ಸಾಮೂಹಿಕ ವಿವಾಹ ಬಡವರಿಗೆ ವರದಾನ

ಸುಕ್ಷೇತ್ರ ದೇವರಗುಡ್ಡ ಬಡವರ ಹಸಿವು ನೀಗಿಸುವ ಕ್ಷೇತ್ರವಾಗಿ ಬೆಳೆಯಲಿ: ಸೋಮನಾಥ ಶಿವಾಚಾರ್ಯರು

Team Udayavani, May 13, 2019, 4:36 PM IST

13-MAY-28

ದೇವದುರ್ಗ: ದೇವರಗುಡ್ಡ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ನವಜೀವನಕ್ಕೆ ಕಾಲಿರಿಸಿದ ದಂಪತಿಗಳು.

ದೇವದುರ್ಗ: ಪ್ರತಿ ವರ್ಷ ಸಾಮೂಹಿಕ ವಿವಾಹ ಆಯೋಜಿಸುತ್ತಿರುವ ಸುಕ್ಷೇತ್ರ ದೇವರಗುಡ್ಡ ಬಡವರ ಹಸಿವು ನೀಗಿಸುವ ಕ್ಷೇತ್ರವಾಗಿ ಬೆಳೆಯಬೇಕು ಎಂದು ಶ್ರೀ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೀಪದ ದೇವರಗುಡ್ಡ ಗ್ರಾಮದ ಶಿವಯೋಗಿ ಶ್ರೀ ಶರಣ ಅಮಾತೇಶ್ವರ ದೇವಸ್ಥಾನದಲ್ಲಿ ರವಿವಾರ ಆಯೋಜಿಸಿದ್ದ 26 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಪುಣ್ಯಕ್ಷೇತ್ರದಲ್ಲಿ ಪುಣ್ಯ, ಧಾರ್ಮಿಕ ಕೆಲಸಗಳು ಆಗಾಗ ನಡೆಯುತ್ತಿರಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಸಾಮೂಹಿಕ ವಿವಾಹಗಳು ಬಡವರಿಗೆ ವರವಾಗಿವೆ. ಇಂತಹ ಕಾರ್ಯಕ್ರಮಗಳು ಇತರರಿಗೆ ಪ್ರೇರಣೆ ಆಗಬೇಕು ಎಂದು ಹೇಳಿದರು.

ವೀರಗೋಟದ ಶ್ರೀ ಅಡವಿಲಿಂಗ ಮಹಾರಾಜ ಸ್ವಾಮೀಜಿ ಮಾತನಾಡಿ, ಮಠ, ಮಂದಿರಗಳ ಮೇಲೆ ಭಕ್ತರಿಗೆ ನಂಬಿಕೆ ಬರಬೇಕು. ಆಧುನಿಕ ಯುಗದಲ್ಲಿ ಯುವಕರಿಗೆ ಮೊಬೈಲ್ ಮೇಲಿರುವ ಆಸಕ್ತಿ ಮಠ, ಮಾನ್ಯಗಳು ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಇಲ್ಲ ಎಂದು ವಿಷಾದಿಸಿದ ಅವರು, ನಂಬಿಕಯೇ ಮಾನವನ ಜೀವನ ಬದಲಾವಣೆಗೆ ಪ್ರೇರಣಾ ಶಕ್ತಿ ಎಂದರು.

