ಏಳು ಜನ ಶಿಕ್ಷಕರಿಗೆ ಸೋಂಕು ಹರಡಿದ ಶಿಕ್ಷಕಿ!: ಧಾರವಾಡದಲ್ಲಿ 121 ಸೋಂಕಿತರು


Team Udayavani, Jun 14, 2020, 9:12 PM IST

ಏಳು ಜನ ಶಿಕ್ಷಕರಿಗೆ ಸೋಂಕು ಹರಡಿದ ಶಿಕ್ಷಕಿ!: ಧಾರವಾಡದಲ್ಲಿ 121 ಸೋಂಕಿತರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಧಾರವಾಡ: ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 10 ಜನರಲ್ಲಿ ಕೋವಿಡ್ 19 ಸೋಂಕು ಧೃಡಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 121 ಕ್ಕೆಏರಿಕೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ಶಿಕ್ಷಕಿಗೆ ಸೋಂಕು ಧೃಡಪಟ್ಟಿತ್ತು ಮತ್ತು ಬಳಿಕ ಅವರ ಪತಿಯಲ್ಲೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

ಇದೀಗ ಈ ಶಿಕ್ಷಕಿಯು ಸಂಪರ್ಕಕ್ಕೆ ಬಂದಿದ್ದ ಇನ್ನುಳಿದ ಏಳು ಜನ ಶಿಕ್ಷಕರಲ್ಲೂ ರವಿವಾರದಂದು ಸೋಂಕು ರವಿವಾರ ಧೃಡಪಟ್ಟಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ನಿವಾಸಿಯಾದ 31 ವರ್ಷ ಶಿಕ್ಷಕಿಯನ್ನು (ಪಿ-5970) ತಪಾಸಣೆಗೆ ಒಳಪಡಿಸಿದಾಗ ಜೂ.11 ರಂದು ಸೋಂಕು ಇರುವುದು ಧೃಡಪಟ್ಟಿತ್ತು. ಆ ಬಳಿಕ ಪಿ-5970 ಸಂಪರ್ಕದಿಂದ ಅದೇ ಕಾಲನಿಯ ನಿವಾಸಿಯಾದ 34 ವರ್ಷದ ಅವರ ಪತಿಗೂ (ಪಿ-6260) ಸೋಂಕು ತಗುಲಿದ್ದು, ಅದು ಜೂ.12ಕ್ಕೆ ಧೃಡಪಟ್ಟಿತ್ತು.

ಇದೀಗ ಪಿ-5970 ಸಂಪರ್ಕದಿಂದಲೇ ಬರೋಬ್ಬರಿ ಏಳು ಜನರಿಗೆ ಸೋಂಕು ಧೃಡಪಟ್ಟಿದೆ. ಸೋಂಕಿತ ಪಿ-5970 ಮಹಿಳೆಯು ಖಾಸಗಿಯ ಅನುದಾನ ರಹಿತ ಹೈಸ್ಕೂಲ್‌ನ ಶಿಕ್ಷಕಿಯಾಗಿದ್ದರು. ಈ ನಡುವೆ ಶಿಕ್ಷಕಿಯು ಜೂ.8ರಂದು ಹೈಸ್ಕೂಲ್‌ಗೆ ಹೋಗಿ ಬಂದಿದ್ದಾರೆ. ಅವರ ಸಂಪರ್ಕಕ್ಕೆ ಬಂದ ಹೈಸ್ಕೂಲ್‌ನ 20ಕ್ಕೂ ಹೆಚ್ಚು ಜನರನ್ನು ತಪಾಸಣೆಗೆ ಒಳಪಡಿಸಿದ್ದು, ಪೈಕಿ ರವಿವಾರ ಏಳು ಜನ ಶಿಕ್ಷಕರಿಗೆ ಸೋಂಕು ಇರುವುದು ಧೃಡಪಟ್ಟಿದೆ.

54 ವರ್ಷದ ಪುರುಷ (ಪಿ-6833), 30 ವರ್ಷದ ಮಹಿಳೆ (ಪಿ-6834), 46 ವರ್ಷದ ಮಹಿಳೆ (ಪಿ-6835), 49 ವರ್ಷದ ಮಹಿಳೆ (ಪಿ-6836), 26 ವರ್ಷದ ಮಹಿಳೆ (ಪಿ-6837), 39 ವರ್ಷದ ಮಹಿಳೆ (ಪಿ-6841), 35 ವರ್ಷದ ಮಹಿಳೆ (ಪಿ-6842) ಇವರೆಲ್ಲರಲ್ಲಿ ಕೋವಿಡ್ 19 ಸೋಂಕಿರುವುದು ದೃಢಪಟ್ಟಿದೆ.

ಇನ್ನು, ನವಲಗುಂದ ತಾಲೂಕಿನ ಮೊರಬ ಗ್ರಾಮದ ಸೋಂಕಿತ ಪಿ-6222 (59 ವರ್ಷದ ಪುರುಷ) ಸಂಪರ್ಕದಿಂದ 8 ವರ್ಷದ ಬಾಲಕನಿಗೂ (ಪಿ-6838) ಸೋಂಕು ಧೃಡಪಟ್ಟಿದೆ. ಇನ್ನುಳಿದಂತೆ ತೀವ್ರ ಉಸಿರಾಟ ಸಮಸ್ಯೆಯಿಂದ 20 ವರ್ಷದ ಪಿ-6839 ಹಾಗೂ ಪಿ-6840 ಯುವಕರಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.