ಅಧಿಕಾರ ಬಳಕೆಗೆ ಮಾಹಿತಿ ಕೊರತೆ ಅಡ್ಡಿ


Team Udayavani, Apr 17, 2017, 1:07 PM IST

dvg1.jpg

ದಾವಣಗೆರೆ: ಅನೇಕ ಸಮಸ್ಯೆಗಳಿಗೆ ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳು ತಮ್ಮಲ್ಲಿರುವ ಭದ್ರತಾ ಕಲಂನ ಅಧಿಕಾರ ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದ್ದರೂ ಮಾಹಿತಿ ಕೊರತೆಯಿಂದ ಅಧಿಕಾರ ಬಳಕೆಯಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಹೇಳಿದ್ದಾರೆ. 

ಜಿಎಂ ಹಾಲಮ್ಮ ಪಿಯು ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಪೊಲೀಸ್‌, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಭದ¤ರಾ ಕಲಂ, ಗಡಿಪಾರು ಪ್ರಕ್ರಿಯೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಆಡಳಿತ ಯಂತ್ರದ ಪ್ರಮುಖ ಇಲಾಖೆಗಳಾದ ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಕಾನೂನಿನಲ್ಲಿ ಕೆಲ ಉತ್ತಮ ಅವಕಾಶ ಇವೆ.

ಸಮಸ್ಯೆಗೆ ತಮ್ಮ ಹಂತದಲ್ಲೇ ಸೂಕ್ತ ಪರಿಹಾರ ಕಂಡುಕೊಳ್ಳಲು ಭದ್ರತಾ ಕಲಂನಲ್ಲಿ ಅಧಿಕಾರ ನೀಡಲಾಗಿದೆ. ಆದರೆ, ತಮಗೆ ಇರುವ ಅಧಿಕಾರ ಕುರಿತು ಅಧಿಕಾರಿಗಳಿಗೆ ಮಾಹಿತಿ ಕೊರತೆ ಇರುವುದರಿಂದ ಈ ಅಧಿಕಾರ ಬಳಕೆಯಾಗುತ್ತಿಲ್ಲ ಎಂದರು. ಯಾವುದೇ ಅಧಿಕಾರಿ ಆಗಿರಲಿ, ತನಗೆ ಇರುವ ಅಧಿಕಾರ, ಕರ್ತವ್ಯ ಕುರಿತು ಸಂಪೂರ್ಣ ಮಾಹಿತಿ ಇರಬೇಕು.

ಕಾನೂನು, ಕಟ್ಟಳೆಗಳನ್ನು ರೂಪಿಸಿದರೆ ಸಾಲದು. ಅವನ್ನು ಬಳಕೆಮಾಡಿಕೊಳ್ಳಬೇಕು. ಅದರಲ್ಲೂ ಸಾರ್ವಜನಿಕರೊಂದಿಗೆ ನಿರಂತರ ಒಡನಾಟ ಹೊಂದಿರುವವರು, ಅವರ ಏಳಿಗೆಗಾಗಿ ದುಡಿಯುವ ಕರ್ತವ್ಯದ ಹೊಣೆ ಹೊತ್ತವರು ಇಂತಹ ಕಾನೂನು ಕುರಿತು ಆಳ ಜ್ಞಾನ ಹೊಂದಿರಬೇಕು. ಕಾನೂನು ಅರಿವಿಲ್ಲದೇ ಇದ್ದರೆ ಅಂತಹ ಅಧಿಕಾರಿ ಜನಪರವಾಗಿ ಕೆಲಸಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು. 

ಅಧಿಕಾರಿಗಳು ಕಾನೂನಿನ ಬಗ್ಗೆ ಸೂಕ್ತ ಮಾಹಿತಿ, ಅರಿವು ಹೊಂದಬೇಕು. ಅರಿವಿಲ್ಲದಿದ್ದರೆ ಸಾಕಷ್ಟು ಪ್ರಕರಣಗಳಲ್ಲಿ ಅಧಿಧಿಕಾರವಿದ್ದರೂ ಬಳಸಲು ಸಾಧ್ಯವಾಗದು. ಅಧಿಕಾರದ ಬಳಕೆಯಾಗದೇ ಹೋದಾಗ ನ್ಯಾಯಯುತ ತೀರ್ಮಾನ ಕೈಗೊಳ್ಳುವುದು ತತ್‌ಕ್ಷಣಕ್ಕೆ ಸಾಧ್ಯವಾಗವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಮಾಜದ ಶಾಂತಿ ಭಂಗ ತರಲು ಬಯಸುವವರು ಕ್ರಿಯಾಶೀಲರಾಗಬಹುದಾದ ಅಪಾಯ ಇರುತ್ತದೆ ಎಂದು ತಿಳಿಸಿದರು. 

