ಅನ್ನದಾತರ ಬತ್ತಳಿಕೆಗೆ ಅಸ್ತ್ರಗಳ ಬಲ!

ಕೃಷಿ ಮೇಳದಲ್ಲಿ ಬ್ರಹ್ಮಾಸ್ತ್ರ- ನೀಮಾಸ್ತ್ರ -ಅಗ್ನಿ ಅಸ್ತ್ರ ; ನೈಸರ್ಗಿಕ ಕೃಷಿಯಲ್ಲಿ ಖುಷಿಯ ವಿಚಾರ

Team Udayavani, Sep 20, 2022, 2:40 PM IST

13

ಧಾರವಾಡ: ಕಾಳುಮೆಣಸಿನ ಅಸ್ತ್ರ, ನೀಮಾಸ್ತ್ರ, ಅಗ್ನಿಅಸ್ತ್ರ, ಬ್ರಹ್ಮಾಸ್ತ್ರಗಳು ಕೃಷಿ ಮೇಳದಲ್ಲಿ ರೈತರ ಬತ್ತಳಿಕೆ ಸೇರುತ್ತಿವೆ. ಕೀಟ-ರೋಗ ನಿರ್ವಹಣೆಗಾಗಿ “ಕೃಷಿ ವಿವಿ’ ನಿರ್ಮಿತ, ನೈಸರ್ಗಿಕ ವಸ್ತುಗಳಿಂದಲೇ ತಯಾರಿಸಲ್ಪಟ್ಟ ಕೀಟ ಹಾಗೂ ರೋಗನಾಶಕ ಅಸ್ತ್ರಗಳು ಬಲ ತುಂಬುತ್ತಿವೆ!

ಹೌದು, ಕೃಷಿ ಮೇಳದಲ್ಲಿ ರೈತಾಪಿ ವರ್ಗದ ಜನ ಯಾವ ಅಸ್ತ್ರಗಳಿವು ಎಂಬ ಕುತೂಹಲದಿಂದಲೇ ಇತ್ತ ಕಣ್ಣಾಡಿಸುತ್ತಿದ್ದು, ಈ ಅಸ್ತ್ರಗಳ ತಯಾರಿಕೆ, ಲಾಭದ ಬಗ್ಗೆ ಕೇಳಿ ಮತ್ತಷ್ಟು ಖುಷಿ ಆಗುತ್ತಿದ್ದಾರೆ. ದುಬಾರಿ ಬೆಲೆ ತೆತ್ತು ಕೀಟನಾಶಕ ಹೊಡೆದರೂ ಕೀಟ-ರೋಗ ಬಾಧೆ ಹತೋಟಿಗೆ ಬರದ ಸನ್ನಿವೇಶದಲ್ಲಿ ಈ ಅಸ್ತ್ರಗಳು ಹೆಚ್ಚು ಗಮನ ಸೆಳೆದಿವೆ.

ಸಗಣಿ, ನೀರು, ಬೇವಿನ ಎಲೆ, ಗೋಮೂತ್ರದಿಂದ ಎಲ್ಲ ಬಗೆಯ ರಸಹೀರುವ ಕೀಟಗಳನ್ನು ನಿಯಂತ್ರಿಸುವ ನೀಮಾಸ್ತ್ರ; ಆಕಳ ಗಂಜಲು, ಬೇವಿನ ಎಲೆ, ಹಸಿಮೆಣಸಿನಕಾಯಿ, ಜವಾರಿ ಬಳ್ಳೊಳ್ಳಿ, ತಂಬಾನಿಂದ ಮಾಡಿದ ಅಗ್ನಿಅಸ್ತ್ರ; ಬೇವು, ಹೊಂಗೆ ಎಲೆ, ಯಕ್ಕಿ ಎಲೆ, ಬಿಳಿ ಲಕ್ಕಿ, ಸೀತಾಫಲ ಎಲೆಯಿಂದ ಎಲ್ಲ ಬಗೆಯ ಎಲೆ ತಿನ್ನುವ ಕೀಟಗಳನ್ನು ನಿಯಂತ್ರಿಸಬಹುದಾದ ಬ್ರಹ್ಮಾಸ್ತ್ರ ಸಿದ್ಧಪಡಿಸಬಹುದಾಗಿದೆ.

ಈ ಮೂರೂ ಅಸ್ತ್ರಗಳಿಗೆ ಪರ್ಯಾಯವಾಗಿ ಎಲ್ಲ ಬಗೆಯ ಎಲೆ ತಿನ್ನುವ, ಕಾಯಿ ಮತ್ತು ಕಾಂಡ ಕೊರಕ ಕೀಟಗಳ ನಿಯಂತ್ರಣಕ್ಕಾಗಿ ಬೇವು, ಹೊಂಗೆ ಎಲೆ, ಯಕ್ಕಿ ಎಲೆ, ಬಿಳಿ ಲಕ್ಕಿ, ಸೀತಾಫಲ ಎಲೆ, ಲಂಟಾನ ಎಲೆ, ಪೇರಲ ಎಲೆ, ಔಡಲ ಎಲೆ, ದತ್ತೂರಿ ಎಲೆ, ಮಾವು, ಗಂಜಲ, ಬಳ್ಳೊಳ್ಳಿ, ತಂಬಾಕು, ಹಸಿ ಮಣಸಿನಕಾಯಿ, ಶುಂಠಿ ಪುಡಿಯಿಂದ “ದಶಪರ್ಣಿ’ ಎಂಬ ಕೀಟನಾಶಕವನ್ನೂ ತಯಾರಿಸಬಹುದಾಗಿದೆ.

