ಕಲೆಯೊಂದಿಗೆ ಸಾಹಿತ್ಯ ಬೆರೆತರೆ ಜೀವನ ಅರ್ಥಪೂರ್ಣ
Team Udayavani, Feb 15, 2017, 2:44 PM IST
ಧಾರವಾಡ: ಕಲೆಯೊಂದಿಗೆ ಸಾಹಿತ್ಯ ಬೆರೆತರೆ ಜೀವನ ಅರ್ಥ ಪೂರ್ಣವಾಗುವುದು ಎಂದು ವಿಮರ್ಶಕ ಡಾ| ಗಿರಡ್ಡಿ ಗೋವಿಂದರಾಜ್ ಹೇಳಿದರು. ನಗರದ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದ ಕಲಾವಿದ ವಿ.ಡಿ. ಬಡಿಗೇರರ ಪ್ರಕೃತಿ ಕಲಾ ಸಂಭ್ರಮ ಹಾಗೂ ಜಲವರ್ಣ ಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಒಬ್ಬೊಬ್ಬ ಕವಿಗೆ ಒಂದೊಂದು ವಿಮಶಾìತ್ಮಕ ಭಾವಗಳು ಹುಟ್ಟಿಕೊಳ್ಳಲು ಸಾಧ್ಯ. ಚಿತ್ರಕಲೆ ಮತ್ತು ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಲಾವಿದ ಮೊದಲು ವೀಕ್ಷಿಸುವ ಗುಣಗಳನ್ನು ಬೆಳೆಸಿಕೊಂಡು ವಿವಿಧ ವರ್ಣಗಳಿಂದ ಅಭಿವ್ಯಕ್ತ ಪಡಿಸುತ್ತಾನೆ. ಅದು ಅವನ ಹೃದಯ ಭಾಷೆ.
ಹಾಗೆಯೇ ಒಬ್ಬ ಸಾಹಿತಿ ಪ್ರಕೃತಿಯ ಸೊಬಗಿನ ಸಂಭ್ರಮ ಕಾವ್ಯ, ಗದ್ಯ ಹಾಗೂ ಲೇಖನ ಮೂಲಕ ಅಭಿವ್ಯಕ್ತಿ ವ್ಯಕ್ತಪಡಿಸಲು ಶಕ್ತನಾಗುತ್ತಾನೆ. ಕಲೆಯೊಂದಿಗೆ ಸಾಹಿತ್ಯವೂ ಒಂದುಗೂಡಿದಾಗ ಅದರಲ್ಲಿರುವ ಆನಂದ, ಸುಖವೇ ಬೇರೆಯಾಗಿರುತ್ತದೆ ಎಂದರು. ಅತಿಥಿಯಾಗಿದ್ದ ಕವಿವಿ ಗಾಂಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ|ಶಿವಾನಂದ ಶೆಟ್ಟರ್ ಮಾತನಾಡಿ, ಇತ್ತೀಚೆಗೆ ಜಲವರ್ಣದಲ್ಲಿ ರಚಿಸುವ ಕಲಾವಿದರ ಸಂಖ್ಯೆ ಕ್ಷೀಣಿಸುತ್ತಿದೆ.
ಆದರೆ ಹಿರಿಯ ಕಲಾವಿದ ವಿ.ಡಿ. ಬಡಿಗೇರ ಎಂಬಂತ್ತರ ಹೊಸ್ತಿಲಲ್ಲಿದ್ದರೂ ಅವರ ಉತ್ಸಾಹ ಬತ್ತಿಲ್ಲ. ಇವರು ಎಲ್ಲ ಯುವ ಕಲಾವಿದರಿಗೆ ಆದರ್ಶವಾಗಿದ್ದಾರೆ ಎಂದರು. ಕಲಾವಿದ ವಿ.ಡಿ. ಬಡಿಗೇರ ಅವರು, ತಮ್ಮ 34 ಜಲವರ್ಣ ಕಲಾಕೃತಿಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಎಂ.ಆರ್. ಬಾಳಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಈಶ್ವರ ಜೋಶಿ, ಡಾ|ವಿರೂಪಾಕ್ಷ ಬಡಿಗೇರ, ಗಂಗಾಧರ ಪತ್ತಾರ, ನವಮಿ ಬಡಿಗೇರ, ಪ್ರಾಚಾರ್ಯ ಎಸ್.ಕೆ. ಪತ್ತಾರ, ಬಸವರಾಜ ಕುರಿ ಇತರರು ಇದ್ದರು. ನಂತರ ಜಲವರ್ಣ ಕಲಾಕೃತಿಗಳ ಪ್ರದರ್ಶನ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.