ಮೇಯರ್‌ ಗಾದಿಗೆ ಇಬ್ಬರಲ್ಲಿ ಮೊದಲ್ಯಾರು?


Team Udayavani, Apr 10, 2017, 12:54 PM IST

dvg3.jpg

ದಾವಣಗೆರೆ: ಮಹಾನಗರಪಾಲಿಕೆ ಮೇಯರ್‌ ಸ್ಥಾನಕ್ಕೆ ಏ.13ರಂದು ಚುನಾವಣೆ ನಡೆಯಲಿದ್ದು, ಬಿಸಿಎಂ ಬಿ ಮಹಿಳಾ ವರ್ಗಕ್ಕೆ ಮೀಸಲಾಗಿರುವ ಈ ಬಾರಿ ಮೇಯರ್‌ಗಿರಿಗೆ ಇಬ್ಬರು ರೇಸ್‌ನಲ್ಲಿದ್ದಾರೆ. ಒಟ್ಟು 41 ಸದಸ್ಯರನ್ನು ಹೊಂದಿರುವ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ನ 39 ಸದಸ್ಯರಿದ್ದಾರೆ. ಬಿಜೆಪಿ, ಸಿಪಿಐ ತಲಾ ಓರ್ವ ಸದಸ್ಯರಿದ್ದಾರೆ. 

ಎದುರಾಳಿಯೇ ಇಲ್ಲದ ಪರಿಸ್ಥಿತಿಯಲ್ಲಿ ರೇಸ್‌ನಲ್ಲಿರುವ ಕಾಂಗ್ರೆಸ್‌ನ ಇಬ್ಬರು ಸದಸ್ಯೆಯರಲ್ಲಿ ಮೊದಲು ಯಾರು ಹುದ್ದೆ ಅಲಂಕರಿಸಲಿದ್ದಾರೆ ಎಂಬುದಷ್ಟೇ ಈಗ ಒಂದಿಷ್ಟು ಕುತೂಹಲ. ಮೇಯರ್‌ ಹುದ್ದೆಗೆ ಮೀಸಲು ನಿಗದಿಯಾಗಿರುವ ಬಿಸಿಎಂ ಬಿ ಮಹಿಳಾ ವರ್ಗದಲ್ಲಿ 39ನೇ ವಾರ್ಡ್‌ನ ನಾಗರತ್ನಮ್ಮ, 11ನೇ ವಾರ್ಡ್‌ನ ಅನಿತಾಬಾಯಿ ಡಿ. ಮಾಲತೇಶ್‌ ರೇಸ್‌ ನಲ್ಲಿದ್ದಾರೆ.

ಪಾಲಿಕೆ ಕಾಂಗ್ರೆಸ್‌ ತೆಕ್ಕೆಗೆ ಬಂದ ಮೇಲೆ ಸತತ ಮೂರನೇ ಬಾರಿಯೂ ಮಹಿಳೆಯೇ ಮೇಯರ್‌ ಸ್ಥಾನ ಅಲಂಕರಿಸಲಿರುವುದು ವಿಶೇಷ. ಹಿಂದಿನ ಬಾರಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಮೇಯರ್‌ ಸ್ಥಾನಕ್ಕೆ ಅಶ್ವಿ‌ನಿ ವೇದಮೂರ್ತಿ, ರೇಖಾ ನಾಗರಾಜ್‌, ನಾಗರತ್ನಮ್ಮ ಈ ಮೂವರು ಪ್ರಬಲ ಆಕಾಂಕ್ಷಿಗಳಾಗಿದ್ದರು.

ಪಕ್ಷದ ವರಿಷ್ಠರು ಅಶ್ವಿ‌ನಿ ವೇದಮೂರ್ತಿ ಮತ್ತು ರೇಖಾ ನಾಗರಾಜ್‌ ಮಧ್ಯ ತಲಾ 6 ತಿಂಗಳ ಅವಧಿ ಅಧಿಕಾರ ಹಂಚಿದರು. ಇದರಿಂದ ನಾಗರತ್ನಮ್ಮ ಅವಕಾಶ ವಂಚಿತರಾಗಬೇಕಾಯಿತು. ಈ ಬಾರಿ ಬಿಸಿಎಂ ಬಿ ಮಹಿಳಾ  ಮೀಸಲಾತಿ ಕೋಟಾದಡಿ ಅವರು ಮೇಯರ್‌ ಹುದ್ದೆಗೆ ಹಕ್ಕು ಮಂಡಿಸಲಿದ್ದಾರೆ.

