ಆಯುಷ್ಮಾನ್‌ ಕಾರ್ಡ್‌; ಬೆಳಗಾವಿ ವಿಭಾಗ ರಾಜ್ಯಕ್ಕೆ ಪ್ರಥಮ


Team Udayavani, Sep 18, 2019, 9:24 AM IST

huballi-tdy-1

ಧಾರವಾಡ: ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆಯಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೆ ಎಂಟನೇ ಹಾಗೂ ಬೆಳಗಾವಿ ವಿಭಾಗ ಪ್ರಥಮ ಸ್ಥಾನದಲ್ಲಿದೆ ಎಂದು ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಡಾ| ಗಿರಿಧರ ಆರ್‌. ಕುಕನೂರ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿ, ಎಬಿಎಆರ್‌ಕೆ ಯೋಜನೆಯಡಿ ಬೆಳಗಾವಿ ವಿಭಾಗದ ಬೆಳಗಾವಿ ಜಿಲ್ಲೆಯಲ್ಲಿ 1,86,436 ಕಾರ್ಡ್‌ ವಿತರಣೆಯಾಗಿದ್ದು, 11,981 ಜನ ಲಾಭ ಪಡೆದಿದ್ದಾರೆ. ಬಾಗಲಕೋಟೆ 95,731 ಕಾರ್ಡ್‌ ವಿತರಣೆ-7,233 ಜನ ಸೌಲಭ್ಯ; ವಿಜಯಪುರ 91,789 ಕಾರ್ಡ್‌ ವಿತರಣೆ-4,739 ಜನ ಸೌಲಭ್ಯ; ಹಾವೇರಿ 2,11,920 ಕಾರ್ಡ್‌ ವಿತರಣೆ-4,198 ಜನ ಸೌಲಭ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 1,57,339 ಕಾರ್ಡ್‌ ವಿತರಣೆಯಾಗಿದ್ದು 3,979 ಜನ ಸೌಲಭ್ಯ ಪಡೆದಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಈ ಯೋಜನೆಯಡಿ 10,43,570 ಎಬಿಎಆರ್‌ಕೆ ಕಾರ್ಡ್‌ ವಿತರಿಸಲಾಗಿದ್ದು, 46,218 ಜನ ಫಲಾನುಭವಿಗಳು ಯೋಜನೆ ಸೌಲಭ್ಯ ಪಡೆದಿದ್ದಾರೆ ಎಂದರು.

ಆಯುಷ್ಮಾನ್‌ ಯೋಜನೆಯನ್ನು ಹೆಚ್ಚು ಜನರಿಗೆ ತಲುಪಿಸಲು ರಾಜ್ಯಾದ್ಯಂತ ಸೆ.15ರಿಂದ 30ರವರೆಗೆ ವಿಶೇಷ ಪಾಕ್ಷಿಕ ಅಭಿಯಾನ ಆಯೋಜಿಸಲಾಗಿದೆ. ಜಿಲ್ಲಾಸ್ಪತ್ರೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗದ ಉಪ ನಿರ್ದೇಶಕ ಡಾ| ಅಪ್ಪಾಸಾಹೇಬ್‌ ನರಹಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಯಶವಂತ ಮದಿನಕರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಸ್‌.ಎಂ. ಹೊನಕೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಶಶಿ ಪಾಟೀಲ, ಡಿಇಐಸಿಯ ತಜ್ಞ ವೈದ್ಯ ಡಾ| ಎನ್‌.ಎಂ. ಅಂಗಡಿ ಇದ್ದರು.

ಆಯುಷ್ಮಾನ್‌ ಯೋಜನೆಯಡಿ ಆರೋಗ್ಯ ಸೇವೆ ಪಡೆಯಲು ಕಡ್ಡಾಯವಾಗಿ ಕಾರ್ಡ್‌ ಅಗತ್ಯವಿಲ್ಲ. ಚಿಕಿತ್ಸೆಗೆ ಬರುವವರು ತಮ್ಮ ಕುಟುಂಬದ ಪಡಿತರ ಕಾರ್ಡ್‌ ಹಾಗೂ ಆಧಾರ ಕಾರ್ಡ್‌ ತಂದರೆ ಸಾಕು ಚಿಕಿತ್ಸೆ ನೀಡಲಾಗುತ್ತದೆ. ಎಬಿಎಆರ್‌ಕೆ ಕಾರ್ಡ್‌ ಪಡೆಯುವುದರಿಂದ ಯೋಜನಾ ಸೌಲಭ್ಯ ಪಡೆಯುವ ಪ್ರಕ್ರಿಯೆಗೆ ಹೆಚ್ಚು ಸಹಾಯವಾಗುತ್ತದೆ. • ಡಾ| ಗಿರಿಧರ ಕುಕನೂರ, ಜಂಟಿ ನಿರ್ದೇಶಕ, ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.