ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು; ಎಂ.ಪಿ. ರೇಣುಕಾಚಾರ್ಯ

ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಕೆಲಸದ ಸಂಬಂಧ ಏನೇ ಸಮಸ್ಯೆ ಇದ್ದರೆ ನನಗೆ ಕರೆ ಮಾಡಿ

Team Udayavani, Apr 20, 2022, 5:44 PM IST

ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು; ಎಂ.ಪಿ. ರೇಣುಕಾಚಾರ್ಯ

ಹೊನ್ನಾಳಿ: ಹೆಣ್ಣು ಕುಟುಂಬದ ಕಣ್ಣು, ಕುಟುಂಬದ ಜವಾಬ್ದಾರಿ ಹೊತ್ತು ಪ್ರಸ್ತುತ ದಿನಗಳಲ್ಲಿ ಮನೆ ಒಳಗಡೆ ಹಾಗೂ ಹೊರಗಡೆ ದುಡಿಯುವ ಮಹಿಳೆ ದೇಶದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಸಹಕಾರಿಯಾಗಿದ್ದಾಳೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಜಿಪಂ, ತಾಪಂ, ಹೊನ್ನಾಳಿ-ನ್ಯಾಮತಿ ತಾಲೂಕುಗಳ ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಹೊನ್ನಾಳಿ, ನ್ಯಾಮತಿ ಸಂಜೀವಿನಿ ಯೋಜನೆ ಸಹಯೋಗದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ಪಟ್ಟಣದ ಅಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅವಳಿ ತಾಲೂಕುಗಳ ಸಂಜೀವಿನಿ ಹಾಗೂ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಹಾಯಧನ ಹಾಗೂ ಸುತ್ತುನಿಧಿ ಚೆಕ್‌ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 7500 ಸ್ತ್ರೀಶಕ್ತಿ ಗುಂಪುಗಳಿಗೆ ಕಿರು ಉದ್ಯಮಕ್ಕೆ ಮರುಪಾವತಿ ಇಲ್ಲದ 75 ಕೋಟಿ ರೂ. ಧನಸಹಾಯ ನೀಡಲಾಗುತ್ತಿದೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ 64 ಸ್ತ್ರೀಶಕ್ತಿ ಸಂಘಗಳಿಗೆ ತಲಾ 1 ಲಕ್ಷ ರೂ.ನಂತೆ ಒಟ್ಟು 64 ಲಕ್ಷ ರೂ.ಗಳನ್ನು ಚೆಕ್‌ ಮೂಲಕ ವಿತರಿಸಲಾಗುತ್ತಿದೆ. 95 ಎನ್‌ಆರ್‌ಎಲ್‌ಎಂ ಸಂಜೀವಿನಿ ಸ್ವಸಹಾಯ ಗುಂಪುಗಳಿಗೆ ಸುತ್ತುನಿಧಿಯಾಗಿ ತಲಾ 15 ಸಾವಿರ ರೂ.ಗಳ ಚೆಕ್‌ ವಿತರಣೆ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ
ಸ್ತ್ರೀಶಕ್ತಿ ಸಂಘಗಳು ಸರ್ಕಾರದಿಂದ ಸಿಗುವ ಸಹಾಯಧನದಿಂದ ಸ್ವಉದ್ಯೋಗ ಕೈಗೊಂಡು ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಆರ್ಥಿಕಾಭಿವೃದ್ಧಿ ಹೊಂದಬೇಕೆಂದು ಕರೆ ನೀಡಿದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಕೆಲಸದ ಸಂಬಂಧ ಏನೇ ಸಮಸ್ಯೆ ಇದ್ದರೆ ನನಗೆ ಕರೆ ಮಾಡಿ. ನನ್ನ ಕೈಲಾದಷ್ಟು ಸಮಸ್ಯೆ ಬಗೆಹರಿಸಿ ಆರ್ಥಿಕ ನೆರವು ನೀಡುತ್ತೇನೆ ಎಂದು ಭರವಸೆ ನೀಡಿದರು.

