ವಿದ್ಯಾಧೀಶ ತೀರ್ಥ ಶ್ರೀಗಳಿಗೆ ಸ್ವಾಗತ
Team Udayavani, Mar 13, 2017, 1:13 PM IST
ದಾವಣಗೆರೆ: ಮುಂದಿನ 2018ರ ಜ. 18 ರಂದು ಶ್ರೀಕೃಷ್ಣಪೂಜಾ ಪರ್ಯಾಯಕ್ಕಾಗಿ ಎರಡನೇ ಬಾರಿ ಉಡುಪಿಯ ಸರ್ವಜ್ಞ ಪೀಠಾರೋಹಣ ಮಾಡಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳು ಕೈಗೊಂಡಿರುವ ಪರ್ಯಾಯ ಸಂಚಾರ ಅಂಗವಾಗಿ ಭಾನುವಾರ ದಾವಣಗೆರೆ ಆಗಮಿಸಿದರು.
ದಾವಣಗೆರೆಯಲ್ಲಿ ಮಾ. 13 ರಿಂದ 15ರ ವರೆಗೆ ನಡೆಯುವ ಸಂಸ್ಥಾನ ಪೂಜೆ, ಭಕ್ತರ ಮನೆಯಲ್ಲಿ ಪಾದಪೂಜೆ ಇತರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳು ರಾಂ ಅಂಡ್ ಕೋ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಭಕ್ತಾದಿಗಳು ಹರ್ಷೋದ್ಘಾರದ ಸ್ವಾಗತ ಕೋರಿದರು.
ಜಯಕಾರ ಮೊಳಗಿಸಿದರು. ಶಾಸಕ ಶಾಮನೂರು ಶಿವಶಂಕರಪ್ಪ, ಮಹಾನಗರ ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ, ಪರ್ಯಾಯ ಸಂಚಾರ ಸ್ವಾಗತ ಸಮಿತಿಯ ಕಂಪ್ಲಿ ಗುರುರಾಜಾಚಾರ್, ಕರುಣಾಕರಶೆಟ್ಟಿ, ಉಮೇಶ್ ಶೆಟ್ಟಿ, ಅನಿಲ್ ಬಾರೆಂಗಳ್, ಶೇಷಾಚಲ್ ಸ್ವಾಗತಿಸಿದರು.
ಶಾಸಕ ಶಾಮನೂರು ಶಿವಶಂಕರಪ್ಪ ಶ್ರೀಗಳಿಗೆ ರೇಷ್ಮೆ ಶಾಲು ಹಾಕುವ ಮೂಲಕ ಆತೀಯ ಸ್ವಾಗತ ಕೋರಿದರು. ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳನ್ನು ಭವ್ಯ ರಥದಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀ ಕೃಷ್ಣ ಕಲಾ ಮಂದಿರದವರೆಗೆ ಕರೆದೊಯ್ಯಲಾಯಿತು.
ರಾತ್ರಿ 8ಕ್ಕೆ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳು ತೊಟ್ಟಿಲಪೂಜೆಯಲ್ಲಿ ಪಾಲ್ಗೊಂಡರು. ಸೋಮವಾರ ಬೆಳಗ್ಗೆ 8 ರಿಂದ 11ರ ವರೆಗೆ ಭಕ್ತರ ಮನೆಗಳಲ್ಲಿ ಪಾದಪೂಜೆ, 11.30ಕ್ಕೆ ಸಂಸ್ಥಾನಪೂಜೆಯಲ್ಲಿ ಭಾಗವಹಿಸಿ, ಆಶೀರ್ವಚನ ನೀಡುವರು. ಭಿಕ್ಷಾ, ಫಲಮಂತ್ರಾಕ್ಷತೆ ನಂತರ ಸಂಜೆ 6.3ರಿಂದ ವಿವಿಧ ಭಕ್ತರ ಮನೆಯಲ್ಲಿ ತೊಟ್ಟಿಲಪೂಜೆಯಲ್ಲಿ ಪಾಲ್ಗೊಳ್ಳುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.