ಉದ್ಯಾನವನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಆಗ್ರಹ
Team Udayavani, Mar 17, 2017, 12:53 PM IST
ದಾವಣಗೆರೆ: 13ನೇ ವಾರ್ಡ್ನ ಕೆ.ಆರ್. ರಸ್ತೆಯಲ್ಲಿರುವ ಉದ್ಯಾನವನದ ಅಭಿವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಗುರುವಾರಕರ್ನಾಟಕ ರಕ್ಷಣಾ ವೇದಿಕೆ (ಎಚ್.ಶಿವರಾಮೇಗೌಡ ಬಣ) ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟಿಸಿದ್ದಾರೆ.
ಕೆ.ಆರ್. ರಸ್ತೆಯಲ್ಲಿರುವುದು ದಕ್ಷಿಣ ಭಾಗದ ಏಕೈಕ ಉದ್ಯಾನವನವಾಗಿದೆ. 60-70 ವರ್ಷದ ಇತಿಹಾಸ ಹೊಂದಿರುವ ಈ ಉದ್ಯಾನವನ ಸೂಕ್ತ ನಿರ್ವಹಣೆಇಲ್ಲ. ಮರ-ಗಿಡಗಳು ನಾಪತ್ತೆಯಾಗಿ ಹಲವಾರು ವರ್ಷವೇ ಕಳೆದಿವೆ. ಪಾರ್ಕ್ ದಿನದಿಂದ ದಿನಕ್ಕೆ ಅನೈತಿಕ ತಾಣವಾಗಿ ಮಾರ್ಪಡುತ್ತಿದೆ.
ಆದರೆ, ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಭಾಗದಲ್ಲಿರುವ ಉದ್ಯಾನವನದ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ. ಈಗಲೂ ನಗರಪಾಲಿಕೆ ಪಾರ್ಕ್ ಅಭಿವೃದ್ಧಿ ಪಡಿಸಿ, ಸೂಕ್ತ ಬಂದೋಬಸ್ತ್ ಮಾಡದೇ ಹೋದಲ್ಲಿ ಕೆಲವೇ ದಿನಗಳಲ್ಲಿ ಪಾರ್ಕ್ ಒತ್ತುವರಿ ಆಗುವುದು ಶತಃ ಸಿದ್ಧ.
ಸ್ಮಾರ್ಟ್ಸಿಟಿ ಆಗುವ ಪ್ರದೇಶದಲ್ಲಿರುವ ಪಾರ್ಕ್ನ ಅಭಿವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಪಾರ್ಕ್ನಲ್ಲಿರುವ ಬೃಹತ್ ಟ್ಯಾಂಕ್ಗಳ ಸ್ವತ್ಛತೆ ಮಾಡದೆ ಹತ್ತಾರು ವರ್ಷವೇ ಆಗಿವೆ. ಅದೇ ಟ್ಯಾಂಕ್ ನೀರನ್ನು ಜನರು ಬಳಸುವಂತಾಗಿದೆ. ನೀರಿನಲ್ಲಿ ಹುಳ ಹುಪ್ಪಡಿ ಎನ್ನುವುದು ಸಾಮಾನ್ಯ ಎನ್ನುವಂತಾಗಿದೆ.
ಟ್ಯಾಂಕ್ ಸ್ವತ್ಛತೆ ಮಾಡುವಂತೆ ಹಲವಾರು ಬಾರಿ ಮಾಡಿಕೊಂಡ ಮನವಿಗೆ ಯಾವುದೇ ಪ್ರಯೋಜನವಾಗಿಲ್ಲ. ಮಹಾನಗರ ಪಾಲಿಕೆ ಟ್ಯಾಂಕ್ ಸ್ವತ್ಛತೆಗೆ ಗಮನ ನೀಡಬೇಕು ಎಂದು ಒತ್ತಾಯಿಸಿದರು. ಅರಳಿಮರ ವೃತ್ತದಿಂದ ಮಹಾನಗರ ಪಾಲಿಕೆವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಆಯುಕ್ತ ಬಿ.ಎಚ್. ನಾರಾಯಣಪ್ಪಗೆ ಮನವಿ ಸಲ್ಲಿಸಿ, ಪಾರ್ಕ್ ಅಭಿವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಆಯುಕ್ತ ಬಿ.ಎಚ್. ನಾರಾಯಣಪ್ಪ, ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು. ಸಂಘಟನೆ ಜಿಲ್ಲಾ ಅಧ್ಯಕ್ಷ ಸ.ಗು. ಶಿವಕುಮಾರ್, ಮಹಿಳಾ ಘಟಕದ ಶುಭಲತಾ, ಶಬೀºರ್ ಅಹ್ಮದ್, ಎಂ. ಅನ್ವರ್ ಹುಸೇನ್, ಸಲೀಂಬಾಯಿ, ಜಬೀಖಾನ್, ದೇವರಾಜ್ಸ್ವಾಮಿ, ರವಿನಾಯಕ್, ಫೈಜುಲ್ಲಾ, ಫಯಾಜ್ ಜಮೀಲ್, ಮೊಹಿದೀªನ್, ಅಬ್ದುಲ್ ರಷೀದ್, ಶಾಹಿದ್, ಷμ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ
Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್
ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು
Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!
Chikodi: ಕೌಟುಂಬಿಕ ಕಲಹ; ತಾಯಿ-ಮಗು ಬಾವಿಗೆ ಹಾರಿ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.