ ಪರಿಸ್ಥಿತಿ ಸಮರ್ಪಕವಾಗಿ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜೂನ್ ಹೊತ್ತಿಗೆ ಬರದ ಪರಿಣಾಮ ತೀವ್ರವಾಗಲಿದೆ. ರಾಜ್ಯ ಸರ್ಕಾರ ಕುಡಿಯುವ ನೀರು, ಗೋಶಾಲೆ ಸ್ಥಾಪನೆಗಾಗಿ ಎಲ್ಲಾ ಜಿಲ್ಲಾಡಳಿತಕ್ಕೆ ಸಾಕಷ್ಟು ಹಣ ನೀಡಿದ್ದು, ಯಾವುದಕ್ಕೂ ಹಣಕಾಸಿನ ಕೊರತೆ ಇಲ್ಲ ಎಂದರು. ಬರ ಪರಿಸ್ಥಿತಿ ನಿರ್ವಹಣೆಗೆ ಕುರಿತಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ 4,300 ಕೋಟಿಗೆ ಬೇಡಿಕೆ ಸಲ್ಲಿಸಿತ್ತು.
ಕೇಂದ್ರ ಸರ್ಕಾರ 1,762 ಕೋಟಿಗೆ ಮಂಜೂರು ಮಾಡಿ, ಕೆಲ ದಿನಗಳ ಹಿಂದಷ್ಟೇ 450 ಕೋಟಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 39-40 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ನಷ್ಟ ಅನುಭವಿದ್ದಾರೆ. ಇನ್ನು 15 ದಿನಗಳಲ್ಲಿ ಎಲ್ಲರ ಖಾತೆಗೆ ಏಕಕಾಲಕ್ಕೆ ಬೆಳೆ ನಷ್ಟ ಪರಿಹಾರ ಜಮಾ ಮಾಡಲಾಗುವುದು. 15 ಲಕ್ಷ ರೈತರ ಬ್ಯಾಂಕ್ ಖಾತೆ ಎಲ್ಲ ದಾಖಲೆ ಸಮರ್ಪಕವಾಗಿವೆ.
ಇನ್ನುಳಿದವರ ಬ್ಯಾಂಕ್ ಖಾತೆ ಮತ್ತಿತರ ಸಮಸ್ಯೆ ಇದ್ದು, ರೈತರ ಖಾತೆಗೆ ಹಣ ಜಮಾ ಮಾಡುವ ಮುನ್ನವೇ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಭಾರತದಂಥ ಪ್ರಜಾಸತ್ತಾತ್ಮಕ ದೇಶದಲ್ಲಿ ನಿಜಕ್ಕೂ ಒಂದು ವರ.
ಖಾತರಿ ಯೋಜನೆಯಲ್ಲಿ ನಾನೂ ಸೇರಿ ಶಾಮನೂರು ಶಿವಶಂಕರಪ್ಪ ನವರಂಥವರೂ ಕೆಲಸ ಮಾಡುವ ಅವಕಾಶ ಇದೆ. ಆದರೆ, ಜನರು ತಮ್ಮ ಮೂಲಭೂತ ಹಕ್ಕನ್ನು ಬಳಸಿಕೊಳ್ಳುತಿಲ್ಲ. ಸರ್ಕಾರಗಳು ಜಾಗೃತಿ ಮೂಡಿಸುವಂತಹ ಇಚ್ಛಾಶಕ್ತಿ ತೋರುತ್ತಿಲ್ಲ. ಹಾಗಾಗಿ ಅಪೂರ್ವ ಯೋಜನೆ ಸರಿಯಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ ಎಂಬುದೇ ಬೇಸರದ ವಿಚಾರ ಎಂದು ತಿಳಿಸಿದರು.
ರಾಜ್ಯದಲ್ಲಿ 50 ಲಕ್ಷಕ್ಕಿಂತಲೂ ಹೆಚ್ಚು ಜಾಬ್ಕಾರ್ಡ್ಗಳಿವೆ. ಒಬ್ಬರಿಗೆ 100 ದಿನ ಕೆಲಸ ಕೊಟ್ಟಲ್ಲಿ ರಾಜ್ಯಕ್ಕೆ 20 ಸಾವಿರ ಕೋಟಿ ಹಣ ಖಾತರಿ ಯೋಜನೆಯಡಿ ಬರುತ್ತದೆ. ಆದರೆ, ನಮ್ಮ ಯೋಗ್ಯತೆಗೆ 3 ಸಾವಿರ ಕೋಟಿಯನ್ನೂ ದಾಟಿಲ್ಲ. ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಖಾತರಿ ಯೋಜಗೆಗೆ 45 ಸಾವಿರ ಕೋಟಿ ಅನುದಾನ ನೀಡಿದೆ. ಬರದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬರಲಿದೆ.
8-9 ಸಾವಿರ ಕೋಟಿಯಷ್ಟು ಅನುದಾನವನ್ನು ಬಳಸಿಕೊಳ್ಳಬಹುದಾದ ಅವಕಾಶ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಅಶ್ವತಿ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಇತರರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.