ಕನ್ನಡ ಸಾಹಿತ್ಯಕ್ಕೆ ಲೇಖಕಿಯರ ಕೊಡುಗೆ ಅಪಾರ


Team Udayavani, May 15, 2017, 1:07 PM IST

dvg5.jpg

ಚನ್ನಗಿರಿ: 21ನೇ ಶತಮಾನ ಭಿನ್ನವಾಗಿದ್ದು, ಸ್ತ್ರೀ ಚಳವಳಿಗಿಲ್ಲದ ಕಾಲವಾಗಿದೆ. ಮುಕ್ತವಾಗಿ ಬರೆಯಲು ಸಾಧ್ಯವಾದರೂ ಸೃಜನಶೀಲ ಸಾಹಿತ್ಯ ಯಾವುದರ ಮೇಲೂ ಬಿಂಬಿತವಾಗುತ್ತಿಲ್ಲ. ಇವುಗಳೆಲ್ಲದರ ನಡುವೆಯೂ ಆಧುನಿಕ ಕನ್ನಡ ಸಾಹಿತ್ಯಕ್ಕೆ ಲೇಖಕಿಯರ ಪಾತ್ರ-ಕೊಡುಗೆ ಅಪಾರ ಎಂದು ತಾಲೂಕು ಕಸಾಪ ಅಧ್ಯಕ್ಷ ಎಂ.ಯು ಚನ್ನಬಸಪ್ಪ ಹೇಳಿದರು. 

ಪಟ್ಟಣದ ನಿವೃತ್ತ ನೌಕರರ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಧುನಿಕ ಕನ್ನಡ ಸಾಹಿತ್ಯಕ್ಕೆ ಭದ್ರವಾದ ಅಡಿಪಾಯ ಹಾಕಿದ ಕುವೆಂಪು, ಕಾರಂತ, ಬೇಂದ್ರೆ ಮುಂತಾದವರು ಬರೆದ ಕಾಲಕ್ಕೂ ಇಂದಿನ ಯುವ ಬರಹಗಾರರು ಬರೆಯುತ್ತಿರುವ ಕಾಲಕ್ಕೂ ಇರುವ ವ್ಯತ್ಯಾಸವೇ ಇಂದಿನ ಸಾಹಿತ್ಯ ಸ್ವರೂಪವನ್ನು ನಿರ್ಧರಿಸುವಂತಾಗಿದೆ ಎಂದರು. 

ಹೊಸ ಲೇಖಕಿಯರಿಂದು ಕನ್ನಡ ಸಾಹಿತ್ಯಕ್ಕೆ ತಮ್ಮ ಶಕ್ತಿತುಂಬವ ಕೆಲಸವನ್ನು ಮಾಡುತ್ತಿದ್ದಾರೆ. ಸ್ತ್ರೀವಾದ ತುರ್ಯಾವಸ್ಥೆಗೆ ತಲುಪಿ ಉತ್ತರದಾಯಿತ್ವ ಇರಬೇಕಿಲ್ಲ ಎಂಬ ಸ್ಥಿತಿ ಮುಟ್ಟಿದೆ. ಆದರೆ, ಸಾಹಿತ್ಯದಲ್ಲಿ ಎಷ್ಟೇ ಸ್ತ್ರೀವಾದಿ ಚಿಂತನೆ ಮಾಡಿದರೂ ವಾಸ್ತವ ಪ್ರಪಂಚ ಬೇರೆಯೇ ಆಗಿದೆ. ಮಾಧ್ಯಮಗಳ ದುಷ್ಪರಿಣಾಮ ಮತ್ತು ವಿದ್ಯಾಭ್ಯಾಸದ ಕೊರತೆಯಿಂದ ಸಂಭವಿಸುತ್ತಿರುವ ಸ್ತ್ರೀಯರ ಮೇಲಿನ ದೌರ್ಜನ್ಯ ದಿನೇದಿನೇ ಜಾಸ್ತಿಯಾಗುತ್ತಿರುವುದು ಅತಂಕಕಾರಿ ಬೆಳವಣಿಗೆ.

