Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ


Team Udayavani, Oct 7, 2024, 2:29 PM IST

BY Vijayendra’s contribution is to talk lightly about those who worked for the party says KS Eshwarappa

ಹುಬ್ಬಳ್ಳಿ: ಬಿಜೆಪಿ ಪಕ್ಷ ಕಟ್ಟುತ್ತಿದ್ದ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಇನ್ನೂ ಕಣ್ಣು ಬಿಟ್ಟಿರಲಿಲ್ಲ. ಇವರು ಪಕ್ಷವನ್ನು ಕಂಡಿದ್ದು ಈಗ. ಇನ್ನೂ ಎಳಸು ನನ್ನ ಬಗ್ಗೆ ಏನು ಮಾತನಾಡುತ್ತಾರೆ. ಪಕ್ಷಕ್ಕಾಗಿ ದುಡಿದವರ ಬಗ್ಗೆ ಹಗುರುವಾಗಿ ಮಾತನಾಡುವುದೇ ಇವರ ಕೊಡುಗೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ವಾಗ್ದಾಳಿ ನಡೆಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಕಲ್, ಸ್ಕೂಟರ್ ಮೇಲೆ ತಿರುಗಾಡಿ ಸಾಮೂಹಿಕ ನೇತೃತ್ವದಲ್ಲಿ ಪಕ್ಷ ಕಟ್ಟಿದ್ದೇವೆ. ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ ಅವರ ಆಶೀರ್ವಾದದಿಂದ ರಾಜ್ಯಾಧ್ಯಕ್ಷ ಆಗಿದ್ದೇನೆ. ನನ್ನನ್ನು ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇವರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪಕ್ಷಕ್ಕೆ ದುಡಿದ ಹಿರಿಯರು ವಿರೋಧ ಮಾಡಿದ್ದರು, 40 ಜನ ಆರ್ಎಸ್ಎಸ್ ಸೇರಿದಂತೆ ಹಿರಿಯರಲ್ಲಿ 37 ಜನ ವಿರೋಧ ಮಾಡಿದ್ದರು. ಆದರೆ ಲಿಂಗಾಯತ ಸೇರಿದಂತೆ ಇನ್ನಿತರೆ ಮಂಕು ಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದು, ಪಕ್ಷಕ್ಕೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ವಿಜಯೇಂದ್ರ ಕೈಯಲ್ಲಿ ಪಕ್ಷ ಹಾಳಾಗುತ್ತಿದ್ದೆದೆ ಪಕ್ಷ ಶುದ್ಧೀಕರಣ ಮಾಡಬೇಕು ಎನ್ನುವ ಕಾರಣಕ್ಕಾಗಿಯೇ ನಾನು ಚುನಾವಣೆ ನಿಂತಿದ್ದೆ ವಿನಃ ಗೆಲ್ಲುವುದಕ್ಕಲ್ಲ. ಹಗಲು ರಾತ್ರಿ ಕಷ್ಟಪಟ್ಟು ಪಕ್ಷ ಕಟ್ಟಿದವರು ಇವರಿಂದಾಗಿಯೇ ಮೂಲೆಗುಂಪು ಆಗುತ್ತಿದ್ದಾರೆ. ವಿಜಯೇಂದ್ರನ ಕೈಯಲ್ಲಿ ಪಕ್ಷ ಹಾಳಾಗುತ್ತಿದೆಯಲ್ಲಾ ಎನ್ನುವ ನೋವು ನನ್ನಂತೆ ಹಲವು ಹಿರಿಯರಿಗಿದೆ. ತನಗೆ ಬೇಕಾದವರಿಗೆ ಟಿಕೆಟ್ ಕೊಡುವುದು, ಪದಾಧಿಕಾರಿ ಮಾಡುವ ಸ್ವಜನಪಕ್ಷ ಪಾತ ತುಂಬಿದೆ ಎಂದು ತಿರುಗೇಟು ನೀಡಿದರು.

ಅನ್ಯಾಯದ ವಿರುದ್ದ ಸಂಘಟನೆ

ರಾಜ್ಯದಲ್ಲಿ ಹಿಂದುಳಿದ, ದಲಿತರು ಹಾಗೂ ಇನ್ನುಳಿದ ಸಮಾಜಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಂಘಟನೆ ಕಟ್ಟಲಾಗುತ್ತಿದೆ. ಅ.20 ರಂದು ಬಾಗಲಕೋಟೆಯಲ್ಲಿ ಹಲವು ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುವ ಸಮಾವೇಶದಲ್ಲಿ ಸಂಘಟನೆಯು ಸ್ಪಷ್ಟ ರೂಪ ಪಡೆಯಲಿದೆ. ಹಿಂದಿನ ಸಂಘಟನೆ ನಿಲ್ಲಿಸಬಾರದಿತ್ತು ಎಂದು ಈಗ ಅನ್ನಿಸುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶ ಹಾಗೂ ಸಂಘಟನೆಗೆ ಹಲವು ಸ್ವಾಮೀಜಿಗಳ ಸಲಹೆ ಹಾಗೂ ಮಾರ್ಗದರ್ಶನವಿದೆ. ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಸಮಾವೇಶ ನಡೆಯಲಿದೆ. ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯದಿಂದ ಸುಮಾರು 2000 ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಆರ್.ಸಿ.ಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್) ಎನ್ನುವುದು ಸ್ವಾಮೀಜಿಯೊಬ್ಬರು ನೀಡಿದ ಸಲಹೆ. ನಾಳಿನ ಸಮಾವೇಶದಲ್ಲಿ ಈ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.

ನಿಲ್ಲಿಸಿ ತಪ್ಪು ಮಾಡಿದೆ: ಹಿಂದೆ ಆರಂಭಿಸಿದ ರಾಯಣ್ಣ ಬ್ರಿಗೇಡ್ ನಿಲ್ಲಿಸಿ ದೊಡ್ಡ ತಪ್ಪು ಮಾಡಿದೆ. ಸಂಘಟನೆಗೆ ಅಭೂತಪೂರ್ವ ಬೆಂಬಲ ಹಾಗೂ ಸಹಕಾರ ವ್ಯಕ್ತವಾಗಿತ್ತು. ಆದರೆ ಯಡಿಯೂರಪ್ಪ ಅವರಿಗೆ ಈ ಸಂಘಟನೆ ನೋಡಿ ತಡೆದುಕೊಳ್ಳಲು ಆಗಲಿಲ್ಲ. ಅಮಿತ್ ಶಾ ಅವರಿಗೆ ಇಲ್ಲದ್ದನ್ನು ಹೇಳಿ ನಿಲ್ಲಿಸುವಂತೆ ಮಾಡಿದರು. ಆ ಸಂಘಟನೆಯನ್ನು ನಿಲ್ಲಿಸಬಾರದಿತ್ತು ಎಂದು ಈಗ ಅನ್ನಿಸುತ್ತಿದೆ ಎಂದರು.

ಟಾಪ್ ನ್ಯೂಸ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shine shetty’s just married movie teaser out

Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.