

Team Udayavani, Apr 6, 2024, 7:07 PM IST
ದಾವಣಗೆರೆ: ಚಿತ್ರದುರ್ಗ ಎಸ್ ಸಿ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಸಹೋದರ ಎಂ.ಪಿ. ದಾರಕೇಶ್ವರಯ್ಯ ಆವರಿಂದ ನಾಮಪತ್ರ ವಾಪಸ್ ತೆಗೆಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ’ಈ ವಿಚಾರವಾಗಿ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಸಹೋದರ ನಾಮಪತ್ರ ಸಲ್ಲಿಸಿರುವುದನ್ನು ಕ್ಲಿಯರ್ ಮಾಡಿಸುತ್ತೇನೆ. ಸಾಮಾಜಿಕವಾಗಿ ಅವರಿಗೆ ನ್ಯಾಯ ಕೊಡಿಸಬೇಕು. ವಾಪಸ್ ಪಡೆಯಲು ಸಹೋದರನಿಗೆ ಹೇಳುತ್ತೇನೆ. ನಮಗೆ ಸಮಾಜದಲ್ಲಿ ನಮ್ಮದೇ ಆದ ಗೌರವವಿದೆ. ಅದನ್ನು ನಾವು ಉಳಿಸಿಕೊಂಡು ಹೋಗಬೇಕೇ ವಿನಃ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ನಮಗೆ ಎಸ್ ಸಿ ಸರ್ಟಿಫಿಕೇಟ್ ಬೇಡ. ಅದರಿಂದ ರಾಜಕಾರಣ ಮಾಡುವ ಅವಶ್ಯಕತೆಯೂ ನಮಗಿಲ್ಲ. ಹಿಂದೆ ನನ್ನ ಮಗಳ ಮೇಲೆಯೂ ಆರೋಪ ಬಂದಿತ್ತು’ ಎಂದರು.
ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಹೆಸರು ಹೇಳುತ್ತಿಲ್ಲ. ಅಭ್ಯರ್ಥಿಯೊಂದಿಗೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ,”ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ನಮ್ಮಲ್ಲಿ ಯಾವುದೇ ಕಲ್ಮಷವೂ ಇಲ್ಲ. ಕ್ಷೇತ್ರದಲ್ಲಿ ನಿತ್ಯ ಶವ ಸಂಸ್ಕಾರ, ಮದುವೆ ಹೀಗೆ ಎಲ್ಲೆಡೆ ಪ್ರಚಾರ ಮಾಡುತ್ತಿದ್ದೇನೆ. ಮೋದಿ ನಾಮಬಲದಿಂದ ಗೆದ್ದು ಅವರ ಕೈಬಲ ಪಡಿಸಬೇಕಾಗಿರುವುದರಿಂದ ಮೋದಿ ಹೆಸರು ಹೇಳುತ್ತಿದ್ದೇನೆ. ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಹೆಸರು ಹೇಳಲು ನಮಗೆ ಯಾವ ಹಿಂಜರಿಕೆಯೂ ಇಲ್ಲ.ಅಭ್ಯರ್ಥಿಯೊಂದಿಗೆ ಪ್ರಚಾರಕ್ಕೆ ಶೀಘ್ರ ದಿನಾಂಕ ನಿಗದಿ ಮಾಡುತ್ತೇವೆ” ಎಂದರು.
Davanagere: ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ
Davanagere: ಹೆಬ್ಬಾಳ್ಕರ್- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್ ಖಾದರ್
Electricity: ಈ ಬಾರಿ ಲೋಡ್ ಶೆಡ್ಡಿಂಗ್ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್
Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
You seem to have an Ad Blocker on.
To continue reading, please turn it off or whitelist Udayavani.