ಉಪವಿಭಾಗಾಧಿ ಕಾರಿ ಹುಲ್ಲುಮನಿ ತಿಮ್ಮಣ್ಣ, ಹೊನ್ನಾಳಿ ಮತ್ತು ನ್ಯಾಮತಿ ತಹಶೀಲ್ದಾರ್‌ಗಳಾದ ರಶ್ಮಿ, ರೇಣುಕಾ ಮಾತನಾಡಿದರು. ಸಿಡಿಪಿಒ ಮಹಾಂತೇಶ್‌ ಪೂಜಾರ್‌, ಹಿಂದುಳಿದ ವರ್ಗಗಳ ಇಲಾಖೆ ಅ ಧಿಕಾರಿ ಮೃತ್ಯುಂಜಯಸ್ವಾಮಿ, ಬಿಇಒ ರಾಜೀವ್‌, ಪುರಸಭೆ ಮುಖ್ಯಾಧಿಕಾರಿ ಎಸ್‌. ಆರ್‌. ವೀರಭದ್ರಯ್ಯ ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳು ಉಪಸ್ಥಿತರಿದ್ದರು. ತಾಪಂ ಇಒ ರಾಮಾ ಭೋವಿ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಕೆ.ಎಸ್‌. ವಿಜಯಕುಮಾರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕ ವರ್ಣೇಶಪ್ಪ ನಿರೂಪಿಸಿದರು.

ಹೊನ್ನಾಳಿ ಜನ ಪಳಗಿಸಿದ ಆನೆ ನಾನು
ಕೆಲ ರಾಜಕೀಯ ಮುಖಂಡರು ಚುನಾವಣೆ ಬಂದಾಗ ಕಣ್ಣೀರು ಸುರಿಸುವ, ಕಪಟ ನಾಟಕವಾಡುವ ಪ್ರಹಸನ ಪ್ರಾರಂಭ ಮಾಡುತ್ತಾರೆ. ನಾನು ಯಾವುದೇ ಕಪಟ ನಾಟಕಗಳನ್ನು ಪ್ರದರ್ಶಿಸದೆ ನನ್ನ ಕರ್ತವ್ಯವನ್ನು ಶ್ರದ್ಧೆಯಿಂದ ಮಾಡುತ್ತಿದ್ದೇನೆ. ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಗುರುತಿಸಿರುವ ಜನತೆ ಮೂರು ಬಾರಿ ಶಾಸಕನ್ನಾಗಿ ಆಯ್ಕೆ ಮಾಡಿದ್ದಾರೆ. ಇದಕ್ಕಿಂತ ನನಗಿನ್ನೇನು ಬೇಕು ಎಂದ ರೇಣುಕಾಚಾರ್ಯ, ನನಗೆ ರಾಜ್ಯದ ವಿವಿಧ ಭಾಗದಲ್ಲಿ ಹೋದಾಗ “ಹೊನ್ನಾಳಿ ಹುಲಿ’ ಎಂದು ಉದ್ಘೋಷ ಮಾಡುತ್ತಾರೆ. ನಾನು ಹುಲಿ, ಸಿಂಹ ಯಾವುದೂ ಅಲ್ಲ. ಹೊನ್ನಾಳಿ ಜನ ಪಳಗಿಸಿದ ಆನೆ ಎಂದರು.

ಸ್ತ್ರೀಶಕ್ತಿ ಸಹಾಯ ಸಂಘಗಳ ಮಹಿಳೆಯರು ತಾಲೂಕು ಕೇಂದ್ರಕ್ಕೆ ಬಂದಾಗ ಅವರಿಗೆ ಕುಳಿತುಕೊಂಡು ವಿಶ್ರಾಂತಿ ಪಡೆಯಲು ಸ್ಥಳವಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿ ಸ್ತ್ರೀಶಕ್ತಿ ಭವನ ನಿರ್ಮಾಣ ಮಾಡಲು ನಿವೇಶನ ಪಡೆದು ಸುಸಜ್ಜಿತ ಸ್ತ್ರೀಶಕ್ತಿ ಭವನ ನಿರ್ಮಾಣ ಮಾಡಲಾಗುವುದು.
ಎಂ.ಪಿ. ರೇಣುಕಾಚಾರ್ಯ,
ಸಿಎಂ ರಾಜಕೀಯ ಕಾರ್ಯದರ್ಶಿ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.