![1-sidda](https://www.udayavani.com/wp-content/uploads/2025/02/1-sidda-1-415x226.jpg)
![1-sidda](https://www.udayavani.com/wp-content/uploads/2025/02/1-sidda-1-415x226.jpg)
Team Udayavani, Jan 29, 2025, 4:12 PM IST
ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅರಿವೇ ಗುರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಕಾರ್ಯಕ್ರಮ ರದ್ಧಾಗಿದ್ದು, ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ್ದ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಸೇರಿದಂತೆ ಇನ್ನಿಬ್ಬರು ಗಣ್ಯರು ಪ್ರಶಸ್ತಿ ಸ್ವೀಕರಿಸದೇ ಹಿಂದಿರುಗಿದ್ದಾರೆ.
ಬುಧವಾರ(ಜ.29) ಕರ್ನಾಟಕ ವಿವಿ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಕವಿವಿ ವತಿಯಿಂದ ಅರಿವೇ ಗುರು ಪ್ರಶಸ್ತಿ ಪ್ರದಾನ ಮಾಡಲು ಕಾರ್ಯಕ್ರಮ ಆಯೋಜಿಸಿತ್ತು. ಅದಕ್ಕಾಗಿ ಡಾ. ಚಂದ್ರಶೇಖರ ಕಂಬಾರ, ಪ್ರೊ.ಎನ್.ಎಂ.ಬುಜುರ್ಕೆ ಮತ್ತು ಡಾ.ವಿ.ಜಿ.ತಳವಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿತ್ತು.
ಆದರೆ, ಇತ್ತೀಚೆಗೆ ವಿವಾದಿತ ಕೃತಿ ಬೆಳಗು ಚರ್ಚೆ ಹೆಚ್ಚಾಗಿದ್ದು, ಪ್ರಸಾರರಂಗ ವಿಭಾಗದ ಪ್ರೊ. ಕೃಷ್ಣ ನಾಯಕ ಅವರೂ ವೇದಿಕೆ ಮೇಲೆ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳು ಮಂಗಳವಾರವೇ ಕುಲಸಚಿವರಿಗೆ ಮನವಿ ಸಲ್ಲಿಸಿ, ಕೃಷ್ಣಾ ನಾಯಕರನ್ನು ಕಾರ್ಯಕ್ರಮದಿಂದ ದೂರ ಇಡುವಂತೆ ಆಗ್ರಹಿಸಿದ್ದರು. ಆದರೂ ಪೊಲೀಸ್ ಬಂದೋಬಸ್ತ್ನಲ್ಲಿ ಕಾರ್ಯಕ್ರಮ ನಡೆಸಲು ಕವಿವಿ ನಿರ್ಧರಿಸಿತ್ತು. ಇದಕ್ಕೆ ಜಗ್ಗದ ವಿದ್ಯಾರ್ಥಿಗಳು ಕಾರ್ಯಕ್ರಮ ಬಹಿಷ್ಕರಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲಿಯೇ ಕವಿವಿ ಕಾರ್ಯಕ್ರಮ ಮುಂದೂಡಿತು. ಆದರೆ, ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ್ದ ಅತಿಥಿಗಳು ಮಾತ್ರ ಪ್ರಶಸ್ತಿ ಪಡೆಯದೇ ಮರಳಿದ್ದು ಕವಿವಿ ಗೌರವಕ್ಕೆ ಧಕ್ಕೆ ಬಂದಂತಾಗಿದೆ.
ಇದನ್ನೂ ಓದಿ: Video: ಕುಂಭಮೇಳದಲ್ಲಿ ಆಶೀರ್ವಾದ ಪಡೆಯಲು ಹೋದ ವ್ಯಕ್ತಿಗೆ ಸಾಧು ಆಶೀರ್ವದಿಸಿದ್ದು ಹೀಗೆ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
You seem to have an Ad Blocker on.
To continue reading, please turn it off or whitelist Udayavani.