Hubli: ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ
Team Udayavani, Jan 31, 2024, 12:19 PM IST
ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆ ಎಂಟಿಎಸ್ ಕಾಲೋನಿಯ ಖಾಲಿ ಜಾಗದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತರನ್ನು ಹಳೇಹುಬ್ಬಳ್ಳಿ ಹೆಗ್ಗೇರಿ ಮಾರುತಿ ನಗರದ ವಿಜಯ ಸುರೇಶ ಬಸವಾ (26) ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ ಮಂಗಳವಾರ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಿದ್ದ. ನಂತರ ಹೊರಗೆ ಹೋಗಿದ್ದ. ತಡರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಆತನ ಶವ ಅರೆಬೆಂದ ಸ್ಥಿತಿಯಲ್ಲಿ ಎಂಟಿಎಸ್ ಕಾಲೋನಿ ಪಾಳುಬಿದ್ದ ಜಾಗದಲ್ಲಿ ದೊರೆತಿದೆ. ಯಾರೋ ಆತನನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಆತನ ಸಹೋದರ ವಿಶಾಲ ಬಸವಾ ಹೇಳಿದರು.
ಪ್ರಾಥಮಿಕ ತನಿಖೆಯಿಂದ ಇದು ಕೊಲೆಯೋ – ಆತ್ಮಹತ್ಯೆಯೋ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಮತ್ತು ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಎಸಿಪಿ ವಿಜಯಕುಮಾರ ತಳವಾರ ತಿಳಿಸಿದರು.
ಘಟನಾ ಸ್ಥಳಕ್ಕೆ ಡಿಸಿಪಿ ಸಂಜೀವ ಎಂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಮೃತನ ಕುಟುಂಬಸ್ಥರು, ಸ್ನೇಹಿತರು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.