2017ರಲ್ಲೇ ವಿಧಾನಸಭೆಗೆ ಚುನಾವಣೆ?


Team Udayavani, Jan 31, 2017, 12:33 PM IST

hub2.jpg

ಹುಬ್ಬಳ್ಳಿ: ರಾಜ್ಯದಲ್ಲಿನ ರಾಜಕೀಯ ಸ್ಥಿತಿ ಗಮನಿಸಿದರೆ 2018ಕ್ಕೆ ಅಲ್ಲ 2017ಕ್ಕೇನೆ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇಲ್ಲದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭವಿಷ್ಯ ನುಡಿದರು. ಡಾ| ಪಾಟೀಲ ಪುಟ್ಟಪ್ಪ ವಿಚಾರ ವೇದಿಕೆ, ಅವ್ವ ಸೇವಾ ಟ್ರಸ್ಟ್‌ ಆಯೋಜಿಸಿದ್ದ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರ 98ನೇ ಜನ್ಮದಿನ ಸಮಾರಂಭದಲ್ಲಿ ಎರಡು ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. 

ಇಡೀ ದೇಶದ ರಾಜಕಾರಣವೇ ಗೊಂದಲ ಗೂಡಾಗಿದೆ. ರಾಜ್ಯದಲ್ಲಿ ರಾಜಕೀಯ ಸ್ಥಿತಿ ದಿನಕ್ಕೊಂದು ರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲವನ್ನು ಗಮನಿಸಿದರೆ ಇದೇ ವರ್ಷದಲ್ಲಿ ಚುನಾವಣೆ ಎದುರಾದರೂ ಅಚ್ಚರಿ ಇಲ್ಲ ಎಂದೆನಿಸುತ್ತಿದೆ ಎಂದರು. ನನಗೆ ಹಳೇ ಮೈಸೂರು, ಮುಂಬೈ ಕರ್ನಾಟಕ, ಹೈದರಾಬಾದ ಕರ್ನಾಟಕ ಬೇರೆ ಎಂಬ ಭಾವನೆ ಇಲ್ಲವೇ ಇಲ್ಲ. ಸಂಕುಚಿತ ಭಾವನೆ ಹೊಂದಿದರೆ ರಾಜ್ಯದ ಆರ್ಥಿಕ-ಸಾಮಾಜಿಕ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ನನ್ನ ಕುಟುಂಬ ಹಾಗೂ ಜೆಡಿಎಸ್‌ಗೆ ಉತ್ತರ ಕರ್ನಾಟಕದ ವಿರೋಧಿ ಪಟ್ಟ ಕಟ್ಟಲಾಗಿದೆ. ಈ ಭಾಗಕ್ಕೆ ಯಾರ್ಯಾರು ಏನು ಮಾಡಿದ್ದಾರೆ ಎಂಬ ಸತ್ಯ ಹೊರ ಬರಲಿದೆ. ಏನೆಲ್ಲ ಅಪಪ್ರಚಾರ ಹಾಗೂ ವ್ಯಂಗ್ಯ ಮಾಡುತ್ತಿದ್ದಾರೋ ಅವರಿಗೆಲ್ಲ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದರು. ಡಾ| ಪಾಟೀಲ ಪುಟ್ಟಪ್ಪ ಅವರಿಗೆ ನನ್ನನ್ನು ಹೋಲಿಸುವುದು ಸರಿಯಲ್ಲ.

ಅವರ ಮೇರು ವ್ಯಕ್ತಿತ್ವಕ್ಕೆ ನಾನು ಸರಿಸಾಟಿ ಆಗಲಾರೆ. 98ನೇ ವಯಸ್ಸಿನಲ್ಲೂ ಯುವಕರೇ ತಲೆತಗ್ಗಿಸುವ ರೀತಿಯಲ್ಲಿ ಅವರ ದಿನಚರಿ ಆರಂಭವಾಗುತ್ತದೆ. ರಾಜ್ಯದ ನೆಲ-ಜಲ, ಭಾಷೆಗೆ ಧಕ್ಕೆ ಬಂದಾಗಲೆಲ್ಲ ಸದಾ ಎಚ್ಚರಿಸುವ ಹಾಗೂ ಅಧಿಕಾರದಲ್ಲಿದ್ದವರ ಕಿವಿ ಹಿಂಡುವ ಕಾರ್ಯವನ್ನು ಪಾಪು ಮಾಡುತ್ತಲೇ ಬಂದಿದ್ದಾರೆ. ಅಂತಹವರ ಮಾರ್ಗದರ್ಶನ ರಾಜ್ಯಕ್ಕೆ  ಅಗತ್ಯವಿದೆ ಎಂದರು.

