ಲಾಕ್‌ಡೌನ್‌ ನಡುವೆ ಪರ್ಯಾಯ ವ್ಯಾಪಾರ!

ಬದುಕಿನ ಬಂಡಿ ಸಾಗಿಸಲು ಅನಿವಾರ್ಯ­, ಮನೆ ಬಾಗಿಲಿಗೇ ಸರಕು-ಸೇವೆ ಸೌಕರ್ಯ

Team Udayavani, Jun 14, 2021, 4:28 PM IST

dwd1a

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಹೊಸ ಮೊಬೈಲ್‌, ಲ್ಯಾಪ್‌ಟಾಪ್‌ ಬೇಕೆ? ಅಥವಾ ರಿಪೇರಿ ಆಗಬೇಕೆ? ಇಲೆಕ್ಟ್ರಾನಿಕ್‌ ವಸ್ತುಗಳು ಬೇಕೆ? ಸೀರೆ, ಬಟ್ಟೆ ಬೇಕೆ? ಬಂಗಾರ ಆಭರಣ ಕೊಳ್ಳಬೇಕೆ? ನಮ್ಮನ್ನು ಸಂಪರ್ಕಿಸಿ ನಿಮಗೆ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ!

ಕೋವಿಡ್‌ 2ನೇ ಅಲೆಯ ನಿಯಂತ್ರಣಕ್ಕೆ ಒಂದುವರೆ ತಿಂಗಳಿಂದ ಜಾರಿ ಮಾಡಿರುವ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮೊಬೈಲ್‌, ಇಲೆಕ್ಟ್ರಾನಿಕ್‌, ಬಟ್ಟೆ ಹಾಗೂ ಇತರ ಅಂಗಡಿಗಳ ವರ್ತಕರು ವ್ಯಾಪಾರಕ್ಕಾಗಿ ಕಂಡುಕೊಂಡ ಪರ್ಯಾಯ ಮಾರ್ಗವಿದು. ಲಾಕ್‌ಡೌನ್‌ ಕಾರಣ ಜಿಲ್ಲಾದ್ಯಂತ ಇರುವ ಚಿನ್ನ-ಬೆಳ್ಳಿ ಅಂಗಡಿ, ಸೀರೆ, ಬಟ್ಟೆ, ಮೊಬೈಲ್‌ ಅಂಗಡಿಗಳು ಬಾಗಿಲು ಮುಚ್ಚಿವೆ. ಆದರೂ ಗ್ರಾಹಕರನ್ನು ಸೆಳೆಯಲು ಮೊಬೈಲ್‌, ಆನ್‌ಲೈನ್‌ ಬಳಕೆಗೆ ವರ್ತಕರು ಮುಂದಾಗಿದ್ದಾರೆ.

ಅಂಗಡಿ, ಶೋರೂಂ ಶಟರ್ಸ್‌ ಬೀಗ ಹಾಕಿದ್ದರೂ ಅದರ ಮುಂದೆ ಎದ್ದುಕಾಣುವಂತೆ ಮೊಬೈಲ್‌ ನಂಬರ್‌ ಹಾಕಿ, ಗ್ರಾಹಕರೇ ಒಂದು ಕರೆಮಾಡಿ ನಿಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ಎಂದು ಬರೆದು ಅಂಟಿಸಿದ್ದಾರೆ. ಇದಲ್ಲದೇ ಹೊಸ ಖರೀದಿಯ ಜತೆಗೆ ಹಳೆಯ ಮೊಬೈಲ್‌, ಲ್ಯಾಪ್‌ಟಾಪ್‌ ರಿಪೇರಿ ಕಾರ್ಯ ಸಾಗಿದೆ. ಆದರೆ ರಿಪೇರಿಗಾಗಿ ನಿಗದಿಗಿಂತ ಅ ಧಿಕ ಹಣ ಆಕರಣೆ ಮಾಡಲಾಗುತ್ತಿದ್ದು, ತುರ್ತು ಇದ್ದವರು ದುಪ್ಪಟ್ಟು ನೀಡುವಂತಾಗಿದೆ.

ಮನೆಯಲಿಯೇ ಸಂಗ್ರಹ

ಬಹುತೇಕ ವ್ಯಾಪಾರಿಗಳು ಅಂಗಡಿಯಲ್ಲಿದ್ದ ವಸ್ತುಗಳನ್ನು ಮನೆಗೆ ಕೊಂಡೊಯ್ದು ಸಂಗ್ರಹ ಮಾಡಿಕೊಂಡಿದ್ದಾರೆ. ನಿತ್ಯ ಅಗತ್ಯ ಸಾಮಗ್ರಿ ಖರೀದಿಸಲು ಇರುವ ಸಮಯದಲ್ಲಿಯೇ ಬೇಡಿಕೆ ಸಲ್ಲಿಸುವ ಗ್ರಾಹಕರಿಗೆ ಮೊಬೈಲ್‌ನಲ್ಲೋ, ಸಾಮಾಜಿಕ ಜಾಲತಾಣದ ಮೂಲಕವೋ ವ್ಯಾಪಾರ ಕುದುರಿಸಿಕೊಂಡು ಅವರ ಮನೆಗೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದಕ್ಕೆ ಉತ್ತಮ ಸ್ಪಂದನೆ ಲಭಿಸಿದೆ.

ಇನ್ನು ಕಳೆದ 2-3 ದಿನಗಳ ಹಿಂದೆ ಟಿಕಾರೆ ರಸ್ತೆಯ ಕೆಲ ಮೊಬೈಲ್‌ ಅಂಗಡಿಗಳ ಕಳ್ಳತನವೂ ಆಗಿದೆ. ಲಕ್ಷಾಂತರ ಮೌಲ್ಯದ ಮೊಬೈಲ್‌ಗ‌ಳನ್ನು ಕಳ್ಳರು ದೋಚಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಮೊಬೈಲ್‌ ಅಂಗಡಿ ಮಾಲೀಕರು ಅಂಗಡಿಗಳಲ್ಲಿನ ಮೊಬೈಲ್‌ಗ‌ಳನ್ನು ಸುರಕ್ಷಿತ ಸ್ಥಳಕ್ಕೆ ಹಸ್ತಾಂತರ ಮಾಡಿದ್ದು, ಕೆಲವರು ಮನೆಗೆ ತಂದಿಟ್ಟುಕೊಂಡಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.