ಜೀವನದಲ್ಲಿ ವಿಶ್ವಾಸ ಕಳೆದುಕೊಂಡರೆ ಸಾಧನೆ ಅಸಾಧ್ಯ: ನಟ ಅಮೀರ್‌ಖಾನ್‌


Team Udayavani, Feb 12, 2021, 1:13 PM IST

Ameer Khan

ಹುಬ್ಬಳ್ಳಿ: ಜೀವನದಲ್ಲಿ ಕಲಿಕೆಯಲ್ಲಿ ತೊಡಗಿದರೆ ಮಾತ್ರ ಹೊಸತನ್ನು ತಿಳಿದುಕೊಳ್ಳಲು ಸಾಧ್ಯ. ವಿಶ್ವಾಸ ಕಳೆದುಕೊಂಡರೆ ಸಾಧನೆ ಅಸಾಧ್ಯ. ಮಾಡುವ ಕಾರ್ಯದಲ್ಲಿ ಒಂದು ಹೊಸತು ಇರುತ್ತದೆ ಎನ್ನುವ ಭರವಸೆಯೇ ನೀರಿನ ಕುರಿತು ಮಾಡುತ್ತಿರುವ ಕಾರ್ಯ ಯಶಸ್ವಿಯಾಗಲು ಕಾರಣವಾಯಿತು ಎಂದು ಬಾಲಿವುಡ್‌ ನಟ ಹಾಗೂ ಪಾನಿ ಫೌಂಡೇಶನ್‌ ಸಂಸ್ಥಾಪಕ ಅಮೀರ್‌ಖಾನ್‌ ಹೇಳಿದರು.

ದೇಶಪಾಂಡೆ ಫೌಂಡೇಶನ್‌ ವತಿಯಿಂದ ಗುರುವಾರ ಆಯೋಜಿಸಿದ್ದ “ಗ್ರಾಮೀಣ ಪ್ರದೇಶದ ಜನರ  ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ’ ವೆಬಿನಾರ್‌ನಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕಾರ್ಯವನ್ನು ಗುರಿ ಮುಟ್ಟುವ ಉದ್ದೇಶದಿಂದಲೇ ಆರಂಭಿಸಬೇಕು. ಯಶಸ್ಸು ಪಡೆಯದಿದ್ದರೆ ಅದರಿಂದ ಹೊಸತೊಂದನ್ನು ಕಲಿತಿರುತ್ತೇವೆ. ಸರಕಾರ ಅಥವಾ ಒಂದು ಎನ್‌ ಜಿಒದಿಂದ ಪರಿವರ್ತನೆ ಅಸಾಧ್ಯ.  ಜನರ ಸಹಕಾರ, ಪಾಲ್ಗೊಳ್ಳುವಿಕೆ ಇದ್ದರೆ ಮಾತ್ರ ಯಾವುದಾದರೂ ಒಂದು ಯೋಜನೆ ಯಶಸ್ವಿಯಾಗಲು ಸಾಧ್ಯವಾಗುತ್ತದೆ.

ಪಾನಿ ಫೌಂಡೇಶನ್‌ ಆರಂಭಿಸಿದ ಕಾರ್ಯಕ್ಕೆ ಜನ ಬೆಂಬಲ ದೊರೆಯಿತು. ನೀರಿನ ಅಭಾವ, ಮುಂದೆ ಆಗಲಿರುವ ಸಮಸ್ಯೆಯನ್ನು ಮನಮುಟ್ಟುವಂತೆ ತಿಳಿಸುವಲ್ಲಿ ಯಶಸ್ವಿಯಾದೆವು. ಜನರಿಗೆ ಅದು ವಾಸ್ತವ ಎನ್ನಿಸಿ ಪಾನಿಯೊಂದಿಗೆ ಕೈ ಜೋಡಿಸಿದರು. ಮೊದಲ ಹಂತದಲ್ಲಿ ಜನರ ಮನಸ್ಸು ಪರಿವರ್ತನೆಯಲ್ಲಿ ದೊರೆತ ಯಶಸ್ಸು ನಂತರದ 45 ದಿನಗಳ ಶ್ರಮದಾನ ಬಹಳಷ್ಟು ಪರಿಣಾಮಕಾರಿಯಾಗಿತ್ತು. ಪಶ್ಚಿಮ ಮಹಾರಾಷ್ಟ್ರ, ವಿದರ್ಭ ಮತ್ತು ಮರಾಠವಾಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸ್ವಯಂ ಪ್ರೇರಣೆಯಿಂದ ಕಠಿಣ ಪರಿಶ್ರಮ ಫಲ ನೀಡಿತು.