ಇದಲ್ಲದೇ ದೇಸಿ ಆಕಳ ಹಾಲು, ಒಣಶುಂಠಿ ಪುಡಿಯಿಂದ ಶಿಲೀಂಧ್ರ ಹಾಗೂ ಬ್ಯಾಕ್ಟೀರಿಯಾ ನಾಶ ಮಾಡುವ ಶುಂಠಿಅಸ್ತ್ರ ಅಥವಾ ಕಾಳು ಮೆಣಸಿನ ಅಸ್ತ್ರ ಸಿದ್ಧಪಡಿಸಬಹುದು. ಇನ್ನು ಹುಳಿಮಜ್ಜಿಗೆಯಿಂದ ವಿವಿಧ ಬಗೆಯ ಬೆಳೆಗಳ ಶೀಲಿಂದ್ರ ಹಾಗೂ ಬ್ಯಾಕ್ಟೀರಿಯಾ ರೋಗಗಳನ್ನು ಸಹ ನಿಯಂತ್ರಿಬಹುದು.

ರೈತರ ಸೆಳೆತ: ರಾಸಾಯನಿಕ ಮುಕ್ತವಾಗಿ ಕೀಟ-ರೋಗ ಬಾಧೆ ನಿಯಂತ್ರಣಕ್ಕಾಗಿ ನಾನಾ ಬಗೆಯ ಅಸ್ತ್ರಗಳ ಮಾದರಿ, ಅವುಗಳ ತಯಾರಿಕೆ, ಬಳಕೆ ಮಾಡುವ ವಿಧಾನಗಳ ಬಗ್ಗೆ ಸಾಕಷ್ಟು ರೈತರು ಮಾಹಿತಿ ಪಡೆಯುತ್ತಿದ್ದಾರೆ. ಇದಲ್ಲದೇ ಬೆಳೆವರ್ಧಕ, ರೋಗಬಾಧೆ ನಿಯಂತ್ರಿಸಬಹುದಾದ ಸಪ್ತಧಾನ್ಯ ಕಷಾಯ, ಜೀವಾಮೃತ, ಘನ ಜೀವಾಮೃತ, ಬೀಜಾಮೃತ, ಕಾಕುಳ್ಳಿನ ಅಥವಾ ಘನಬೀಜಾಮೃತದ ಕಷಾಯಗಳ ಮಾದರಿಗಳೂ ಗಮನ ಸೆಳೆದಿವೆ. ನೈಸರ್ಗಿಕ ಕೃಷಿಯ ಬದಲಾವಣೆಗೆ ರೈತರು ಎಷ್ಟು ಬೇಗ ಹೊಂದಿಕೊಳ್ಳುವರೋ ಅಷ್ಟೇ ಲಾಭ ಗಳಿಸಲಿದ್ದಾರೆ ಎಂಬ ಮಾಹಿತಿ ಕೃಷಿ ಮೇಳದಲ್ಲಿ ನೀಡಲಾಗುತ್ತಿದೆ. ನೈಸರ್ಗಿಕ ಕೃಷಿ ಕ್ರಮಗಳ ಸಮಗ್ರ ಮಾಹಿತಿ ಇಲ್ಲಿದೆ.

ನೈಸರ್ಗಿಕ ಪರಿಕರ ಬಳಕೆಯಿಂದ ಕಾಳಿನ ತೂಕ, ಹೊಳಪು ಹೆಚ್ಚಾಗುತ್ತದೆ. ಮಣ್ಣಿನ ಸವಕಳಿ ತಡೆ, ನೀರು ಸಂರಕ್ಷಣೆ, ಹೆಚ್ಚು ಇಳುವರಿ, ರೋಗಗಳ ನಿಯಂತ್ರಣ, ಕಳೆ ನಿಯಂತ್ರಣ ಹೀಗೆ ಹತ್ತಾರು ಉಪಯೋಗಗಳಿವೆ. ನಿಸರ್ಗದತ ಸಾಮಗ್ರಿಗಳಿಂದ ತಯಾರಿಸಿದ ಔಷಧಗಳನ್ನು ಸಿಂಪಡಣೆ ಮಾಡಿ ಹೆಚ್ಚಿನ ಇಳುವರಿ ಪಡೆಯುವ ಮೂಲಕ ಆದಾಯ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ. ಹೀಗಾಗಿ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಇವುಗಳ ತಯಾರಿಕೆ ವಿಧಾನಗಳ ಪ್ರಕಟಣೆಯ ಪುಸ್ತಕಗಳ ಮಾರಾಟವೂ ಜೋರಾಗಿದೆ. -ಡಾ| ಮಂಜುನಾಥ ಎಸ್‌.ಬಿ., ಕೃಷಿ ವಿವಿ ನೈಸರ್ಗಿಕ ಕೃಷಿ ಯೋಜನೆ ಮುಂದಾಳು

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.