ನಗರದ ಹಳೆಭಾಗದಿಂದ ಈ ಹಿಂದೆ ರೇಣುಕಾಬಾಯಿ ವೆಂಕಟೇಶ್‌ನಾಯ್ಕ, ಎಚ್‌.ಬಿ. ಗೋಣೆಪ್ಪ ತಲಾ ಒಂದು ವರ್ಷ ಮೇಯರ್‌ ಆಗಿ ಅಧಿಕಾರ ನಡೆಸಿದ್ದಾರೆ. ಆದರೆ, ಹೊಸ ಭಾಗದ ಸದಸ್ಯರಿಬ್ಬರು (ಅಶ್ವಿ‌ನಿ ವೇದಮೂರ್ತಿ, ರೇಖಾ ನಾಗರಾಜ್‌) ಒಂದು ವರ್ಷದ ಅವಧಿ ಹಂಚಿಕೊಂಡಿದ್ದಾರೆ.

ಈ ಬಾರಿ ಮತ್ತೆ ಹೊಸಭಾಗದ ನಾಗರತ್ನಮ್ಮನವರನ್ನು ಮೇಯರ್‌ ಗಾದಿಯಲ್ಲಿ ಕೂರಿಸಬೇಕೆಂಬ ಮಾತು ಸಹ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿವೆ. ಆದರೆ, ಬಿಸಿಎಂ ಎಂ ಮಹಿಳಾ ವರ್ಗಕ್ಕೆ ಸೇರಿದ ಅನಿತಾಬಾಯಿ ಮಾಲತೇಶ್‌ ಸಹ ಪ್ರಬಲ ಆಕಾಂಕ್ಷಿಯಾಗಿರುವುದರಿಂದ ಮತ್ತೆ ಅಧಿಕಾರ ಹಂಚಿಕೆ ಸೂತ್ರ ಅಳವಡಿಕೆ ಅನಿವಾರ್ಯವಾಗಲಿದೆ. 

ಒಂದು ವೇಳೆ ಅಧಿಕಾರ ಹಂಚಿಕೆ ಮಾಡುವುದಾದರೆ ಮೊದಲ ಅವಕಾಶ ನಾಗರತ್ನಮ್ಮನವರಿಗೆ ನೀಡಬೇಕು ಎಂಬ ಅಭಿಪ್ರಾಯ ಸಹ ಮೂಡಿ ಬರುತ್ತಿವೆ. ಇನ್ನು ಜಾತಿ ಸಮೀಕರಣದ ಲೆಕ್ಕಾಚಾರದಲ್ಲೂ ಸಹ ನಾಗರತ್ನಮ್ಮನವರ ಮೊದಲ ಆಯ್ಕೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ ಪಾಲಿಕೆ ಅಧಿಕಾರ ಚುಕ್ಕಾಣಿ ಹಿಡಿದು ಮೂರು ವರ್ಷ ಪೂರ್ಣಗೊಂಡಿವೆ.

ಈ ಮೂರು ವರ್ಷದ ಅವಧಿಯಲ್ಲಿ ಬಹುದೊಡ್ಡ ಜನಸಂಖ್ಯೆ ಹೊಂದಿರುವ ಸಾದರ ಲಿಂಗಾಯತರಿಗೆ ಇದುವರೆಗೆ ಮೇಯರ್‌ ಸ್ಥಾನ ದಕ್ಕಿಲ್ಲ. ಇಬ್ಬರು ಉಪ ಮೇಯರ್‌ ಆಗಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಪಂಚಮಸಾಲಿ ಸಮಾಜದ ಅಶ್ವಿ‌ನಿಯವರಿಗೆ ಅವಕಾಶ ನೀಡಲಾಗಿದೆ.

ಈ ಬಾರಿ ಅಧಿಕಾರ ಅವಧಿ ಹಂಚಿಕೆಯಾದಲ್ಲಿ ಮೊದಲ ಅವಕಾಶ ನಾಗರತ್ನಮ್ಮರಿಗೆ ಸಿಗಬಹುದೆಂಬ ಲೆಕ್ಕಾಚಾರ ಕೆಲವರದ್ದು. ಉಪ ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು ಆಗಿರುವುದರಿಂದ ಆಕಾಂಕ್ಷಿಗಳ ದಂಡೇ ಇದೆ. ಮೇಯರ್‌ ಸ್ಥಾನದಲ್ಲಿ ಅನನುಭವಿ ಮಹಿಳೆ ಕುಳಿತಾಗ ಉಪ ಮೇಯರ್‌ ಸ್ಥಾನಕ್ಕೆ ಹಿರಿಯ, ಅನುಭವಿ, ಚಾಣಾಕ್ಷ ಸದಸ್ಯರನ್ನು ಆಯ್ಕೆ ಮೊರೆ ಹೋಗಬಹುದು.

ಸಹ ಉಪ ಮೇಯರ್‌ ಆಯ್ಕೆ ಈ ನಿಟ್ಟಿನಲ್ಲೇ ನಡೆಯಲಿದೆ. ಈ ಎಲ್ಲಾ ಕುತೂಹಲಕ್ಕೆ ಏ.13ರಂದು ತೆರೆಬೀಳಲಿದೆ. ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಸಕ ಶಾಮನೂರು ಶಿವಶಂಕರಪ್ಪನವರು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂಬುದು ಜಗಜಾಹೀರ ಸತ್ಯ.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.