ಇದನ್ನೂ ಓದಿ :ಸಕಲರ ಆರೋಗ್ಯಕ್ಕೆ ಅಗ್ಗದ ಡಯಾಲಿಸಿಸ್  

ಮೊದಲ ವರ್ಷದಿಂದಲೇ ಪಾನಿಯ ಕಾರ್ಯಕ್ಕೆ ಬಹಳಷ್ಟು ಯಶಸ್ಸು ಲಭಿಸಿತು. ಸತ್ಯಮೇವ ಜಯತೆ ಯೋಜನೆ ಬಹಳಷ್ಟು ದೊಡ್ಡ ಮಟ್ಟದಲ್ಲಿ ಯಶಸ್ಸು ಲಭಿಸಿತು. ಪ್ರತ್ಯೇಕವಾಗಿ ಒಂದು ವಿಷಯ ತಿಳಿದುಕೊಂಡು ಅದರ ಬಗ್ಗೆಯೇ ಕಾರ್ಯಕ್ರಮ ನಡೆಸಿದವು. ತಳಮಟ್ಟದಿಂದ ಕೆಲಸ ಮಾಡಿದ ಪರಿಣಾಮ ಗ್ರಾಮೀಣ ಪ್ರದೇಶಗಳ ಜನರನ್ನು ತಲುಪಲು ಸಾಧ್ಯವಾಯಿತು. ಜನರೊಂದಿಗೆ ಸಂಪರ್ಕ ಬೆಳೆಸುವುದು, ಸ್ಪೂರ್ತಿ ಹೊಂದುವಂತೆ ಮಾಡಲು ಸಂಪರ್ಕ ಕಲ್ಪಿಸುವುದು ನನ್ನ ಮುಖ್ಯ ಕೆಲಸವಾಗಿತ್ತು. ನೀರಿನ ಮಹತ್ವದ ಬಗ್ಗೆ ಜನಾಂದೋಲನ ರೂಪಿಸಲಾಯಿತು. ಸಮಸ್ಯೆಯನ್ನು ವೈಜ್ಞಾನಿಕ ಅಧ್ಯಯನ  ಮಾಡಿದೆವು ಎಂದು ಪಾನಿ ಫೌಂಡೇಶನ್‌ ಕಾರ್ಯದ ಕುರಿತು ವಿವರಿಸಿದರು.

ದೇಶಪಾಂಡೆ ಫೌಂಡೇಶನ್‌ ಸಂಸ್ಥಾಪಕ ಗುರುರಾಜ ದೇಶಪಾಂಡೆ ಮಾತನಾಡಿ, ಜನ ನಿಶ್ಚಿತ ಆದಾಯಕ್ಕೆ  ಸೀಮಿತರಾಗಿರುವ ಕಾರಣ ಬದಲಾವಣೆಗೆ ಬೇಗ ಹೊಂದಿಕೊಳ್ಳುವುದಿಲ್ಲ. ಇನ್ನೊಂದು ಕಾರ್ಯ ಇರುವುದನ್ನು ಕಳೆದು ಹಾಕುತ್ತದೆ ಎನ್ನುವ ಭಯ ಅವರಲ್ಲಿರುತ್ತದೆ. ಆದರೆ ಕೆಲವರು ಇದನ್ನು ಮೀರಿ  ಧೈರ್ಯದಿಂದ ಮುನ್ನುಗ್ಗಿ ಯಶಸ್ಸು ಕಾಣುತ್ತಾರೆ. ಏನಾದರು ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಗ್ರಾಮಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು  ಹಮ್ಮಿಕೊಂಡಿದ್ದೇವೆ. ಎಸ್‌ಬಿಐ, ಎಚ್‌ ಡಿಎಫ್‌ಸಿ ಸಹಯೋಗದಲ್ಲಿ ಮಾಡುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಪಾನಿ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.