ದಲಿತ ವಚನಕಾರರ ಸಂಶೋಧನೆ ಅಗತ್ಯ
Team Udayavani, Mar 12, 2017, 12:44 PM IST
ಚನ್ನಗಿರಿ: ವಚನಕಾರರು ಸರಳ ಸಾಹಿತ್ಯದ ಮೂಲಕ ಜೀವನದ ಅನುಭವಗಳನ್ನು ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ಶೋಷಿತ ಸಮುದಾಯದಿಂದ ಬಂದ ದಲಿತ ವಚನಕಾರರು ಉತ್ತಮ ವಚನಗಳನ್ನು ರಚಿಸಿದ್ದಾರೆ.
ಇವರ ಬಗ್ಗೆ ಇನಷ್ಟು ಸಮಾಜದಲ್ಲಿ ಸಂಶೋಧನೆಗಳು ನಡೆಯಬೇಕಿದೆ ಎಂದು ಶಾಸಕ ವಡ್ನಾಳ್ ರಾಜಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೌಲ್ಯಯುತ ವಿಷಯಗಳನ್ನು ಒಳಗೊಂಡ ವಚನಗಳು ಸಮಾಜದಲ್ಲಿ ಮಾರ್ಗದರ್ಶನ ಮಾಡುವ ಶಕ್ತಿ ಹೊಂದಿವೆ. ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಚನಗಳು ವಿಶಿಷ್ಟ ಸ್ಥಾನ ಪಡೆದಿವೆ. ವಚನಕಾರರು ತಮ್ಮ ಅನುಭವ ಆಗುಹೋಗುಗಳ ಸಂದರ್ಭ ಹಾಗೂ ಇತರೆ ಅಂಶಗಳನ್ನು ಆಧರಿಸಿ ತಮ್ಮ ವಚನಗಳ ಮೂಲಕ ಸಂದೇಶ ನೀಡಿದ್ದಾರೆ.
ಪ್ರಸ್ತುತ ಅವರ ವಚನಗಳು ನಮ್ಮಗೆ ಮಾರ್ಗದರ್ಶಿ ಎಂದರು. ದಲಿತ ವಚನಕಾರರು ಹಾಗೂ ಅವರು ರಚಿಸಿದ ವಚನಗಳ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆ ನಡೆದರೆ ಮತ್ತಷ್ಟು ವಿವರಗಳು ಲಭ್ಯವಾಗುವ ಸಾಧ್ಯತೆಗಳಿವೆ. ಸರ್ಕಾರ ಆಯೋಜಿಸುತ್ತಿರುವ ದಲಿತ ವಚನಕಾರರ ಜಯಂತಿ ಕಾರ್ಯಕ್ರಮದಿಂದ ದಲಿತ ವಚನಕಾರರ ಬಗ್ಗೆ ಇನಷ್ಟು ವಿಚಾರಗಳನ್ನು ತಿಳಿದುಕೊಳ್ಳುವ ಅವಕಾಶ ಕಲ್ಪಿಸಿದಂತಾಗಿದೆ ಎಂದರು.
ತಹಶೀಲ್ದಾರ್ ಪದ್ಮಕುಮಾರಿ ಮಾತನಾಡಿ, ದಲಿತ ವಚನಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ತೊಡೆದು ಹಾಕುವಂತಹ ಶಕ್ತಿಯಿದೆ. ದಾರ್ಶನಿಕರ ವಚನಗಳನ್ನು ತಪ್ಪದೇ ಪಾಲಿಸಿದಲ್ಲಿ ಸಂಪೂರ್ಣವಾಗಿ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಲ್ಲಿದೆ. ಕನ್ನಡ ಸಾಹಿತ್ಯಕ್ಕೆ ದಲಿತ ವಚನಕಾರರ ಕೊಡುಗೆ ಅಪಾರವಾಗಿದೆ ಎಂದರು. ರಾಜಶೇಖರಯ್ಯ, ಶಿರಸ್ತೆದಾರ ಜಗನ್ನಾಥ್, ಶ್ಯಾಮಣ್ಣ, ಆಹಾರ ಶಿರಸ್ತೆದಾರ ಜಯರಾಂ, ಅಮಾನುಲ್ಲಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.