ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಲು ಕೆ.ರಘು ಸಲಹೆ


Team Udayavani, Jul 7, 2018, 5:04 PM IST

7-july-18.jpg

ಹುಬ್ಬಳ್ಳಿ: ಲೆಕ್ಕಪರಿಶೋಧಕರು ವೃತ್ತಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಂಡರೆ ಮಾತ್ರ ಅವಕಾಶ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಮಾಜಿ ಅಧ್ಯಕ್ಷ ಕೆ.ರಘು ಹೇಳಿದರು. ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಹುಬ್ಬಳ್ಳಿ ಶಾಖೆಯ ಎರಡು ದಿನಗಳ ವಾರ್ಷಿಕ ಸಮ್ಮೇಳನ ‘ಜ್ಞಾನ ಸಿಂಧು’ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಲೆಕ್ಕಪರಿಶೋಧನೆ ವೃತ್ತಿಯ ಭವಿಷ್ಯ ಉಜ್ವಲವಾಗಿದೆ. ಅವಕಾಶ ಸದ್ಬಳಕೆಗೆ ಹೊಸ ತಂತ್ರಜ್ಞಾನ ಮುಖ್ಯವಾಗಿದೆ. ಲೆಕ್ಕಪರಿಶೋಧಕರು ಹೊಸ ತಂತ್ರಜ್ಞಾನಕ್ಕೆ ಸುಲಭವಾಗಿ ಹೊಂದಿಕೊಳ್ಳುವುದಿಲ್ಲ ಎಂಬ ದೂರಿದ್ದು, ನಾವು ಹೊಸತನಕ್ಕೆ ಒಗ್ಗಿಕೊಳ್ಳದಿದ್ದರೆ ಸ್ಪರ್ಧೆಯಲ್ಲಿ ಉಳಿಯಲು ಸಾಧ್ಯವಿಲ್ಲ. ಸರ್ವರ್‌ ಗಳಲ್ಲಿ ಎಲ್ಲ ಮಾಹಿತಿ ಸಂಗ್ರಹ ಹಳತಾಗಿದೆ. ಕ್ಲೌಡ್  ಅಕೌಂಟಿಂಗ್‌ ತಿಳಿಯುವುದು ಅತ್ಯಗತ್ಯ ಎಂದರು. ವಿಶ್ಲೇಷಣಾತ್ಮಕತೆಗೆ (ಅನಾಲಿಟಿಕ್ಸ್‌) ಅಗಾಧ ಬೇಡಿಕೆಯಿದ್ದು, ಅದನ್ನು ನಿರ್ಲಕ್ಷಿಸುವ ಮೂಲಕ ನಾವು ಹಲವಾರು ಅವಕಾಶ ಕಳೆದುಕೊಳ್ಳುತ್ತಿದ್ದೇವೆ. ಕೃತಕ ಬುದ್ಧಿಮತ್ತೆ ತಿಳಿಯುವುದು ಕೂಡಾ ಅಗತ್ಯವಾಗಿದೆ ಎಂದರು.

ಮುಂದಿನ ಕೆಲ ವರ್ಷಗಳಲ್ಲಿ ಇಂಟರ್‌ ನೆಟ್‌ ತಂತ್ರಜ್ಞಾನ ಹಳತಾಗಲಿದೆ. ಸದ್ಯ ಭವಿಷ್ಯದಲ್ಲಿ ಬ್ಲಾಕ್‌ ಚೈನ್‌ ತಂತ್ರಜ್ಞಾನ ಬರಲಿದೆ. ಮಾಹಿತಿ ಬ್ಲಾಕ್‌ಗಳಲ್ಲಿ ಸಂಗ್ರಹಗೊಳ್ಳಲಿದೆ. ಇದರಿಂದ ಸಮಯ ಉಳಿತಾಯ ಮಾಡಬಹುದಾಗಿದೆಯಲ್ಲದೇ ಸೈಬರ್‌ ದಾಳಿ ತಡೆಯುವ ದಿಸೆಯಲ್ಲಿ ಇದು ಪೂರಕವಾಗಿದೆ. ವೃತ್ತಿಯ ಗುಣಮಟ್ಟ ಹೆಚ್ಚಿಸುವಲ್ಲಿ ರೋಬೊಟಿಕ್ಸ್‌ ನೆರವಾಗಲಿದೆ ಎಂದರು.

