ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣಪತ್ರ

ಕರ್ನಾಟಕದಲ್ಲಿ 6,500 ಜನರಿಗೆ ಡಿಪ್ಲೊಮಾ ತರಬೇತಿ ಪೂರ್ಣ; ದೇಶಕ್ಕೆ ಮೊದಲ ಸ್ಥಾನದ ಹೆಗ್ಗಳಿಕೆ

Team Udayavani, May 10, 2019, 11:59 AM IST

hubali-tdy-4..

ಧಾರವಾಡ: ಡಿಪ್ಲೊಮಾ ತರಬೇತಿ ಮುಗಿದ ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣಪತ್ರ ವಿತರಣಾ ಸಮಾರಂಭವನ್ನು ಡಾ| ವಿ.ಎಸ್‌. ಉಷಾರಾಣಿ ಉದ್ಘಾಟಿಸಿದರು.

ಧಾರವಾಡ: ಇಲ್ಲಿಯ ಕೃಷಿ ವಿವಿ ಆವರಣದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, ಕೃಷಿ ಇಲಾಖೆ ಸಹಯೋಗದಲ್ಲಿ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ ತರಬೇತಿ ಮುಗಿದ ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣಪತ್ರ ವಿತರಣಾ ಸಮಾರಂಭ ಗುರುವಾರ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಡಾ| ವಿ.ಎಸ್‌. ಉಷಾರಾಣಿ ಮಾತನಾಡಿ, ದೇಶದಲ್ಲಿ ಇದುವರೆಗೂ 35,000 ಕೃಷಿ ಪರಿಕರ ಮಾರಾಟಗಾರರು ಡಿಪ್ಲೊಮಾ ಪ್ರಮಾಣಪತ್ರ ಪಡೆದಿದ್ದು, ಅದರಲ್ಲಿ ಕರ್ನಾಟಕ ರಾಜ್ಯದಿಂದ 6,500 ಜನ ಡಿಪ್ಲೊಮಾ ತರಬೇತಿ ಮುಗಿಸಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದೆ. ಕೃಷಿ ಪರಿಕರ ಮಾರಾಟಗಾರರು ತರಬೇತಿಯಲ್ಲಿ ಪಡೆದ ಜ್ಞಾನ-ಅನುಭವದ ಆಧಾರದ ಮೇಲೆ ಸ್ಥಾನಿಕವಾಗಿ ರೈತರಿಗೆ ಉತ್ಪಾದನಾ ವೆಚ್ಚ ಕಡಿಮೆ ಮಾಡುವ ಹಾಗೂ ಉತ್ಪಾದಕತೆ ಹೆಚ್ಚಿಸುವ ದಿಸೆಯಲ್ಲಿ ಮಾರ್ಗದರ್ಶನ ಮಾಡಬೇಕು. ಹೊಸ ಸಮಸ್ಯೆಗಳಿಗೆ ಪರಿಹಾರ ಬೇಕಾದಲ್ಲಿ ತರಬೇತಿ ನೀಡಿದ ವಿಜ್ಞಾನಿಗಳೊಡನೆ ಸಲಹೆ ಪಡೆದು ರೈತರಿಗೆ ತಿಳಿಸಬೇಕು ಎಂದರು.

ಇಂಪಾಲ್ದ ಕೇಂದ್ರೀಯ ವಿವಿ ಕುಲಪತಿ ಡಾ| ಎಸ್‌. ಅಯ್ಯಪ್ಪನ್‌ ಮಾತನಾಡಿ, ಕೃಷಿ ಅಭಿವೃದ್ಧಿ ಕ್ರಿಯೆಯ ಸರಪಳಿಯಲ್ಲಿ ಕೃಷಿ ಪರಿಕರ ಮಾರಾಟಗಾರರು ಮುಖ್ಯ ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು. ಕೃಷಿ ಪರಿಕರಗಳ ಉಪಯೋಗಕ್ಕೆ ನಿಖರವಾದ ಸಲಹೆ-ಸೂಚನೆ ನೀಡಬೇಕು. ಪದವಿ ಪಡೆದ ಕೃಷಿ ಪರಿಕರ ಮಾರಾಟಗಾರರಿಗೆ ಹವಾಮಾನ ಬದಲಾವಣೆ, ಒಣ ಬೇಸಾಯ ಮುಂತಾದ ಆದ್ಯತಾ ವಿಷಯಗಳಲ್ಲಿ ವಿಶೇಷ ತರಬೇತಿಗಳನ್ನು ವಿಶ್ವವಿದ್ಯಾಲಯಗಳು ಹಾಗೂ ಇತರ ಸಂಸ್ಥೆಗಳು ಏರ್ಪಡಿಸುವ ಅವಶ್ಯಕತೆ ಎಂದು ಹೇಳಿದರು.

ಕೃವಿವಿ ಕುಲಪತಿ ಡಾ|ಎಮ್‌.ಬಿ. ಚೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಂಟು ಜಿಲ್ಲೆಗಳಿಂದ 320 ಕೃಷಿ ಪರಿಕರ ಮಾರಾಟಗಾರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಡಾ|ಎಂ.ಎನ್‌. ಶೀಲವಂತರ, ಡಾ|ಎಸ್‌.ಬಿ. ದಂಡಿನ, ಡಾ|ಎಂ.ಜಿ. ಚಂದ್ರಕಾಂತ, ಡಾ| ಎ.ಬಿ. ಪಾಟೀಲ ಇದ್ದರು.

ದೇಸಿ ಪುಸ್ತಕ ಹಾಗೂ ದೇಸಿ ಯಶೋಗಾಥೆ ಕುರಿತ ಸಿಡಿ ಬಿಡುಗಡೆಗೊಳಿಸಲಾಯಿತು. ಡಾ| ಎನ್‌.ಎ. ಎಲೇದಹಳ್ಳಿ ಸ್ವಾಗತಿಸಿದರು. ಡಾ| ಸುರೇಖಾ ಸಂಕನಗೌಡರ ಹಾಗೂ ಡಾ| ಎಸ್‌. ದೇವೇಂದ್ರಪ್ಪ ನಿರೂಪಿಸಿದರು. ಡಾ|ಎಸ್‌.ಪಿ. ಹಲಗಲಿಮಠ ವಂದಿಸಿದರು.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.