ಮಳೆಯೇ ಇಲ್ಲದಿದ್ದರೂ ತಿಂಗಳಲ್ಲಿ 2ನೇ ಬಾರಿ ಮಹಾ ನೆರೆ


Team Udayavani, Aug 30, 2024, 6:03 PM IST

ಮಳೆಯೇ ಇಲ್ಲದಿದ್ದರೂ ತಿಂಗಳಲ್ಲಿ 2ನೇ ಬಾರಿ ಮಹಾ ನೆರೆ

■ ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಕರ್ನಾಟಕದಲ್ಲಿ ವರುಣನ ಆರ್ಭಟ ಇಲ್ಲದಿದ್ದರೂ ಮಹಾರಾಷ್ಟ್ರದ ಮಳೆಗೆ ರಾಜ್ಯದ ನದಿಗಳು ಮತ್ತೆ ಉಕ್ಕಿ ಹರಿಯುತ್ತಿದ್ದು ಒಂದೇ ತಿಂಗಳಲ್ಲಿ ಎರಡನೇ ಬಾರಿ “ನೆರೆ’ ಆವರಿಸಿದೆ. ಕೃಷ್ಣಾ, ಧೂಧಗಂಗಾ, ವೇದಗಂಗಾ, ಘಟಪ್ರಭಾ, ಭೀಮಾ ನದಿಗಳು ಮಹಾರಾಷ್ಟ್ರದ ಜಲಾಶಯಗಳಿಂದ ಬಿಟ್ಟಿರುವ ನೀರಿನಿಂದಲೇ ಅಪಾಯದ ಮಟ್ಟ ಮೀರಿದ್ದು, 18 ಸೇತುವೆಗಳು ಮುಳುಗಡೆಯಾಗಿ ಸಂಚಾರ ಕಡಿತಗೊಂಡಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ 1.26 ಲಕ್ಷ,
ವೇದಗಂಗಾ, ದೂಧಗಂಗಾ ನದಿಗೆ ತಲಾ 26 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು ಒಂದೇ ದಿನದಲ್ಲಿ ಕೃಷ್ಣಾ ನದಿ 2 ಅಡಿ,
ವೇದಗಂಗಾ, ದೂಧಗಂಗಾ ನದಿ ಒಂದು ಅಡಿಯಷ್ಟು ಏರಿಕೆಯಾಗಿ ಅಪಾಯದ ಮಟ್ಟ ಮೀರಿವೆ. 7 ಸೇತುವೆ ಮುಳುಗಡೆಯಾಗಿವೆ.

ಕಾರದಗಾ ಬಂಗಾಲಿ ಬಾಬಾ ದೇವಸ್ಥಾನ, ಯಕ್ಸಂಬಾ ಮುಲ್ಲಾನಕ್ಕಿ ದರ್ಗಾ, ಕಲ್ಲೋಳ ಗ್ರಾಮದ ದತ್ತ ಮಂದಿರ ಜಲಾವೃತವಾಗಿವೆ.
ಅಂಬೋಲಿ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಘಟಪ್ರಭಾ ನದಿ ಕೂಡ ಅಬ್ಬರಿಸುತ್ತಿದೆ. ಹಿಡಕಲ್‌ ಡ್ಯಾಂನಿಂದ 25 ಸಾವಿರ ಕ್ಯೂಸೆಕ್‌ ನೀರು ಬಿಟ್ಟಿದ್ದರಿಂದ ಗೋಕಾಕ, ಮೂಡಲಗಿಯಲ್ಲೂ ನೆರೆ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿ 11 ಸೇತುವೆಗಳು ಮುಳುಗಡೆಯಾಗಿವೆ. ಮುಧೋಳ-ಯಾದವಾಡ ಸೇತುವೆ ಮುಳುಗಡೆ ಹಂತ ತಲುಪಿದೆ.

ತುಂಗಭದ್ರಾ ಭರ್ತಿಗೆ 4 ಅಡಿ ಬಾಕಿ:
ಮಹಾರಾಷ್ಟ್ರದ ಉಜಿನಿ, ವೀರ ಜಲಾಶಯ ದಿಂದ 1.45 ಲಕ್ಷ ಕ್ಯೂಸೆಕ್‌ ನೀರು ಬಿಡುತ್ತಿರುವುದರಿಂದ ಭೀಮಾ ನದಿ ಸಹ ಅಪಾಯದ ಮಟ್ಟ ಮೀರಿದೆ. ಭೀಮಾ ಏತ ನೀರಾವರಿ ಜಲಾಶಯದ 29 ಗೇಟ್‌ಗಳ ಪೈಕಿ 22 ಗೇಟ್‌ ಗಳ ಮೂಲಕ 1.45 ಲಕ್ಷ ಕ್ಯೂಸೆಕ್‌ ನೀರು ಹರಿ ಬಿಡುತ್ತಿದ್ದು ಸುಕ್ಷೇತ್ರ ದೇವಲ್‌ ಗಾಣಗಾ ಪುರ-ಇಟಗಾ ಸಂಪರ್ಕ ಕಡಿತವಾಗಿದೆ.

ಹೇಮಾವತಿ ಡ್ಯಾಂ ಒಂದೇ ತಿಂಗಳಲ್ಲಿ 2ನೇ ಬಾರಿ ಭರ್ತಿ
ಈ ವರ್ಷ ಹೇಮಾವತಿ ಜಲಾಶಯ ತಿಂಗಳಲ್ಲಿ ಎರಡು ಬಾರಿ ಭರ್ತಿಯಾಗಿದೆ. ಜುಲೈ 21ರಂದು ಜಲಾಶಯ ಭರ್ತಿಗೆ ಇನ್ನೂ 2 ಅಡಿ
ಬಾಕಿಯಿರುವಾಗಲೇ (2920 ಅಡಿ) ನದಿಗೆ 25,989 ಕ್ಯುಸೆಕ್‌ ಅನ್ನು ಬಿಡಲಾಗಿತ್ತು. ಆ.29ರಂದು 2ನೇ ಬಾರಿ ಒಳ ಹರಿವು ಹೆಚ್ಚಾದ ಕಾರಣ ನದಿಗೆ ಮತ್ತೂಮ್ಮೆ 9000 ಕ್ಯೂಸೆಕ್‌ಅನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಗುರು ವಾರ 13,771 ಕ್ಯುಸೆಕ್‌ ಒಳ ಹರಿವಿದ್ದು, ನಾಲೆಗಳಿಗೆ ಹರಿಸುತ್ತಿರುವ ನೀರು ಸೇರಿದಂತೆ ಜಲಾಶಯದಿಂದ 13775 ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.