ಹರಿದು ಬಂದ ನೆರವಿನ ಮಹಾಪೂರ

•ಹಳ್ಳಿಗಳಿಂದಲೂ ಬಂದವು ರೊಟ್ಟಿ•ಸಂತ್ರಸ್ತರಿನ್ನು ಗಟ್ಟಿ•ಕೆಲವು ಕಡೆ ರಾಜಕಾರಣಿಗಳ ಭೇಟಿ

Team Udayavani, Aug 11, 2019, 10:53 AM IST

hubali-tdy-3

ಧಾರವಾಡ: ಮುಗದುಮ್ಮ ಕಲ್ಯಾಣ ಮಂಟಪದ ಸಂತ್ರಸ್ತರಿಗೆ ಮನೆಗೆ ಕೊಂಡೊಯ್ಯಲು ನೀಡಿರುವ ಅಗತ್ಯ ವಸ್ತುಗಳು.

ಧಾರವಾಡ: ಅವರು ಚಹಾ ಕೇಳಿದರೆ ಜನರು ಹಾಲು ಕೊಡುತ್ತಿದ್ದಾರೆ, ಅವರು ಅನ್ನ ಕೇಳಿದರೆ ಜನ ಬಿರಿಯಾನಿ ಕೊಡುತ್ತಿದ್ದಾರೆ, ಅವರು ನೀರು ಎಂದರೆ ಸಾಕು ಬಿಸ್ಲೆರಿ ಬಾಟಲ್ಗಳನ್ನು ಮಡಿಲಿಗೆ ಹಾಕುತ್ತಿದ್ದಾರೆ, ಕೆಮ್ಮಿದರೆ ಔಷಧಿಯ ಕಿಟ್ ಅವರ ತೊಡೆ ಮೇಲಿರುತ್ತದೆ, ಉಂಡು ಮನೆಗೆ ಕಟ್ಟಿಕೊಳ್ಳಲು ಬೇಕಾಗುವಷ್ಟು ಅಗತ್ಯ ವಸ್ತುಗಳು ಬಂದು ಬೀಳುತ್ತಿವೆ.

ಜಿಲ್ಲೆಯ ನೆರೆ ಸಂತ್ರಸ್ತರಿಗೆ ಒಂದೇ ದಿನದಲ್ಲಿ ಜಿಲ್ಲೆಯ ಜನರು ಸ್ಪಂದಿಸಿದ ಪರಿ ಇದು. ಇಲ್ಲಿನ ಮುಗದುಮ್ಮ ಕಲ್ಯಾಣ ಮಂಟಪದಲ್ಲಿ ಅಳ್ನಾವರ ಪಟ್ಟಣದಿಂದ ಸ್ಥಳಾಂತರ ಮಾಡಿರುವ ಸಾವಿರಕ್ಕೂ ಅಧಿಕ ನಿರಾಶ್ರಿತರಿಗೆ ಕಳೆದ ಎರಡು ದಿನಗಳಿಂದ ಅಗತ್ಯ ವಸ್ತುಗಳನ್ನು ಸಂಘ-ಸಂಸ್ಥೆಗಳು ಮತ್ತು ಜನ ಸಾಮಾನ್ಯರೇ ಸ್ವಯಂಪ್ರೇರಣೆಯಿಂದ ತಂದು ಕೊಡುತ್ತಿದ್ದಾರೆ.

ಇನ್ನು ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ, ನಿಗದಿ ಗ್ರಾಮಗಳು ಸೇರಿದಂತೆ ಅನೇಕ ಗ್ರಾಮಸ್ಥರು ಸ್ವಯಂಪ್ರೇರಣೆಯಿಂದ ತಮ್ಮೂರುಗಳಲ್ಲಿ ಶನಿವಾರ ರೊಟ್ಟಿ ಸಂಗ್ರಹಿಸಿ ಅವುಗಳನ್ನು ಸಂತ್ರಸ್ತರಿಗೆ ತಲುಪಿಸಿದರು.

