ಮಹಿಳೆಯರ ಸಾಧನೆ ಅಪಾರ
Team Udayavani, Apr 10, 2017, 3:01 PM IST
ಹುಬ್ಬಳ್ಳಿ: ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ದಾಪುಗಾಲು ಇರಿಸಿದ್ದು, ಅವರಿಗೆ ಅಸಾಧ್ಯವಾದ ಕೆಲಸ ಯಾವುದು ಇಲ್ಲ ಎಂದು ಮೂರುಸಾವಿರ ಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಜೆ.ಸಿ. ನಗರದ ಅಕ್ಕನ ಬಳಗದಲ್ಲಿ ಶರಣೆ ಅಕ್ಕಮಹಾದೇವಿ ಜಯಂತಿ ಹಾಗೂ ಅಕ್ಕನ ಬಳಗದ 79ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಕಲೆ, ಇತಿಹಾಸ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಅಪಾರ ಸಾಧನೆ ಮಾಡಿದ್ದಾರೆ. ದೇಶದ ಪ್ರತಿಷ್ಠಿತ ಎಂದೇ ಕರೆಯುವ ಇಸ್ರೋದಲ್ಲೂ ಹಲವು ಮಹಿಳೆಯರು ವಿಜ್ಞಾನಿಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ತಾಯಿಯಂದಿರುವ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಕೂಡಾ ತಮ್ಮ ಮಾತೃ ಸ್ಥಾನ, ಗೃಹಿಣಿ ಸ್ಥಾನವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ.
ಉದ್ಯೋಗದ ವಿಷಯದಲ್ಲಿ ಮುಂದು ಅದೇ ರೀತಿ ಸಂಸಾರದಲ್ಲೂ ಮುಂದೆ ಮಹಿಳೆಯೇ ಇರುತ್ತಾಳೆ. ಮನೆಯಲ್ಲಿ ಮಕ್ಕಳ ಲಾಲನೆ-ಪಾಲನೆ, ಸಂಸಾರ ಸರಿದೂಗಿಸಿಕೊಂಡು ಹೋಗುವುದು, ಉತ್ತಮ ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಮಹಿಳೆ ಪಾರುಪತ್ಯ ಸಾಧಿಸಿದ್ದಾಳೆ ಎಂದರು.
ಈ ಹಿಂದೆ ವಿರಕ್ತ ಎಂಬುದು ಕೇವಲ ಪುರುಷರಿಗೆ ಸೀಮಿತವಾಗಿತ್ತು. ಆದರೆ ಅದನ್ನು ಹೊಡೆದುಹಾಕಿದ್ದು ಅಕ್ಕಮಹಾದೇವಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಎಲ್ಲ ವೈರಾಗ್ಯಗಳನ್ನು ತೊರೆದು ಅಕ್ಕಮಹಾದೇವಿ ವಿರಕ್ತವನ್ನು ಅಪ್ಪಿಕೊಂಡರು. ಅಷ್ಟೇ ಅಲ್ಲದೇ ಕನ್ನಡ ನಾಡಿನ ಮೊದಲ ಕವಯತ್ರಿ ಅಕ್ಕಮಹಾದೇವಿ ಎಂದರು.
ಇದೇ ಸಂದರ್ಭದಲ್ಲಿ ಮಂಗಲಾ ಕುಪ್ಪಸ್ತ ಅವರಿಗೆ ಆದರ್ಶ ಗೃಹಿಣಿ ಎಂದು ಮತ್ತು ಸಹಾಯಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮೌನಾ ನರವಣಿ, ಶಂಕುತಲಾ ಶೆಟ್ಟರ, ಪತ್ರಕರ್ತ ಸುಶೀಲೇಂದ್ರ ಕುಂದರಗಿ, ಸುವರ್ಣಾ ಅಬ್ಬಿಗೇರಿ ಅವರನ್ನು ಸನ್ಮಾನಿಸಲಾಯಿತು.
ನಂತರ ಪತ್ರಕರ್ತ ಸುಶೀಲೇಂದ್ರ ಕುಂದರಗಿ, ಸುವರ್ಣಾ ಅಬ್ಬಿಗೇರಿ, ಶಂಕುತಲಾ ಶೆಟ್ಟರ, ಮೌನಾ ನರವಣಿ ಮಾತನಾಡಿದರು. ಮಂಗಲಾ ನರವಣಿ ಸ್ವಾಗತಿಸಿದರು. ಸುನೀಲಾ ಬ್ಯಾಹಟ್ಟಿ ನಿರೂಪಿಸಿದರು. ಶಾಂತಾ ಹೊಸಕೋಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.