ರಕ್ತ ಭಂಡಾರಗಳಲ್ಲಿ ಖಾಲಿಯಾಗ್ತಿದೆ ರಕ್ತ


Team Udayavani, Apr 28, 2021, 3:58 PM IST

uyiyiy7

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್‌ನಿಂದ ಜಿಲ್ಲೆಯ ರಕ್ತ ಭಂಡಾರಗಳಲ್ಲಿ ರಕ್ತ ಹಾಗೂ ಪ್ಲಾಸ್ಮಾ ಕೊರತೆ ಉಂಟಾಗಿದ್ದು, ಮುಂದಿನ ತಿಂಗಳು ಈ ಸಮಸ್ಯೆ ತೀವ್ರಗೊಳ್ಳಲಿದೆ. 18-45 ವಯಸ್ಸಿನವರಿಗೆ ಕೋವಿಡ್‌ ಲಸಿಕೆ ಅಭಿಯಾನದ ಪರಿಣಾಮ ರಕ್ತದ ಅಭಾವ ಮತ್ತಷ್ಟು ಹೆಚ್ಚಾಗಲಿದ್ದು, ಲಸಿಕೆ ಪಡೆಯುವ ಮೊದಲೇ ಆಸ್ಪತ್ರೆಗಳಲ್ಲಿರುವ ರಕ್ತ ಭಂಡಾರಗಳಿಗೆ ತೆರಳಿ ಇದರ ಅಭಾವ ನೀಗಿಸಲು ಮುಂದಾಗಬೇಕಿದೆ.

ಕೋವಿಡ್‌, ಕಾಲೇಜುಗಳು ರಜೆ, ಲಾಕ್‌ ಡೌನ್‌ ಪರಿಣಾಮ ಈಗಾಗಲೇ ಜಿಲ್ಲೆಯ ಎರಡು ಸರಕಾರಿ ರಕ್ತ ಭಂಡಾರಗಳಾದ ಧಾರವಾಡ ಜಿಲ್ಲಾಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್‌ ಸೇರಿದಂತೆ ಖಾಸಗಿ 11 ರಕ್ತ ಭಂಡಾರಗಳಲ್ಲಿ ರಕ್ತದ ಕೊರತೆ ಕಾಣಿಸಿಕೊಂಡಿದೆ. ಜನವರಿಯಿಂದ ಮಾರ್ಚ್‌ ಅಂತ್ಯದವರಿಗೆ ಶಿಬಿರಗಳ ಮೂಲಕ ಸಂಗ್ರಹಿಸಿದ ರಕ್ತ ಖಾಲಿಯಾಗುತ್ತಿದೆ. ಅಲ್ಪಸ್ವಲ್ಪ ಉಳಿದಿರುವ ವಿವಿಧ ಗುಂಪುಗಳ ರಕ್ತ 15 ದಿನಗಳಿಗೆ ಸಾಕಾಗಲಿದೆ.  ಸಾಂಪ್ರದಾಯಿಕ ರಕ್ತದಾನಿಗಳಾಗಿರುವ 18-45 ವಯಸ್ಸಿನವರಿಗೆ ಮೇ1 ರಿಂದ ಕೋವಿಡ್‌ ಲಸಿಕೆ ಅಭಿಯಾನ ನಡೆಯುವುದರಿಂದ ಮುಂದಿನ ತಿಂಗಳ ಅಂತ್ಯಕ್ಕೆ ಇದರ ಅಭಾವ ಹೆಚ್ಚಾಗಲಿದೆ ಎನ್ನುವ ಆತಂಕ ಆವರಿಸಿದೆ.

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ತಿಂಗಳು 200-250 ಬ್ಯಾಗ್‌, ಕಿಮ್ಸ್‌ನಲ್ಲಿ 300 ಬ್ಯಾಗ್‌, ನವನಗರದ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ 100-120 ಬ್ಯಾಗ್‌, ರಾಷ್ಟ್ರೋತ್ಥಾನದಲ್ಲಿ 1200 ಬ್ಯಾಗ್‌ ಬಳಕೆ ಹಾಗೂ ಸಂಗ್ರಹವಿರುತ್ತಿತ್ತು. ಈಗ ಸಂಗ್ರಹ ಪ್ರಮಾಣ ಎರಡಂಕಿಗೆ ಇಳಿದಿದೆ. ರಕ್ತದಾನ ಮಾಡದಿದ್ದರೂ ನೀಡುತ್ತಿದ್ದ ರಾಷ್ಟ್ರೋತ್ಥಾನ ರಕ್ತ ನಿಧಿಯಲ್ಲಿ ಒಬ್ಬರು ರಕ್ತ ದಾನ ಮಾಡಿದರೆ ಬೇಕಾದ ರಕ್ತ ನೀಡುವ ಪರಿಸ್ಥಿತಿ ಉಂಟಾಗಿತ್ತು. ಇತರೆಡೆ ರೋಗಿಗಳ ಸಂಬಂಧಿ ಕರು ರಕ್ತ ನೀಡಿದರೆ ಮಾತ್ರ ರಕ್ತ ನೀಡುವ ವ್ಯವಸ್ಥೆ ಇರುವುದರಿಂದ ಇದು ಲಾಕ್‌ಡೌನ್‌ ಸಮಯದಲ್ಲಿ ಮತ್ತಷ್ಟು ಸಮಸ್ಯೆಯಾಗಲಿದೆ.

ರಕ್ತಕ್ಕೆ ಬೇಡಿಕೆ: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ. ಆದರೆ ಹೆರಿಗೆ, ಕ್ಯಾನ್ಸರ್‌, ಅಪಘಾತ, ಕೆಲವೊಂದು ಅಗತ್ಯ ಶಸ್ತ್ರ ಚಿಕಿತ್ಸೆ, ಹಿಮೋಫೇಲಿಯಾ, ತಲಸೀಮಿಯಾದಂತಹ ರೋಗಿಗಳಿಗೆ ರಕ್ತ ಅನಿವಾರ್ಯ. ಇದೀಗ ಉಂಟಾಗಿರುವ ಅಭಾವದಿಂದ ಅಗತ್ಯ ಗುಂಪಿನ ಮಾದರಿಯ ರಕ್ತ ದೊರೆಯದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಬೇಡಿಕೆ, ಸಂಗ್ರಹಕ್ಕೆ ಸರಿಯಾಗಿದ್ದರೂ ಮುಂದೆ ಕಷ್ಟ ಎನ್ನುವ ಅಭಿಪ್ರಾಯಗಳಿದ್ದು, ಕಿಮ್ಸ್‌, ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ರಕ್ತದ ಬೇಡಿಕೆ ಕಡಿಮೆಯಾಗಿಲ್ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.