ವಿಜ್ಞಾನಿಯಾಗಲು ಹೊಸತು ಹುಡುಕುವ ಸ್ವಭಾವ ಇರಲಿ


Team Udayavani, Feb 17, 2017, 1:06 PM IST

dvg2.jpg

ದಾವಣಗೆರೆ: ಇಂದು ಪ್ರತಿಯೊಂದರಲ್ಲೂ ವಿಜ್ಞಾನದ ಅಂಶ ನೋಡಬಹುದು. ವಿಜ್ಞಾನ ಇಲ್ಲದ ನಿತ್ಯ ಜೀವನವೇ ಇಲ್ಲ ಎಂದು ಐಐಎಸ್‌ಸಿ ವಿಜ್ಞಾನಿ ಡಾ| ಹರೀಶ್‌ ಭಟ್‌ ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ನಗರದ ಹೊರವಲಯದ ಶಾಮನೂರು ಬಳಿಯ ಜೈನ್‌ ವಿದ್ಯಾಲಯದ ಸಿಬಿಎಸ್‌ಸಿ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಜ್ಞಾನ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ವಿಜ್ಞಾನ ಇಲ್ಲದ ವಿಷಯವೇ ಇಲ್ಲದಂತಹ ಸ್ಥಿತಿ ನಿರ್ಮಾಣ ಆಗಿದೆ ಎಂದರು. ಮಕ್ಕಳು ಕೌತುಕದಿಂದ ವಿಜ್ಞಾನ ಅಭ್ಯಾಸದಲ್ಲಿ ತೊಡಗಬೇಕು. ಕುತೂಹಲ ಇಲ್ಲದ ವಿಜ್ಞಾನ ಅಭ್ಯಾಸ ಸಾರ್ಥಕವಾಗುವುದಿಲ್ಲ. ವಿಜ್ಞಾನಿಯಾಗಲು ಮುಖ್ಯವಾಗಿ ಹೊಸ ಹೊಸ ವಿಷಯಗಳ ಕುರಿತು ಅಧ್ಯಯನ ಮಾಡುವ, ಹೊಸತನ್ನು ಹುಡುಕುವ ಸ್ವಭಾವ ಇರಬೇಕು ಎಂದರು.

ಕೇವಲ ಇಂಜಿನಿಯರ್‌ ಇಲ್ಲವೆ ಡಾಕ್ಟರ್‌ ಹೊರತಾಗಿಯೂ ಬೇರೆ ಆಯ್ಕೆಗಳಿವೆ ಎಂದಬುದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಮನಗಾಣಬೇಕಿದೆ ಎಂದು ಅವರು ತಿಳಿಸಿದರು. ಅಗಸ್ತ ಅಂತಾರಾಷ್ಟ್ರೀಯ ಫಾಂಡೇಷನ್‌ ವತಿಯಿಂದ ನಡೆದ ಜಿಜ್ಞಾಸ ವಿಜ್ಞಾನ ವಸ್ತು ಪ್ರದರ್ಶನ- 2017ರಲ್ಲಿ ನಿರುಪಯುಕ್ತ ಪ್ಲಾಸ್ಟಿಕ್‌ನಿಂದ ಉಪಯುಕ್ತ ಇಂಧನ ತಯಾರಿಸುವ ಮಾದರಿಗೆ ಪ್ರಥಮ ಬಹುಮಾನ ಗಳಿಸಿದ ಜೈನ್‌ ವಿದ್ಯಾಲಯ ಸಿಬಿಎಸ್‌ಇ ಶಾಲೆಯ ಮಕ್ಕಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಈ ಪ್ರಯೋಗದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಗಮನ ಸೆಳೆಯಿರಿ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಈ ಪ್ರಯೋಗಕ್ಕೆ ಬೇಕಾದ ಎಲ್ಲಾ ಅನುಕೂಲಗಳನ್ನು ಮಾಡಿಕೊಡುವ ಭರವಸೆ ನೀಡಿದರು.

ಸಂವಾದ: ಭೂಮಿ ಬಳಿ ಯಾವುದೇ ಜೈವಿಕ ವಾತಾವರಣ ಇಲ್ಲ. ಆದರೂ ಭೂಮಿ ತಿರುಗುತ್ತದೆ, ಚಲಿಸುತ್ತದೆ. ಇದಕ್ಕೆ ಕಾರಣವಾಗುವ ಶಕ್ತಿ ಯಾವುದು ಎಂದು ಅಮೋಘ ವರ್ಷ ನೃಪತುಂಗ ಎಂಬ ವಿದ್ಯಾರ್ಥಿ ಪ್ರಶ್ನೆಗೆ ಹರ್ಷಚಿತ್ತರಾಗಿ ಉತ್ತರಿಸಿದ ಹರೀಶ್‌, ಇಂತಹ ಕೌತುಕಗಳೇ ಸಾಮಾನ್ಯ ವಿದ್ಯಾರ್ಥಿಯನ್ನು ವಿಜ್ಞಾನಿಯನ್ನಾಗಿ ರೂಪುಗೊಳಿಸುವುದು. ಭೂಮಿಗೆ ಚಲನಶಕ್ತಿ ಇದೆ. ನಭೋ ಮಂಡಲದಲ್ಲಿರುವ ಆಕಾಶಕಾಯಗಳ ನಡುವೆ ಗುರುತ್ವಾಕರ್ಷಣೆಯ ಬಲ ಇದೆ.

ಇದೇ ಬಲದ ಚಲನಶಕ್ತಿ ಉತ್ಪತ್ತಿಗೆ ಕಾರಣವಾಗುತ್ತದೆ ಎಂದು ಹೇಳಿದರು. ಇನ್ನು ಶಾಲೆಯ ನಿರ್ದೇಶಕಿ ಸಯೀದಾ ಖಾನ್‌, ಹೈಸ್ಕೂಲ್‌ನಲ್ಲಿ ಓದುವ ಮಕ್ಕಳು ವರ್ಷದಿಂದ ವರ್ಷಕ್ಕೆ ತಮ್ಮ ಗುಣ ಸ್ವಭಾವದಲ್ಲಿ ಬದಲಾಗಲು ಕಾರಣ ಏನು? ಎಂಬುದಾಗಿ ಪ್ರಶ್ನಿಸಿದಾಗ, ಅವರಲ್ಲಿ ಆಗುವ ಹಾರ್ಮೋನ್‌ಗಳ ಬದಲಾವಣೆಯೇ ಇದಕ್ಕೆಲ್ಲಾ ಕಾರಣ ಎಂದು ಉತ್ತರಿಸಿದರು. ಸಿಬಿಎಸ್‌ಸಿ ಶಾಲೆಯ  ಪ್ರಾಂಶುಪಾಲರಾದ ಅನಿತ ರಜಪೂತ್‌, ಇನ್ನೋರ್ವ ಪ್ರಾಂಶುಪಾಲ ಪಿ.ಎನ್‌. ಪರಮೇಶ್ವರ, ಚೇತನರಾಂ ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.