Davanagere: ರಾಜ್ಯಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನ ನಿರ್ಲಕ್ಷಿಸಿದೆ: ಕೂಡಲಸಂಗಮ ಶ್ರೀ
ಸೆ.22ರಂದು ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಮಟ್ಟದ ಸಮಾವೇಶ
Team Udayavani, Sep 13, 2024, 2:48 PM IST
ದಾವಣಗೆರೆ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಕ್ಕಷ್ಟು ಸ್ಪಂದನೆಯೂ ಈಗಿನ ಕಾಂಗ್ರೆಸ್ ಸರ್ಕಾರದಿಂದ ಸಿಕ್ಕಿಲ್ಲ. ಈಗಿನ ಕಾಂಗ್ರೆಸ್ ಸರ್ಕಾರ ಹೋರಾಟವನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಮುಖ್ಯಮಂತ್ರಿಯವರು ನಿರಾಸಕ್ತಿ ತೋರಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ನಾವು ಮಾಡಿದ ಹೋರಾಟದ ಫಲವಾಗಿಯೇ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿಗಳ ಕೊಡುಗೆಯನ್ನು ಮುಖ್ಯಮಂತ್ರಿಯವರು ಮರೆಯುವಂತಿಲ್ಲ. ಕಾನೂನು ಹೋರಾಟಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಪಂಚಮಸಾಲಿಗಳ ಮೀಸಲಾತಿಗೆ ಕ್ರಮವಹಿಸಲಿ ಎಂದು ಎಚ್ಚರಿಸಿದರು.
ಬೆಳಗಾವಿಯಲ್ಲಿ ಸಮಾವೇಶ
ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆ ಬಗ್ಗೆ ಕಾನೂನಿನ ಮೂಲಕ ಸರ್ಕಾರಕ್ಕೆ ಒತ್ತಡ ಹಾಕಲು ಸೆ. 22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.
ಮೀಸಲಾತಿಯನ್ನು ಕಾನೂನಾತ್ಮಕವಾಗಿ ಹೇಗೆ ಪಡೆದುಕೊಳ್ಳಬಹುದು ಎಂಬ ಬಗ್ಗೆ ಪಂಚಮಸಾಲಿ ಸಮಾಜದ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.