ದೇವಸ್ಥಾನ ಹುಂಡಿ ಕಳ್ಳತನಕ್ಕೆ ವಿಫಲ ಯತ್ನ
Team Udayavani, Apr 7, 2017, 1:02 PM IST
ಹರಿಹರ: ರಾಮನವಮಿ ದಿನ ಮತ್ತಷ್ಟು ದೇಣಿಗೆ ತುಂಬಿರುತ್ತದೆ ಎಂಬ ದುರಾಸೆಯಿಂದ ದೇವಸ್ಥಾನದ ಹುಂಡಿಗೆ ಕನ್ನ ಹಾಕಲು ಬಂದಿದ್ದ ಕಳ್ಳನೊಬ್ಬನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಸೆರೆಹಿಡಿದ ಘಟನೆ ನಗರದ ಹರ್ಲಾಪುರ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಹರ್ಲಾಪುರದ ನಗರಸಭೆ ಉದ್ಯಾನವನದಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ರಾತ್ರಿ 12ರ ವೇಳೆಗೆ ವ್ಯಕ್ತಿಯೊಬ್ಬ ಬಾಗಿಲ ಬೀಗ ಮುರಿದು ನೋಡನೋಡುತ್ತಲೇ ದೇವಸ್ಥಾನದ ಒಳಗೆ ತೆರಳಿದ್ದು, ಸುತ್ತಲಿನ ಕೆಲ ನಿವಾಸಿಗಳ ಗಮನಕ್ಕೆ ಬಂದಿದೆ. ಕೂಡಲೆ ಅವರು ಪೊಲೀಸರಿಗೆ ಕರೆ ಮಾಡಿ, ದೂರದಿಂದ ಕಳ್ಳನ ಚಲನವಲ ಗಮನಿಸುತ್ತಿದ್ದರೆ.
ತಾನು ತಂದಿದ್ದ ಹಾರೆ ಮತ್ತಿತರೆ ಸಲಕರಣೆಗಳಿಂದ ಆತ ಹುಂಡಿಯನ್ನು ತೆರೆಯಲು ಪ್ರಯತ್ನ ಮಾಡುತ್ತಿದ್ದಾಗ ಪೊಲೀಸ್ ವಾಹನ ಸ್ಥಳಕ್ಕೆ ಆಗಮಿಸಿದ್ದು, ಈ ಶಬ್ದ ಕೇಳಿದ ಆರೋಪಿ ದೇವಸ್ಥಾನ ಒಳಗೆ ಬಚ್ಚಿಟ್ಟುಕೊಂಡಿದ್ದಾನೆ. ದೇವಸ್ಥಾನ ಸುತ್ತುವರಿದ ಪೊಲೀಸರು ಹೊರಬರುವಂತೆ ಆತನನ್ನು ಕರೆದರೂ ಆತ ಹೊರಬರದಿದ್ದಾಗ ಪೊಲೀಸರೆ ಒಳಗೆ ತೆರಳಿ ಆರೋಪಿಯನ್ನು ಬಂಧಿಸಿದರು.
ಕೆಲ ಹೊತ್ತಿನವರೆಗೆ ನಡೆದ ಈ ಕಳ್ಳಾ-ಪೊಲೀಸ್ ಆಟವನ್ನು ಜನರು ಕುತೂಹಲದಿಂದ ವೀಕ್ಷಿಸಿದರು. ಸೆರೆಯಾಗಿರುವ ಆರೋಪಿತ ನಗರ ವಾಸಿ ಮೇಘರಾಜ್, ದೂರು ದಾಖಲಿಸಿಕೊಂಡಿರುವ ನಗರಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೀದಿ ದೀಪಕ್ಕೆ ಆಗ್ರಹ: ಸಮೀಪದ ವಿಜಯನಗರ ಬಡಾವಣೆಯ ಗಣೇಶ ದೇವಸ್ಥಾನದಲ್ಲೂ ಇತ್ತೀಚೆಗೆ ಕಳ್ಳತನ ನಡೆದಿತ್ತು.
ಕಳ್ಳರ ಗುಂಪೊಂದು ನಗರದಲ್ಲಿ ಸಕ್ರೀಯವಾಗಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಉದ್ಯಾನವನದ ಪಕ್ಕದ ರಸ್ತೆಯಲ್ಲಿ ರಾತ್ರಿ ಬೆಳಕಿಲ್ಲದಾಗಿದೆ. ಬೀದಿ ದೀಪ ಹಾಕಲು ವಾರ್ಡ್ನ ನಗರಸಭಾ ಸದಸ್ಯರಿಗೆ ಹೇಳಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.