Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್‌ ಜೋಶಿ


Team Udayavani, Nov 12, 2024, 5:04 PM IST

Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್‌ ಜೋಶಿ

ದಾವಣಗೆರೆ: ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನ.9ರ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.9 ರಂದು ರಾಜ್ಯ ಸರ್ಕಾರ ಕೂಡಲೇ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಜಾರಿ ಮಾಡಿರುವ ನೋಟಿಸ್ ಹಿಂದಕ್ಕೆ ಪಡೆಯಬೇಕು ಎಂಬ ಆದೇಶ ಹೊರಡಿಸಿದೆ. ಆದರೆ, ಅದು ಈಗಾಗಲೇ ವಕ್ಫ್ ಆಸ್ತಿ ಎಂಬುದಾಗಿ ಸ್ವಾಧೀನ ಪಡಿಸಿಕೊಂಡಿದ್ದರೆ ಮತ್ತು ಆರ್‌ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರೆ ನ. 9 ರ ಆದೇಶ ಅನ್ವಯವಾಗುವುದೇ ಇಲ್ಲ ಎಂದು ತಿಳಿಸಿದರು.

ಮತಾಂಧರಂತೆ ವರ್ತಿಸುತ್ತಿರುವ ಸಚಿವ ಜಮೀರ್ ಅಹಮ್ಮದ್ ಈಗಾಗಲೇ ಎಲ್ಲ ಕಡೆ ವಕ್ಫ್ ಅದಾಲತ್ ನಡೆಸಿ ಅನೇಕರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಾಗುವಂತೆ ನೋಡಿಕೊಂಡಿದ್ದಾರೆ. ಅಂತಹ ಆಸ್ತಿಗಳ ಬಗ್ಗೆ ರಾಜ್ಯ ಸರ್ಕಾರದ ನ.9ರ ಆದೇಶದಲ್ಲಿ ಯಾವುದೇ ಸ್ಪಷ್ಟನೆಯೇ ಇಲ್ಲ. ಇಂತಹ ಕಾರಣದಿಂದ ಈವರೆಗೆ ವಕ್ಫ್ ಆಸ್ತಿ ಶೇ. 3 ರಷ್ಟು ಹೆಚ್ಚಾಗಿದೆ. ಆಸ್ತಿಯನ್ನು ಸ್ವಾಧೀನಪಡಿಸಿಕೊಂಡ ನಂತರ ವಕ್ಫ್ ಅದಾಲತ್ ನಲ್ಲಿ ಹಾಜರಾಗಬೇಕು ಎಂಬುದು ಎಷ್ಟು ಸರಿ. ಹಾಗಾಗಿ ಕೂಡಲೇ ಪಹಣಿಯಲ್ಲಿ ವಕ್ಫ್ ಎಂಬುದಾಗಿ ನಮೂದು ಮಾಡಿರುವುದರ ಜೊತೆಗೆ ಎಲ್ಲ ನೋಟಿಸ್ ರದ್ಧುಪಡಿಸಬೇಕು ಎಂದು ಒತ್ತಾಯಿಸಿದರು.

ಹಾನಗಲ್ ತಾಲೂಕಿನ ಹರಣಗಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಾಗಿದ್ದರಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿರುವುದಕ್ಕೆ ಮತ್ತು ಅದನ್ನು ವರದಿ ಮಾಡಿದ ಪತ್ರಿಕೆಗಳ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿಕೊಂಡಿದೆ. ಅಂತಹ ನಿರ್ಲಜ್ಜ, ಮತಿಗೆಟ್ಟ, ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಈ ಸರ್ಕಾರದ್ದು ಎಂತಹ ಅಹಂಕಾರ ಮತ್ತು ತುಷ್ಟೀಕರಣ. ನಾವು ಬಿಜೆಪಿಯವರು ಆ ಬಗ್ಗೆ ಮಾತನಾಡಿದರೆ ಒಡೆದು ಆಳುವ ನೀತಿ ಎನ್ನಲಾಗುತ್ತದೆ ಎಂದು ಹರಿಹಾಯ್ದರು.

