![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 14, 2022, 5:59 PM IST
ಧಾರವಾಡ: ಕೆನರಾ ಬ್ಯಾಂಕ್ ಪ್ರಾಯೋಜಿತ ಪ್ರಮುಖ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಒಂದಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಟಲ್ ಪಿಂಚಣಿ ಯೋಜನೆ ನೋಂದಣಿಯಡಿ ತೋರಿದ ಅತ್ಯುತ್ತಮ ಸಾಧನೆಗಾಗಿ ಕೇಂದ್ರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ನೀಡುವ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಆರು ಪ್ರಶಸ್ತಿಗಳನ್ನು ಪಡೆದಿದೆ.
ಚೆನ್ನೈಯಲ್ಲಿ ಶುಕ್ರವಾರ ನಡೆದ ಶೃಂಗಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಪಿ ಗೋಪಿಕೃಷ್ಣ ಅವರು ಪಿಂಚಣಿ ನಿಧಿ ಪ್ರಾಧಿಕಾರದ ಅಧ್ಯಕ್ಷ ಸುಪ್ರತಿಮ್ ಬಂಡೋಪಾಧ್ಯಾಯ ಅವರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಪಿ.ಗೋಪಿಕೃಷ್ಣ, ಅಟಲ್ ಪಿಂಚಣಿ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ 60 ವರ್ಷಗಳ ನಂತರ ಪೂರ್ವ ನಿರ್ಧರಿತ ಪಿಂಚಣಿ ಪಡೆಯಲು ಅತ್ಯಂತ ಸುರಕ್ಷಿತ ಯೋಜನೆಯಾಗಿದೆ. ಇಲ್ಲಿಯವರೆಗೆ ಬ್ಯಾಂಕ್ 2,64,817 (ಸಂಚಿತ) ಖಾತೆಗಳನ್ನು ದಾಖಲಿಸಿಕೊಂಡಿದ್ದು, ಕಳೆದ ಹಣಕಾಸು ವರ್ಷವೊಂದರಲ್ಲೇ (2021-2022ರ ಅವಧಿಯಲ್ಲಿ) ಬ್ಯಾಂಕ್ 39,000 ಖಾತೆಗಳ ಗುರಿಗೆ ಬದಲಾಗಿ 58,603 ಖಾತೆಗಳನ್ನು ಮಾಡಿಸಿ ಹೊಸ ದಾಖಲೆ ಬರೆದಿದೆ ಎಂದರು.
ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲ ಮೂರು ಸಾಮಾಜಿಕ ಭದ್ರತಾ ಯೋಜನೆಗಳ (ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಜೀವನ್ ಜ್ಯೋತಿ ಮತ್ತು ಅಟಲ್ ಪಿಂಚಣಿ ಯೋಜನೆ) ಅನುಷ್ಠಾನದಲ್ಲಿ ತಮ್ಮ ಬ್ಯಾಂಕ್ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಿಬ್ಬಂದಿ ವರ್ಗದ ಪಾತ್ರ ಗಣನೀಯವಾಗಿದೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ 9 ಜಿಲ್ಲಾ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 90 ಲಕ್ಷ ಗ್ರಾಹಕರ ನೆಲೆಯೊಂದಿಗೆ 31,000 ಕೋಟಿ ವಹಿವಾಟು ನಡೆಸುತ್ತಿದೆ ಎಂದರು. ಪಿಂಚಣಿ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎ.ಜಿ. ದಾಸ್, ಪ್ರಾಧಿಕಾರದ ಪೂರ್ಣಾವಧಿ ಸದಸ್ಯ ದೀಪಕ ಮೊಹಂತಿ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.