ಉಚಿತ ಸಾಮೂಹಿಕ ವಿವಾಹ ಹಿನ್ನೆಲೆ ಸುಕ್ಷೇತ್ರ ದೇವರಗುಡ್ಡ ಗ್ರಾಮದ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಡಾ| ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಖಂಡಯ್ಯ ತಾತ ದೇವರಗುಡ್ಡ, ಶ್ರೀ ಕಪಿಲ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ನಿಜಲಿಂಗ ಸ್ವಾಮೀಜಿ, ಶ್ರೀ ಪ್ರಭು ಪಂಡಿತಾರಾಧ್ಯರು, ಶ್ರೀ ಶಿವಕುಮಾರ ಸ್ವಾಮೀಜಿ, ನಿಂಗಣ್ಣ ತಾತಾ ಗೊಂದೇನೂರು, ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸದಾಶಿವಯ್ಯ ತಾತಾ ಮುಂಡರಗಿ, ಗಂಗಪ್ಪಯ್ಯ ತಾತಾ ಮಾನಸಗಲ್, ಜಹಿರುದ್ಧೀನ್‌ ಪಾಷಾ ತಾತಾ, ಗುರು ಬಸವರಾಜ ಗುರುಗಳು ನಿಜಾನಂದ ಆಶ್ರಮ ಮಂದಕಲ್, ವಿ.ವಸಂತಕೃಷ್ಣ ಅರ್ಚಕ ಕನಕಗಿರಿ, ಸಿಪಿಐ ಮಹ್ಮದ್‌ ಶಿರಾಜ್‌, ಪಿಎಸ್‌ಐ ಮಂಜುನಾಥ, ಶಿಕ್ಷಣ ಸಂಯೋಜಕ ಸುರೇಶ ಪಾಟೀಲ, ಶಾಂತಕುಮಾರ, ತಿರುಪತಿ ಸೂಗೂರು, ವೇಣುಮೂರ್ತಿ ಚನ್ನಯ್ಯ ತಾತಾ, ಶರಣಪ್ಪ ತಾತಾ ಸೇರಿ ಸಾವಿರಾರು ಭಕ್ತರು ಇದ್ದರು.

ಅಚ್ಚುಕಟ್ಟು ವ್ಯವಸ್ಥೆ: ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪಟ್ಟಣ ಸೇರಿ ಬೇರೆ ಬೇರೆ ತಾಲೂಕಿನಿಂದ ಆಗಮಿಸಿದ ಭಕ್ತರು ಭಾಗವಹಿಸಿದ್ದರು. ಬೆಳಗ್ಗೆ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಪುರುಷರು, ಮಹಿಳೆಯರಿಗೆ ಊಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಎಲ್ಲೆಂದರಲ್ಲಿ ನೀರಿನ ಟ್ಯಾಂಕರ್‌ಗಳನ್ನು ನಿಲ್ಲಿಸಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿತ್ತು. ಭಕ್ತರಿಗೆ ಯಾವುದೇ ಕೊರತೆ ಆಗದಂತೆ ಅಚ್ಚುಕಟ್ಟು ವ್ಯವಸ್ಥೆ ಮಾಡಲಾಗಿತ್ತು. ವಾಹನ, ಬೈಕ್‌ ನಿಲುಗಡೆಗೆ ಆರೇಳು ಎಕರೆ ಜಾಗದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಸಾವಿರಾರು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಬಿಸಿಲಿಗೆ ತತ್ತರ: ಬೇಸಿಗೆ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿದೆ. ವೇದಿಕೆ ಕಾರ್ಯಕ್ರಮದಲ್ಲಿ ಏರ್‌ಕೂಲರ್‌ ವ್ಯವಸ್ಥೆ ಮಾಡಿದ್ದರೂ ಬಿಸಿ ಗಾಳಿಗೆ ವೇದಿಕೆಯಲ್ಲಿದ್ದ ಬಹುತೇಕ ಗಣ್ಯರು, ಸ್ವಾಮೀಜಿಗಳು ಆಮಂತ್ರಣ ಪತ್ರಿಕೆಯಿಂದ ಗಾಳಿ ಬೀಸಿಕೊಳ್ಳುತ್ತಿದ್ದರು. ಕೆಳ ಭಾಗದಲ್ಲಿ ಕುಳಿತ ಭಕ್ತರು ಸೆಖೆಗೆ ಮೈಯೆಲ್ಲ ನೀರಾಗಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.