ಐಸಿಎಐ ಮಾಜಿ ಅಧ್ಯಕ್ಷ ಸುನೀಲ್‌ ತಲಾಟಿ ಮಾತನಾಡಿ, ಜಿಎಸ್‌ಟಿ ಅನುಷ್ಠಾನಗೊಂಡು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೆಕ್ಕಪರಿಶೋಧಕರು ತಮ್ಮ ಕಾರ್ಯವೈಖರಿಯನ್ನು ಪರಾಮರ್ಶಿಸಿಕೊಳ್ಳುವುದು ಅವಶ್ಯಕವಾಗಿದೆ. ದೇಶದಲ್ಲಿ 1,25,000 ಲೆಕ್ಕಪರಿಶೋಧಕರಿದ್ದು, ಬೇಡಿಕೆ ಹೆಚ್ಚಾಗುತ್ತಿದೆ ಎಂದರು. ರಿಯಲ್‌ ಎಸ್ಟೇಟ್‌ ಕ್ಷೇತ್ರಕ್ಕೆ ನಿಯಂತ್ರಣ ಕಾಯ್ದೆ ತಂದಿದ್ದರಿಂದ ಲೆಕ್ಕಪರಿಶೋಧಕರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಜಾಗತಿಕ ಮಟ್ಟದ ಅವಕಾಶ ಪಡೆಯುವ ದಿಸೆಯಲ್ಲಿ ನಾವು ಕಾರ್ಯೋನ್ಮುಖರಾಗಬೇಕೆಂದರು.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಚೇರ್ಮನ್‌ ಎಸ್‌. ರವೀಂದ್ರನ್‌ ಮಾತನಾಡಿ, ಬ್ಯಾಂಕ್‌ಗಳ ಶ್ರೇಯೋಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರ ಪಾತ್ರ ಪ್ರಮುಖವಾಗಿದೆ. ಜಿಎಸ್‌ಟಿಯಿಂದಾಗಿ ಲೆಕ್ಕಪರಿಶೋಧಕರ ಅವಶ್ಯಕತೆ ಹೆಚ್ಚಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉದ್ಯಮಿ ಬಸಂತಕುಮಾರ ಪಾಟೀಲ ಮಾತನಾಡಿ, ಹುಬ್ಬಳ್ಳಿಯ ಕೋರ್ಟ್‌ ವೃತ್ತದ ಸಮೀಪ ನಾನು ನಿರ್ಮಿಸುತ್ತಿರುವ ಮಾಲ್‌ನಲ್ಲಿ ಒಂದು ಸುಸಜ್ಜಿತ ಮಹಡಿಯನ್ನು ಲೆಕ್ಕಪರಿಶೋಧಕರಿಗಾಗಿ ಮೀಸಲಾಗಿಟ್ಟಿದ್ದು, ಲೆಕ್ಕಪರಿಶೋಧಕರು ಇಲ್ಲಿ ತಮ್ಮ ಕಚೇರಿ ಮಾಡಿಕೊಳ್ಳಬಹುದಾಗಿದೆ ಎಂದು ನುಡಿದರು. ರಾಘವೇಂದ್ರ ಜೋಶಿ, ಸುಭಾಸ ಪಾಟೀಲ, ಗುರುಮೂರ್ತಿ ಬಿ.ಎಂ, ವಿಘ್ನೇಶ್ವರ ಗಾಂವಕರ, ಎಸ್‌.ಡಿ.ಓಸ್ತವಾಲ್‌ ಮೊದಲಾದವರಿದ್ದರು.

ಬ್ಯಾಂಕ್‌ಗಳಲ್ಲಿ ಹಣಕಾಸು ಅವ್ಯವಹಾರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಿಎನ್‌ಬಿ, ಸತ್ಯಂ ಹಗರಣಗಳು ಇದಕ್ಕೆ ಉದಾಹರಣೆಗಳಾಗಿವೆ. ಇವುಗಳನ್ನು ತಡೆಯುವಲ್ಲಿ ಲೆಕ್ಕಪರಿಶೋಧಕರ ಪಾತ್ರ ಮುಖ್ಯವಾಗಿದೆ. ಲೆಕ್ಕಪತ್ರದಲ್ಲಿ ಅಪರಾ ತಪರಾ ತಡೆಯುವ ನಿಟ್ಟಿನಲ್ಲಿ ಲೆಕ್ಕಪರಿಶೋಧಕರು ಫ್ರಾಡ್‌ ಡಿಟೆಕ್ಷನ್‌ ವಿಷಯದಲ್ಲಿ ಪರಿಣಿತಿ ಹೊಂದುವುದು ಅವಶ್ಯ ಎಂದು ಐಸಿಎಐ ಮಾಜಿ ಅಧ್ಯಕ್ಷ ಕೆ.ರಘು ಹೇಳಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.