ನಿರಾಶ್ರಿತರು ಇಲ್ಲಿಗೆ ಬಂದುಳಿದ 24 ಗಂಟೆಯಲ್ಲಿ ಎರಡು ಲಾರಿಯಷ್ಟು ಅಗತ್ಯ ವಸ್ತುಗಳು ಜಮಾವಣೆಯಾಗಿವೆ. ಅಕ್ಕಿ, ಬೇಳೆ, ತುಪ್ಪ, ಎಣ್ಣೆ ಸೇರಿದಂತೆ ದಿನಸಿ ವಸ್ತುಗಳನ್ನು ಸಾರ್ವಜನಿಕರು ನೆರೆ ಸಂತ್ರಸ್ತರಿಗೆ ತಂದು ಒಪ್ಪಿಸುತ್ತಿದ್ದಾರೆ. ಈ ಕೇಂದ್ರದ ಉಸ್ತುವಾರಿಯನ್ನು ಧಾರವಾಡ ಉಪ ವಿಭಾಗಾಧಿಕಾರಿ ಮಹ್ಮದ್‌ ಜುಬೇದ್‌ ನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ ಇಲ್ಲಿಂದ ಕೆಲವಷ್ಟು ಜನರನ್ನು ಮರಳಿ ಅವರ ಊರುಗಳಿಗೆ ಸ್ಥಳಾಂತರಿಸುವುದಾಗಿ ‘ಉದಯವಾಣಿ’ಗೆ ತಿಳಿಸಿದರು.

ನಟ ಯಶ್‌ ಸಹಾಯಹಸ್ತ: ಜಿಲ್ಲೆಯ ನೆರೆ ಸಂತ್ರಸ್ತರಿಗೆ ಅವಶ್ಯಕ ವಸ್ತುಗಳ ದೇಣಿಗೆ ಸ್ವೀಕಾರಕ್ಕಾಗಿ ಜಿಲ್ಲಾಡಳಿತವು ಅಕ್ಕನ ಬಳಗದ ಕಲ್ಯಾಣಮಂಟಪದಲ್ಲಿ ಆರಂಭಿಸಿರುವ ಕೇಂದ್ರಕ್ಕೆ ಅಗತ್ಯ ವಸ್ತುಗಳು ಹರಿದು ಬರುತ್ತಿದೆ.

ನಟ ಯಶ್‌ ಅವರ ಯಶೋಮಾರ್ಗ ಫೌಂಡೇಶನ್‌ದಿಂದ ಅಕ್ಕಿ, ಎಣ್ಣೆ, ಬ್ಲಾಂಕೇಟ್, ಚಾಪೆ, ಚಾದರ, ಸ್ಯಾನೆಟರಿ ನ್ಯಾಪ್ಕಿನ್‌, ಗೋಧಿ ಹಿಟ್ಟು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳು ಎರಡು ಲಾರಿಗಳಲ್ಲಿ ಬಂದಿದ್ದು, ಅವುಗಳನ್ನು ಕೇಂದ್ರಕ್ಕೆ ಹಸ್ತಾಂತರ ಮಾಡಲಾಯಿತು. ಶ್ರೀ ಬಾಲಾಜಿ ಟ್ರೇಡಿಂಗ್‌ ಕಂಪನಿ ಮಾಲೀಕ ಮಂಜುನಾಥ ಹರ್ಲಾಪುರ ಅವರು ಐದು ಲಕ್ಷ ಮೊತ್ತದ ದಿನಸಿ, ಕಾಳುಕಡಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಇದೇ ರೀತಿ ಮನಸೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಿಂದ ಯುವಕ ಮಂಡಳ, ಸಂಘ-ಸಂಸ್ಥೆಗಳು ಅಗತ್ಯ ವಸ್ತುಗಳನ್ನು ತಂದು ಕೇಂದ್ರಕ್ಕೆ ಹಸ್ತಾಂತರ ಮಾಡುತ್ತಿದ್ದಾರೆ.

ರೋಟರಿ ಕ್ಲಬ್‌ ಧಾರವಾಡ ಸೆಂಟ್ರಲ್ ಹಾಗೂ ಧಾರವಾಡ ಬಾಂಡ್ಸ್‌ನೊಂದಿಗೆ ತಾಲೂಕಿನ ಹಾರೋಬೆಳವಡಿ ಗ್ರಾಮಕ್ಕೆ ತೆರಳಿ ಅಗತ್ಯ ವಸ್ತು ಪೂರೈಸುವುದರ ಜೊತೆಗೆ ಗ್ರಾಮಸ್ಥರ ಆರೋಗ್ಯ ಹಿತದೃಷ್ಟಿಯಿಂದ ರೆಡ್‌ ಕ್ರಾಸ್‌ ವತಿಯಿಂದ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇದಲ್ಲದೇ ಗಾಂಧೀಚೌಕ ಗಜಾನನ ಉತ್ಸವ ಸಮಿತಿ ವತಿಯಿಂದ ಹಾರೋಬೆಳವಡಿ ಗ್ರಾಮಸ್ಥರಿಗೆ ಚಾಪೆ ಹಾಗೂ ಬ್ಲಾಂಕೆಟ್‌ಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.