ನೀರಿಲ್ಲದೆ ಮೀನುಗಳ ಮಾರಣಹೋಮ
Team Udayavani, Feb 13, 2017, 1:15 PM IST
ಹರಪನಹಳ್ಳಿ: ಅಂತರ್ಜಲ ಕುಸಿತದಿಂದ ನೀರು ಇಂಗಿ ಹೋದ ಹಿನ್ನೆಲೆಯಲ್ಲಿ ತಾಲೂಕಿನ ಅಲಮರಸೀಕೆರೆ ಗ್ರಾಮದ ಕೆರೆಯಲ್ಲಿ ಲಕ್ಷಾಂತರ ಮೀನುಗಳು ಸತ್ತಿದ್ದು, ಇದರಿಂದ ಹೊರಸೂಸುವ ದುರ್ವಾಸನೆಯಿಂದ ಸಾಂಕ್ರಾಮಿಕ ರೋಗದ ಭೀತಿ ಜನರನ್ನು ಕಾಡುತ್ತಿದೆ. ಕಳೆದ ಒಂದು ವಾರದಿಂದ ಅಲಮರಸೀಕೆರೆ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಮೀನು ಸಾಯುತ್ತಿವೆ.
ಇದರಿಂದ ಗ್ರಾಮದ ಜನರು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರೆ ಅಂಗನವಾಡಿ ಮಕ್ಕಳಿಗೆ ಪಾಠ ಹೇಳಿಕೊಡವುದು ಕೂಡ ಕಷ್ಟವಾಗಿದೆ. ತಾಲೂಕಿನಲ್ಲಿಯೇ ಅತಿ ಹೆಚ್ಚು ದೊಡ್ಡದಾದ ಕೆರೆಗಳಲ್ಲಿ ಅಲಮರಸೀಕೆರೆಯೂ ಒಂದಾಗಿದೆ. ಸುಮಾರು 300 ಎಕರೆ ವಿಸ್ತೀರ್ಣ ಹೊಂದಿದ್ದು, ಕಳೆದ ಎರಡು ವರ್ಷಗಳಿಂದ ಸತತವಾಗಿ ವರುಣ ಕೈಕೊಟ್ಟ ಪರಿಣಾಮ ಬರ ಅವರಿಸಿದೆ.
ಇದರಿಂದ ತಾಲೂಕಿನ ಬಹುತೇಕ ಎಲ್ಲ ಕೆರೆಗಳು ಒಣಗಿ ಹೋಗಿವೆ. ಆದರೆ, ಅಲಮರಸೀಕೆರೆ ದೊಡ್ಡದಿರುವುದರಿಂದ ಅಲ್ಪ-ಸ್ವಲ್ಪ ಮಾತ್ರ ನೀರು ಉಳಿದುಕೊಂಡಿದೆ. ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುದರಿಂದ ಉಳಿದ ಅಲ್ಪ ನೀರು ಕೂಡ ಬತ್ತಿ ಹೋಗುತ್ತುದೆ. ಹೀಗಾಗಿಯೇ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸಾವನ್ನುಪ್ಪುತ್ತಿವೆ.
ಅಲ್ಪ ಪ್ರಮಾಣದ ನೀರು ಕೂಡ ಹಚ್ಚ ಹಸಿರಿನಿಂದ ಕೂಡಿದ್ದು, ದುರ್ವಾಸನೆ ಬೀರುತ್ತಿರುವ ಪರಿಣಾಮ ಗ್ರಾಮದವರು ಕೆರೆಯ ತೂಬನ್ನು ಎತ್ತಿ ನೀರನ್ನು ಹರಿಯಲು ಬಿಟ್ಟಿದ್ದಾರೆ. ಇದರಿಂದ ಕೆರೆ ಖಾಲಿಯಾಗುತ್ತಲಿದೆ. ಆದ್ದರಿಂದ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ನೀರಿನಲ್ಲಿ ಹಾಗೂ ದಡದಲ್ಲಿ ಉದ್ದಕ್ಕೂ ಸತ್ತು ಬಿದ್ದಿವೆ.
ಇನ್ನೂ ಕೆಲವು ಮೀನುಗಳು ಸ್ವಲ್ಪ ನೀರಿನಲ್ಲಿ ಒದ್ದಾಡುತ್ತಿರುವುದು ಕಂಡು ಬಂತು. ಮೀನುಗಳು ಸತ್ತಿರುವುದರಿಂದ ದುರ್ವಾಸನೆ ಪ್ರಾರಂಭವಾಗಿ ಗ್ರಾಮಸ್ಥರು ಗ್ರಾಮದಲ್ಲಿ ವಾಸ ಮಾಡುವುದೇ ದುಸ್ತರವಾಗಿದೆ. ಕಳೆದ ಒಂದು ವಾರದಿಂದ ಮೀನುಗಳು ಸಾಯುತ್ತಲಿದ್ದು, ದುರ್ವಾಸನೆ ಆರಂಭವಾಗಿದೆ.
ಶಾಲೆಯಲ್ಲಿ ಹಾಗೂ ಅಂಗನವಾಡಿಯಲ್ಲಿ ಮಕ್ಕಳು ಕುಳಿತು ಪಾಠ ಕೇಳುವುದು ಕಷ್ಟವಾಗಿದ್ದು, ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ದಡಾರ, ಕಾಲರಾ ಪ್ರಾರಂಭವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮದ ರಾಜು, ನಾಗರಾಜ್, ವೈ. ಮಂಜುನಾಥ, ಟಿ. ಗೋಣೆಪ್ಪ ಮತ್ತಿತರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.