![CTRavi](https://www.udayavani.com/wp-content/uploads/2024/12/CTRavi-2-415x249.jpg)
ಇಬ್ಬರ ಬಂಧನ: 655 ಗ್ರಾಂ ಗಾಂಜಾ ವಶ
Team Udayavani, Jan 9, 2019, 11:48 AM IST
![dvg-1.jpg](https://www.udayavani.com/wp-content/uploads/2019/01/9/dvg-1-620x267.jpg)
ದಾವಣಗೆರೆ: ವಿವಿಧ ಕಡೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿ, ಒಟ್ಟು 655 ಗ್ರಾಂ ಗಾಂಜಾ ಸೊಪ್ಪು, ಮಾರಾಟಕ್ಕೆ ಬಳಸುತ್ತಿದ್ದ ಕಾರು, ಆ್ಯಕ್ಟಿವ್ ಹೋಂಡಾ ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆಯ ಆಂಜನೇಯ ಬಡಾವಣೆಯ 18ನೇ ಕ್ರಾಸ್ನಲ್ಲಿ ಅಕ್ವೇರಿಯಂ ಅಂಗಡಿಯ ಎಸ್.ಎ. ಪ್ರಮೋದ್ (28) ಎಂಬುವವನ್ನು ಬಂಧಿಸಿ, 15 ಸಾವಿರ ರೂ. ಮೌಲ್ಯದ 500 ಗ್ರಾಂ ಗಾಂಜಾ ಸೊಪ್ಪು ಮತ್ತು ಗಾಂಜಾ ಸಾಗಾಣೆಗೆ ಬಳಸುತ್ತಿದ್ದ ಟವೆರಾ ಕಾರು ವಶಪಡಿಸಿಕೊಳ್ಳಲಾಗಿದೆ. ಪ್ರಮೋದ್ ವಿರುದ್ಧ ಬಡಾವಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗಾಂಜಾ ಸೇವಿಸುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿಗಳು ನೀಡಿದ ಮಾಹಿತಿ ಆಧರಿಸಿ ನಿಜಲಿಂಗಪ್ಪ ಬಡಾವಣೆಯ ಬಕ್ಕೇಶ್ವರ ಕಲ್ಯಾಣ ಮಂಟಪದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಮೋದ್ನನ್ನು ಸಿಇಎನ್ ಪೊಲೀಸ್ ಇನ್ಸ್ಪೆಕ್ಟರ್ ಟಿ.ವಿ. ದೇವರಾಜ್ ಹಾಗೂ ಸಿಬ್ಬಂದಿಯವರಾದ ಪ್ರಕಾಶ್, ರವಿ, ಮಂಜುನಾಥ್, ಲೋಹಿತ್, ರಮೇಶ್, ವೀರಭದ್ರಪ್ಪ, ಈಶ್ವರಪ್ಪ, ಮಾರುತಿ, ನಾಗರಾಜ್, ದೇವರಾಜ್, ಸಚಿನ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.