ಜನಪ್ರತಿನಿಧಿಗಳ ಜಡತ್ವ: ಗದಗ ಡಾ| ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ಮಹದಾಯಿ ಸಮಸ್ಯೆ ಇತ್ಯರ್ಥ ಆಗದಿರುವುದಕ್ಕೆ ಈ ಭಾಗದ ಜನಪ್ರತಿನಿಧಿಗಳು ಜಡತ್ವವೇ ಕಾರಣ. ನೌಕರಿ, ಬಡ್ತಿ, ವರ್ಗಾವಣೆಯೇ ಅವರಿಗೆ ಆಸಕ್ತಿ ಇದೆಯಾದರೂ, ನಾಡಿನ ನೆಲ, ಜಲ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಮಹದಾಯಿ ವಿಷಯವಾಗಿ ಕೇಂದ್ರ ಸರಕಾರ ಉದಾಸೀನತೆ ಮುಂದುವರಿದಿದೆ. 

ಮಧ್ಯಂತರ ಅರ್ಜಿಯೂ ನ್ಯಾಯಾಧಿಕರಣದಲ್ಲಿ ತಿರಸ್ಕೃತಗೊಂಡಿದ್ದು, ರಾಜಕಾರಣ ಎಂಬುದು ತಮಾಸೆಯಂತಾಗಿದೆ ಎಂದರು. ಮಹದಾಯಿ ಬಗ್ಗೆ ಮತ್ತೂಮ್ಮೆ ಪ್ರಧಾನಿ ಬಳಿ ಹೋಗಿ ಒತ್ತಡ ತರುವಂತೆ ದೇವೇಗೌಡರು ಯತ್ನಿಸಬೇಕು. ಪ್ರಧಾನಿಯಿಂದ ಮಾತ್ರ ಸಮಸ್ಯೆ ಇತ್ಯರ್ಥ ಸಾಧ್ಯ ಎಂದು ಸ್ವಾಮೀಜಿ ಹೇಳಿದರು. 

ಉತ್ತರ ಕರ್ನಾಟಕದಲ್ಲಿ ನಾಲ್ವರು ಮುಖ್ಯಮಂತ್ರಿಗಳಾಗಿ ಹೋದರೂ ಎಚ್‌.ಡಿ. ಕುಮಾರಸ್ವಾಮಿ ಬೆಳಗಾವಿಯಲ್ಲಿ ಸುವರ್ಣಸೌಧಕ್ಕೆಶಿಲಾನ್ಯಾಸ  ಹಾಕಿದ್ದರು ಎಂಬುದನ್ನು ಮರೆಯಬಾರದು ಎಂದರು. ಸಾಹಿತಿ ಹಂ.ಪ.ನಾಗರಾಜಯ್ಯ ಮಾತನಾಡಿ, ಪಾಪು ಮಾತು ಕಠೊರವಾದರೂ ಅಂತಃ ಕರಣ ಮೃದುವಾಗಿದೆ.

ಕರ್ನಾಟಕ ಕಾಳಜಿ, ನೆಲ-ಜಲ, ಭಾಷೆಗೆ ಧಕ್ಕೆಯಾದರೆ ಮೊದಲ ಧ್ವನಿ ಮೊಳಗುವುದೇ ಪಾಪು ಅವರದ್ದಾಗಿದೆ ಎಂದರು. ಸಾಹಿತಿ ಶಾಂತಿನಾಥ ದಿಬ್ಬದ ಮಾತನಾಡಿ, ಪಾಪು ಹಾಗೂ ದೇವೇಗೌಡರು ನಮ್ಮ ಸಾಂಸ್ಕೃತಿಕ ನಾಯಕರು. ಪಾಪು ಅವರ ಕೃತಿಗಳ ಕುರಿತಾಗಿ ಸಾಹಿತಿಗಳು, ವಿಮರ್ಶಕರು, ಸಂಶೋಧಕರು ಗಂಭೀರವಾಗಿ ಪರಿಗಣಿಸದಿರುವುದು ನೋವಿನ ಸಂಗತಿ ಎಂದರು. 

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಕನ್ನಡಕ್ಕೆ ಹೋರಾಡುವ ಏಕಮೇವ ವ್ಯಕ್ತಿ ಪಾಪು ಆಗಿದ್ದಾರೆ. ನಾಡು ಕಂಡ ಶ್ರೇಷ್ಠ ವ್ಯಕ್ತಿ ಅವರು. ಅವರ 100ನೇ ಜನ್ಮದಿನವನ್ನು ಸಹ ಅವ್ವ ಸೇವಾ ಟ್ರಸ್ಟ್‌ ಅಡಿಯಲ್ಲಿ ಆಚರಿಸಲಾಗುವುದು ಎಂದರು.  ಇದೇ ಸಂದರ್ಭದಲ್ಲಿ ಪಾಪು 98: ದಣಿವರಿಯದ  ಚೇತನ,  ನಮ್ಮ ಗುರುಗಳು ಕೃತಿ ಬಿಡುಗಡೆಯಾದವು. ಡಾ| ಜಿ.ಆರ್‌.ತಮಗೊಂಡ ಇನ್ನಿತರರು ಇದ್ದರು.  

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

Hubli: Siddaramaiah must resign if respect remains: Basavaraja Bommai

Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.