ಅಂಬೇಡ್ಕರ್‌-ಬಸವಾದಿ ಶರಣರು ಮಹಾನ್‌ ದಾರ್ಶನಿಕರು


Team Udayavani, Apr 15, 2017, 1:08 PM IST

dvg2.jpg

ದಾವಣಗೆರೆ: ಮಹಾನ್‌ ಮಾನವತಾವಾದಿಗಳಾದ ಬಸವಾದಿ ಶರಣರು, ಅಂಬೇಡ್ಕರ್‌ರಂತಹ ಮೇರು ಪುರುಷರು ಅಸ್ಪೃಶ್ಯತೆ, ಮೇಲು-ಕೀಳು, ತಾರತಮ್ಯದ ಹೋರಾಡಿದ ದಾರ್ಶನಿಕರು ಎಂದು ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸ್ಮರಿಸಿದ್ದಾರೆ. 

ಡಾ| ಬಿ.ಆರ್‌. ಅಂಬೇಡ್ಕರ್‌ರವರ 126ನೇ ಹಾಗೂ ಬಾಬು ಜಗಜೀವನರಾಮ್‌ರವರ 110ನೇ ಜನ್ಮ ದಿನಾಚರಣೆ ಸಮಾರಂಭದ ಅಂಗವಾಗಿ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಸತಿ ಹೀನರ ಸಂಘ, ಅಂಧತ್ವ ನಿಯಂತ್ರಣ ಸಮಿತಿ, ಜಿಲ್ಲಾ ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ಪರೀಕ್ಷೆ ಹಾಗೂ ಮಸೂರ ಅಳವಡಿಕೆ ಶಸ್ತ್ರಚಿಕಿತ್ಸೆ ಶಿಬಿರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮಹಾನ್‌ ದಾರ್ಶನಿಕರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಾಗಿದೆ ಎಂದರು. 12ನೇ ಶತಮಾನದಲ್ಲಿ ಬಸವಣ್ಣನವರು ಅಲ್ಲಮಪ್ರಭುಗಳ ಅಧ್ಯಕ್ಷತೆಯಲ್ಲಿ ಸರ್ವ ಸಮಾನತೆಯಾಗಿ ಅನುಭವ ಮಂಟಪ ಕಟ್ಟಿದ್ದರು. ಅನುಭವ ಮಂಟಪದಲ್ಲಿ ಪ್ರತಿಯೊಬ್ಬರಿಗೆ ಸಮಾನ ಸ್ಥಾನಮಾನ ನೀಡುವ ಮೂಲಕ ಸಮಾನತೆಯ ಸಂದೇಶ ಸಾರಿದರು.

ಭಾರತರತ್ನ ಅಂಬೇಡ್ಕರ್‌ರವರು ಸಂವಿಧಾನದಲ್ಲಿ ಸಮಾನತೆ ಅಂಶ ಅಳವಡಿಸುವ ಮೂಲಕ ಸರ್ವ ಸಮಾನತೆಯ ಆಶಯ ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು. ಅಂಬೇಡ್ಕರ್‌ ಅತ್ಯುತ್ತಮ ಸಂವಿಧಾನ ನೀಡುವ ಮೂಲಕ ಶೋಷಿತ ಪರ ಧ್ವನಿಯಾಗಿದ್ದಾರೆ. ಶಿಕ್ಷಣದಿಂದ ಮಾತ್ರವೇ ಎಲ್ಲರ ಅಭಿವೃದ್ಧಿ ಎಂಬುದನ್ನು ಮನಗಂಡಿದ್ದ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮಂತ್ರ ಸಾರಿದವರು.

ಶಿಕ್ಷಣದಿಂದ ವಿಚಾರವಂತಿಕೆ, ಬುದ್ಧಿವಂತಿಕೆ ಬರುತ್ತದೆ. ಆ ಮೂಲಕ ಜಾಗೃತಿ ಸಾಧ್ಯವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ಗಮನ ನೀಡಬೇಕು ಎಂದು ತಿಳಿಸಿದರು. ಇಂದು ಯುವ ಜನಾಂಗ ಮೊಬೈಲ್‌ ನೀಡುವ ಆಸಕ್ತಿ, ಗಮನವನ್ನ ಅಧ್ಯಯನಕ್ಕೆ ನೀಡುತ್ತಿಲ್ಲ.

ಪುಸ್ತಕ ಓದುವ ಮೂಲಕ ಮತ್ತು ಅದರ್ಶ ಚಿಂತನೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು. ಹಾಗೆಯೇ ಪ್ರಬುದ್ಧ ವಿಚಾರ ತಿಳಿಯಬೇಕು ಎಂದರು. ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್‌.ಡಿ. ನೀಲಾಂಬಿಕೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎರಡು ಮೂರು ವರ್ಷದ ಮಕ್ಕಳಿಗೂ ದೃಷ್ಟಿದೋಷ ಕಾಣಿಸಿಕೊಳ್ಳುತ್ತಿದೆ. ಆದಷ್ಟು ಬೇಗ ದೋಷ ಪತ್ತೆ ಹಚ್ಚಿ. ಚಿಕಿತ್ಸೆ ನೀಡಿದಲ್ಲಿ ಸಮಸ್ಯೆ ನಿವಾರಣೆ ಆಗಲಿದೆ ಎಂದು ತಿಳಿಸಿದರು. 

ಇತ್ತೀಚಿನ ದಿನಗಳಲ್ಲಿ ರಕ್ತದ ಅಭಾವ ಹೆಚ್ಚಾಗಿದ್ದು, ರಕ್ತವನ್ನು ಯಾರು ತಯಾರಿಸುವುದಕ್ಕೆ ಸಾಧ್ಯವಿಲ್ಲ. ಬದಲಾಗಿ ಮನುಷ್ಯರೇ ರಕ್ತ ನೀಡಬೇಕಾಗಿದ್ದು, ಸಾಕಷ್ಟು ಶಿಬಿರಗಳನ್ನು ಮಾಡುವ ಮೂಲಕ ರಕ್ತವನ್ನು ಸಂಗ್ರಹಿಸುವ ಕಾರ್ಯವು ನಡೆಯುತ್ತಿದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ಸಿ. ಅಂಜಿನಪ್ಪ ಕಡತಿ, ಪ್ರಧಾನ ಕಾರ್ಯದರ್ಶಿ ಎಚ್‌.ಸಿ. ಗುಡ್ಡಪ್ಪ, ಎಸ್‌.ಕೆ. ಒಡೆಯರ್‌, ಕೆ.ಜಿ. ಬಸವನಗೌಡ, ಹೊನ್ನಮ್ಮ ಇತರರು ಇದ್ದರು. ಡಾ. ಎ.ಎಂ. ಶಿವಕುಮಾರ್‌ ಅವರನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.