ಹರಿಹರದ ಅಮರಾವತಿ ಕಾಲೋನಿ ಬಸ್ ನಿಲ್ದಾಣದ ಬಳಿ ಆ್ಯಕ್ಟಿವ್ ಹೋಂಡಾದಲ್ಲಿ ಗಾಂಜಾ ಮಾರುತ್ತಿದ್ದ ಗುರುನಾಥ್ ಅಲಿಯಾಸ್ ಗುರು (34) ಎಂಬುವನನ್ನು ಹರಿಹರ ಗ್ರಾಮಾಂತರ ಪಿಎಸ್ಐ ಸಿದ್ದೇಗೌಡ ಮತ್ತವರ ಸಿಬ್ಬಂದಿ ಬಂಧಿಸಿದ್ದಾರೆ. ಹರ್ಲಾಪುರದಲ್ಲಿ ತರಕಾರಿ ಅಂಗಡಿ ನಡೆಸುತ್ತಿದ್ದ ಗುರುನಾಥ್ ಆ್ಯಕ್ಟಿವ್ ಹೋಂಡಾದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಆತನಿಂದ 165 ಗ್ರಾಂ ಗಾಂಜಾದ 7 ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೇ ಗಾಂಜಾ ಮಾರಾಟ ಮಾಡುತ್ತಿದ್ದರು. ಬೇರೆ ಜಿಲ್ಲೆಗಳಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಇದೆ. ಗಾಂಜಾ ಮಾರಾಟದ ಹಿಂದೆ ಜಾಲವೂ ಇರಬಹುದು ಎಂಬ ಹಿನ್ನೆಲೆಯಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಆರೋಪಿಗಳು, ವಿದ್ಯಾರ್ಥಿಗಳೊಂದಿಗೆ ಫೋನ್ ಮೂಲಕ ಸಂಪರ್ಕ ಸಾಧಿಸಿ, ಗಾಂಜಾ ಮಾರಾಟ ಮಾಡುತ್ತಿದ್ದರು. ಪ್ಯಾಕೆಟ್ಗಳಲ್ಲಿ ಮಾರಾಟ ಮಾಡುತ್ತಿದ್ದರು. ಕೆಲವಾರು ಕಾಲೇಜು ಆಡಳಿತ ಮಂಡಳಿ, ಶಿಕ್ಷಕರೊಂದಿಗೆ ಸಂಪರ್ಕದಲ್ಲಿದ್ದು, ಅವರ ಮಾಹಿತಿ ಆಧಾರದಲ್ಲೂ ಗಾಂಜಾ ಮಾರಾಟದ ಬಗ್ಗೆ ಎಲ್ಲಾ ಕಡೆಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ಹೆಬ್ಟಾಳು ಟೋಲ್ಗೇಟ್ ಬಳಿ ನಡೆದಿದ್ದ ಬೆಳ್ಳಿ ದರೋಡೆಗೆ ಸಂಬಂಧಿಸಿದಂತೆ ಇಬ್ಬರನ್ನ ಬಂಧಿಸಲಾಗಿದೆ. ಇನ್ನುಳಿದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅತಿ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪ್ರಶ್ನೆ ಯೊಂದಕ್ಕೆ ಉತ್ತರಿಸಿದರು. ಪ್ರೊಬೇಷನರಿ ಎಸ್ಪಿ ಶ್ರೀನಿವಾಸಲು, ಡಿಸಿಆರ್ಬಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡ, ಸಿಇಎನ್ ಪೊಲೀಸ್ ಇನ್ಸ್ಪೆಕ್ಟರ್ ಟಿ.ವಿ. ದೇವರಾಜ್, ಹರಿಹರ ಗ್ರಾಮಾಂತರ ಪಿಎಸ್ಐ ಸಿದ್ದೇಗೌಡ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
![CTRavi](https://www.udayavani.com/wp-content/uploads/2024/12/CTRavi-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-dvg](https://www.udayavani.com/wp-content/uploads/2024/12/7-dvg-1-150x90.jpg)
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
![sullia](https://www.udayavani.com/wp-content/uploads/2024/12/sullia-1-150x86.jpg)
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
![MP-R](https://www.udayavani.com/wp-content/uploads/2024/12/MP-c-150x87.jpg)
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![CTRavi](https://www.udayavani.com/wp-content/uploads/2024/12/CTRavi-2-150x90.jpg)
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
![ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ](https://www.udayavani.com/wp-content/uploads/2024/12/Bangladeshi-nationals-150x88.jpg)
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
![Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ](https://www.udayavani.com/wp-content/uploads/2024/12/Army-1-150x100.jpg)
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
![Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ](https://www.udayavani.com/wp-content/uploads/2024/12/modi-pm-150x72.jpg)
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
![England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ](https://www.udayavani.com/wp-content/uploads/2024/12/ben-150x84.jpg)
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.