![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 11, 2023, 12:53 PM IST
ಹುಬ್ಬಳ್ಳಿ: ಹಾಸನ ಕ್ಷೇತ್ರದ ವಾಸ್ತವದ ನೆಲೆಗಟ್ಟು ಅರಿತುಕೊಂಡೇ ಅಭ್ಯರ್ಥಿಯ ಆಯ್ಕೆ ಬಗ್ಗೆ ನನ್ಬ ನಿರ್ಧಾರ ಕೈಗೊಂಡಿದ್ದೇನೆ. ಭವಾನಿ ರೇವಣ್ಣರವರಿಗೆ ಟಿಕೆಟ್ ನೀಡಿದೆರೆ ಕುಟುಂಬ ರಾಜಕೀಯ ಆರೋಪ ಜತೆಗೆ ಪಕ್ಷ ಸೋಲಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದ ಹಿಂದಿನಿಂದಲೂ ಅಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಎಂದು ಹೇಳುತ್ತಲೇ ಬಂದಿದ್ದೇನೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಿದರೆ ಅವರು ಗೆಲ್ಲುವುದಿಲ್ಲ ಎಂಬ ವಾಸ್ತವವನ್ನು ಅರಿತುಕೊಳ್ಳಬೇಕಾಗಿದೆ ಎಂದರು.
ದೇವೇಗೌಡರ ಕುಟುಂಬವನ್ನು ಮುಗಿಸಬೇಕೇಂದು ಕೆಲವರು ಯತ್ನಿಸುತ್ತಿದ್ದಾರೆ. ಹಿತೈಷಿಗಳು ಎನ್ನಿಸಿಕೊಂಡವರೇ ಶಕುನಿಗಳ ರೂಪದಲ್ಲಿ ರೇವಣ್ಣನವರ ತಲೆಕೆಡಿಸುತ್ತಿದ್ದಾರೆ. ಇದನ್ನು ಅವರು ಅರಿತುಕೊಳ್ಳಬೇಕು. ರಾಜ್ಯದಲ್ಲಿ ಪಕ್ಷ ಸ್ವತಂತ್ರ ವಾಗಿ ಅಧಿಕಾರಕ್ಕೆ ತರಲು ದಿನಕ್ಕೆ 15-16 ತಾಸು ಶ್ರಮಿಸುತ್ತಿದ್ದೇನೆ ನನಗೆ ಸಹಕಾರ ನೀಡುವ ಕೆಲಸ ಮಾಡಬೇಕೆ ವಿನಃ ತೊಂದರೆ ಕೊಡುವುದು ಬೇಡ ಎಂದರು.
ಇದನ್ನೂ ಓದಿ:ರಚೆಲ್ ಎಂಬ ಮಲಯಾಳಿ ಸುಂದರಿ: ನವನಟಿಯ ಕೈ ತುಂಬಾ ಸಿನಿಮಾ
ಹಾಸನ ಕ್ಷೇತ್ರದ ಟಿಕೆಟ್ ಸಣ್ಣ ವಿಷಯ ಮಧ್ಯಮದಲ್ಲಿ ದೊಡ್ಡ ವಿಷಯವಾಗಿ ಚರ್ಚೆ ಆಗುತ್ತಿದೆ. ನಮ್ಮದು ಒಂದು ಕ್ಷೇತ್ರ ಸಮಸ್ಯೆ ಬಿಜೆಪಿಯಲ್ಲಿ ಇಂತಹ ಅನೇಕ ಕ್ಷೇತ್ರಗಳಿವೆ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ ಹೇಳಿಕೆಗೆ ಪ್ರತಿಕ್ರಿಸಿದ ಅವರು, 2008ರಲ್ಲಿ ಅವಕಾಶ ಇತ್ತು. 2018ರಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಬಳಿ ಸರಕಾರ ರಚನೆ ವಿಷಯವಾಗಿ ಮಾತನಾಡಲು ಬಂದಾಗ ಎಚ್.ಡಿ.ದೇವೇಗೌಡ ಅವರು ಖರ್ಗೆ ಅವರನ್ನು ಸಿಎಂ ಮಾಡಿ ನಮ್ಮ ಬೆಂಬಲ ನೀಡುವುದಾಗಿ ತಿಳಿಸಿದ್ದರು ಕಾಂಗ್ರೆಸ್ ನವರು ಒಪ್ಪಲಿಲ್ಲ. ಇದೀಗ ಇನ್ನು ಬಹುಮತವೇ ಬಂದಿಲ್ಲ ದಲಿತ ಸಿಎಂ ಕನವರಿಕೆಯಲ್ಲಿ ಇದ್ದಾರೆ. ಕೆಲ ಶಾಸಕರನ್ನು ಬಿಜೆಪಿ ಕಳುಹಿಸಿದ್ದು ಯಾರು ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಲಿ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.