ಕಂದಾಯ, ಪೊಲೀಸ್‌ ಎರಡೂ ಇಲಾಖೆಗಳಿಗೂ ಸಮನ್ವಯತೆ, ಸೌಹಾರ್ದತೆ ಅತ್ಯಗತ್ಯವಾಗಿದೆ. ಉಭಯ ಇಲಾಖೆ ಅಧಿಧಿಕಾರಿಗಳಿಗೆ ಇಂತಹ ಕಾನೂನು ಬಗ್ಗೆ ಅರಿವು, ಜಾಗೃತಿ ಮೂಡಿಸಲು ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಈ ಕಾರ್ಯಾಗಾರದಿಂದ ಕಾನೂನು, ಸೌಹಾರ್ದತೆ ಕಾಪಾಡುವ ಹಾದಿಯೂ ಸುಗಮವಾಗುತ್ತದೆ. 

ಕಾನೂನಿನಲ್ಲಿರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಲು ಸಹ ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು. ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ಮಾತನಾಡಿ, ಇಂದು ಸಮಾಜ ಸಾಕಷ್ಟು ಸುಧಾರಣೆ ಕಾಣುತ್ತಿದೆ. ಅದರೊಟ್ಟಿಗೆ ಸಮಸ್ಯೆಗಳೂ ಸಹ ಜಟಿಲಗೊಳ್ಳುತ್ತಿವೆ.

ಅಧಿಕಾರಿ, ಸಿಬ್ಬಂದಿ ಇದರಿಂದ ಸಹಜವಾಗಿಯೇ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಚಿಕ್ಕಪುಟ್ಟ ವಿಷಯಗಳೂ ಸಹಿತ ದೊಡ್ಡ ಸಮಸ್ಯೆಯಾಗಿ ಗೋಚರಿಸುವಂತಹ ಸ್ಥಿತಿ ಬಂದಿದೆ. ಇದು ಸಿಬ್ಬಂದಿ ಮೇಲೆ ಇನ್ನಷ್ಟು ಒತ್ತಡ ಸೃಷ್ಟಿಸುತ್ತಿದೆ ಎಂದರು. ಹಿರಿಯ ಅಧಿಕಾರಿಗಳು ತಮ್ಮ ಅಧಿಕಾರದ ಸಂಪೂರ್ಣ ಮಾಹಿತಿ, ಅರಿವು ಹೊಂದಿರಬೇಕು. ಸಿಬ್ಬಂದಿಗೆ ಸಮಸ್ಯೆಯಾಗದಂತೆ ಕಾನೂನು ಅನುಷ್ಠಾನಗೊಳಿಸುವ ಮಾರ್ಗದರ್ಶನ ನೀಡಬೇಕು. 

ಆದರೆ, ಬಹುತೇಕ ಅಧಿಕಾರಿಗಳು ಕೆಲ ಸಂದರ್ಭದಲ್ಲಿ ತಮಗೆ ಇರುವ ಅಧಿಧಿಕಾರದ ಪರಿಮಿತಿ ತಿಳಿಯದೆ ಪ್ರಕರಣ ಬಿದ್ದು ಹೋಗಿವೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಹೆಚ್ಚುವರಿ ಪೊಲೀಸ್‌ ಅಧಿಧೀಕ್ಷಕಿ ಯಶೋಧ ವಂಟಿಗೋಡಿ, ಇಲಾಖೆ ಅಧಿಕಾರಿ, ಸಿಬ್ಬಂದಿ ಕಾರ್ಯಾಗಾರದಲ್ಲಿ ಭಾಗಿಯಾದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.