ಈಗಾಗಲೇ ವಕ್ಫ್ ಆಸ್ತಿ ಹೆಸರಲ್ಲಿ ನಡೆಯುತ್ತಿರುವುದೇ ಅತಿಯಾಗಿದೆ. 2013ರ ವಕ್ಫ್ ಕಾನೂನಿನಂತೆ ಎಲ್ಲ ಆಸ್ತಿಗಳನ್ನು ವಕ್ಫ್ ಆಸ್ತಿಗಳು ಎಂದು ಮಾಡಿ, ಅದನ್ನು ಸಮುದಾಯವರು ಉಪಯೋಗಿಸಿದರೆ ಮುಂದಿನ ದಿನಗಳಲ್ಲಿ ಭಾರತಕ್ಕೂ ನಿಜಕ್ಕೂ ಗಂಭೀರವಾದ ಹೊಡೆತ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಗುತ್ತಿಗೆಯಲ್ಲೂ ಅಲ್ಪಸಂಖ್ಯಾತರಿಗೆ ವಿಶೇಷವಾಗಿ ಮುಸ್ಲಿಂರಿಗೆ ಶೇ. 4 ರಷ್ಟು ಮೀಸಲಾತಿ ನೀಡಬೇಕು ಎಂಬುದು ಅಸಂವಿಧಾನಿಕ ಎಂದು ತಿಳಿಸಿದರು.

ಟಾಪ್ ನ್ಯೂಸ್

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Rose day special

Rose day: ಹಿತ್ತಲ ಗುಲಾಬಿ ಗಿಡದ ನೆನಪುಗಳು

4-mudhol

Mudhol: ಜೆಸಿಬಿ ಸದ್ದಿಗೆ ಕಾಡುಪ್ರಾಣಿಗಳು ಕಂಗಾಲು

Rajavardhan’s gajarama movie released

Rajavardhan: ʼಗಜರಾಮʼ ಮೇಲೆ ರಾಜ ಕನಸು: ಹೈವೋಲ್ಟೇಜ್‌ ಆ್ಯಕ್ಷನ್‌ ಸಿನಿಮಾವಿದು…

Vidaamuyarchi Box Office : ಮೊದಲ ದಿನ ಗಳಿಸಿದ್ದೆಷ್ಟು ಅಜಿತ್‌ ‘ವಿಡಾಮುಯಾರ್ಚಿ’?

Vidaamuyarchi Box Office : ಮೊದಲ ದಿನ ಗಳಿಸಿದ್ದೆಷ್ಟು ಅಜಿತ್‌ ‘ವಿಡಾಮುಯಾರ್ಚಿ’?

Chamarajanagara: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Chamarajanagar: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Chamarajanagara: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Chamarajanagar: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

MUDA Case: High Court gives relief to Siddaramaiah; Court refuses to allow CBI investigation

MUDA Case: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿರಾಳ; ಸಿಬಿಐ ತನಿಖೆಗೆ ಒಪ್ಪದ ಪೀಠ

ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್;‌ ಜಾಮೀನು ಕೊಟ್ಟರೂ ಕೇಸ್‌ ರದ್ದತಿ ಮಾಡದ ಹೈಕೋರ್ಟ್

ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್;‌ ಜಾಮೀನು ಕೊಟ್ಟರೂ ಕೇಸ್‌ ರದ್ದತಿ ಮಾಡದ ಹೈಕೋರ್ಟ್

High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?

High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Rose day special

Rose day: ಹಿತ್ತಲ ಗುಲಾಬಿ ಗಿಡದ ನೆನಪುಗಳು

4-mudhol

Mudhol: ಜೆಸಿಬಿ ಸದ್ದಿಗೆ ಕಾಡುಪ್ರಾಣಿಗಳು ಕಂಗಾಲು

Rajavardhan’s gajarama movie released

Rajavardhan: ʼಗಜರಾಮʼ ಮೇಲೆ ರಾಜ ಕನಸು: ಹೈವೋಲ್ಟೇಜ್‌ ಆ್ಯಕ್ಷನ್‌ ಸಿನಿಮಾವಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.