ಇತ್ತಿಚ್ಚಿನ ದಿನಗಳಲ್ಲಿ ಲಿಂಗ ತಾರತಮ್ಯಗಳನ್ನು ಹೋಗಲಾಡಿಸಿದರೆ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಎಂದರು. ಕಾಲಚಕ್ರ ಬದಲಾದಂತೆ ಬರವಣಿಗೆಗಳಲ್ಲೂ ಬದಲಾವಣೆ ಕಂಡುಬರುತ್ತಿದೆ. ಇಂಟರ್‌ನೆಟ್‌ ಪತ್ರಿಕೆಗಳು ವರ್ತಮಾನ ಕರ್ನಾಟಕ ಇತ್ಯಾದಿ ಪತ್ರಿಕೆಗಳಲ್ಲೂ ಬ್ಲಾಗ್‌ಗಳಲ್ಲೂ, ಫೇಸ್‌ಬುಕ್‌ನಲ್ಲೂ ಒಂದು ಬಗೆಯ ಸಾಹಿತ್ಯ ಸೃಷ್ಠಿಯಾಗುತ್ತಿದೆ. 

ಅಲ್ಪಕಾಲದಲ್ಲಿ ಅತಿ ಹೆಚ್ಚು ಜನರಿಗೆ ತಲುಪುವ ಸಾಹಿತ್ಯ ಪ್ರಕ್ರಿಯೆ ನಮ್ಮ ಮುಂದೆ ಕಂಡುಬರುತ್ತಿದ್ದು, ಇದರಿಂದ ಒಳಿತು-ಕೆಡುಕಿನ ನಡುವಿನ ಅಂತರವೇ ಅಳಿಸಿ ಹೋಗಬಹುದಾದ ಅಪಾಯವೂ ಇದೆ. ಈ ವಿಚಾರಗಳ ಬಗ್ಗೆ ಚಿಂತನ-ಮಂಥನ ನಡೆಸಬೇಕಾಗಿದೆ ಎಂದರು. 

ಪ್ರಸ್ತುತ ರಾಜ್ಯದಲ್ಲಿನ ರೈತರ ಆತ್ಮಹತ್ಯೆಯ ಸರಣಿಯ ಬಗ್ಗೆ ಯೋಚಿಸಿದಾಗಲೆಲ್ಲಾ ರೈತರ ಬದುಕಿನ ಹಾಗೂ ಆತಂಕದ ಬಗ್ಗೆ ಹಿಂದೆ  ಕುವೆಂಪು ಅವರು ತಮ್ಮ ಕಥೆ ಧನ್ವಂತರಿ ಚಿಕಿತ್ಸೆ ಹಾಗೂ ನೇಗಿಲ ಯೋಗಿ ಕವಿತೆ, ಬೇಂದ್ರೆಯವರು ಅನ್ನಾವತಾರ ಕವಿತೆಗಳಲ್ಲಿ ಆ ದಿನಗಳಲ್ಲೇ ಚಿತ್ರಿಸಿದ್ದರು. ಆದರಿಂದು ರೈತನ ಬದುಕು ಆತಂಕದ ಕ್ಷಣಗಳನ್ನು ತಲುಪುವಂತಾಗಿದೆ ಎಂದು ಅತಂಕ ವ್ಯಕ್ತಪಡಿಸಿದರು.

ಸಾಹಿತಿ ಸರೋಜಾ ನಾಗರಾಜ್‌ ಅವರಿಗೆ ಈ ವೇಳೆ 2016-17ನೇ ಸಾಲಿನ ಗ್ರಾಮೀಣ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತಿ ಸರೋಜಾ ನಾಗರಾಜ್‌ ಉದ್ಘಾಟಿಸಿದರು. ಎಚ್‌. ಎಂ. ಕಾಂತರಾಜ್‌ ಉಪನ್ಯಾಸ ನೀಡಿದರು, ತಾಲೂಕು ಕಸಾಪ ಗೌರವಾಧ್ಯಕ್ಷ ಎಂ.ಬಿ. ನಾಗರಾಜ್‌, ಮಹಾಲಿಂಗಪ್ಪ ಇತತರಿದ್ದರು.  

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.