ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ

ಶಿರಡಿನಗರ ಹನುಮಂತ ದೇವಸ್ಥಾನ ಬಳಿ ಪ್ರತ್ಯಕ್ಷ | ಭಯಭೀತರಾದ ಜನತೆ | ಮನೆಯಿಂದ ಹೊರಬರದಂತೆ ಎಚ್ಚರಿಕೆ

Team Udayavani, Sep 21, 2021, 1:32 PM IST

dfdsf

ಹುಬ್ಬಳ್ಳಿ:ರಾಜನಗರದ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ಎರಡು ದಿನಗಳ ಹಿಂದೆ ಪ್ರತ್ಯಕ್ಷವಾಗಿದ್ದ ಚಿರತೆ ಸೋಮವಾರ ಸಂಜೆ 6:10ರ ಸುಮಾರಿಗೆ ಶಿರಡಿ ನಗರದ ಹನುಮಂತ ದೇವಸ್ಥಾನ ಬಳಿ ಜನರಿಗೆ ಮತ್ತೆ ಕಾಣಿಸಿಕೊಂಡಿದೆ.

ಶಿರಡಿ ಸಾಯಿಬಾಬಾ ದೇವಸ್ಥಾನ ಹತ್ತಿರ ನಿರ್ಮಾಣ ಹಂತದ ಮಾರುತಿ ಗುಡಿ ಬಳಿ ನಿವಾಸಿ ಸಾವಿತ್ರಿ ಮುದ್ದೇಬಿಹಾಳ ಅವರಿಗೆ ಮೊದಲು ಕಾಣಿಸಿಕೊಂಡಿದೆ. ಇವರು ಮನೆ ಅಂಗಳದಲ್ಲಿ ಕಸ ಗುಡಿಸುತ್ತಿದ್ದ ವೇಳೆ ನೃಪತುಂಗ ಬೆಟ್ಟದ ಅರಣ್ಯ ಪ್ರದೇಶದಿಂದ ಜಿಗಿಯುತ್ತ ಬಂದು ಹಂದಿ ಹಿಡಿದುಕೊಂಡು ಹೋಗಿದೆ. ಇದನ್ನು ನೋಡಿದ ಸಾವಿತ್ರಿ ಅವರು ಗಾಬರಿಗೊಂಡು ಮನೆಯೊಳಗೆ ಹೋಗಿದ್ದಾರೆ. ಚಿರತೆ ಅಲ್ಲಿಯೇ ಸಮೀಪದಲ್ಲಿ ಗಿಡ ಏರಿ ಕುಳಿತಿದೆ. ಇದನ್ನು ನೋಡಿದ ಅಲ್ಲಿನ ಕೆಲವು ಮಹಿಳೆಯರು, ಮಕ್ಕಳು ಹಾಗೂ ಪುರುಷರು ಭಯಗೊಂಡು ಮನೆಯೊಳಗೆ ಓಡಿ ಬಾಗಿಲು ಹಾಕಿಕೊಂಡಿದ್ದಾರೆ. ತಕ್ಷಣ ಅಶೋಕ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೆಲ ಸಮಯದ ನಂತರ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಚಿರತೆ ಪತ್ತೆ ಕಾರ್ಯಾಚರಣೆ ನಡೆಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ಅವರು, ಮನೆಬಿಟ್ಟು ಹೊರಗೆ ಬರಬೇಡಿ. ಚಿರತೆಯಿಂದ ನಿಮಗೆ ಯಾವುದೇ ಜೀವಹಾನಿ ಆಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಶಿರಡಿ ನಗರ ನಿವಾಸಿಗಳಿಗೆ ಧೈರ್ಯ ತುಂಬಿದರು.

ಕೇಂದ್ರೀಯ ವಿದ್ಯಾಲಯ ಬಂದ್‌- ಜನತಾ ಪ್ರೌಢಶಾಲೆ ಓಪನ್‌

ನೃಪತುಂಗ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಪ್ರವೇಶಿಸುವ ಮಾರ್ಗದಲ್ಲಿ ಬ್ಯಾರಿಕೇಡ್‌ ಹಾಕಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರೀಯ ವಿದ್ಯಾಲಯ ನಂ.1ರಲ್ಲಿ ಭೌತಿಕ ತರಗತಿಗಳನ್ನು ರದ್ದು ಮಾಡಲಾಗಿದ್ದರೆ, ಬೆಟ್ಟಕ್ಕೆ ಹತ್ತಿಕೊಂಡೇ ಇರುವ ಜನತಾ ಪ್ರೌಢಶಾಲೆ ತೆರೆದುಕೊಂಡಿತ್ತು. ಸೋಮವಾರ ಈ ಶಾಲೆಯಲ್ಲಿ ತರಗತಿಗಳು ನಡೆದವು. ಸುತ್ತಲಿನ ಗ್ರಾಮಗಳ ಸುಮಾರು 8 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಂದು ವೇಳೆ ಚಿರತೆ ಶಾಲೆ ಬಳಿ ಬಂದರೆ ಯಾರು ಹೊಣೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಶಾಲೆಯಲ್ಲಿ 8 ರಿಂದ 10ನೇ ತರಗತಿಗಳಿದ್ದು, ಅಂದಾಜು 75 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಪಕ್ಕದಲ್ಲಿಯೇ ಹಾಸ್ಟೆಲ್‌ ಸಹ ಇದೆ. ಇಲ್ಲಿ 60 ವಿದ್ಯಾರ್ಥಿಗಳು ಇದ್ದಾರೆ. ಶಾಲೆಯ ತರಗತಿಗಳನ್ನು ರದ್ದು ಪಡಿಸುವ ಬಗ್ಗೆ ನಮಗೆ ಇಲಾಖೆಯಿಂದ ಯಾವುದೇ ಆದೇಶ ಬಂದಿಲ್ಲ. ಆದರೆ ಬೆಟ್ಟದ ಸುತ್ತಮುತ್ತಲಿನ ವಿದ್ಯಾರ್ಥಿಗಳಾದರೂ ಶಾಲೆಗೆ ಬಂದಿಲ್ಲ. ಸುತ್ತಲಿನ ಹಳ್ಳಿಯ ಕೆಲ ವಿದ್ಯಾರ್ಥಿಗಳು ಮಾತ್ರ ಸೋಮವಾರ ಶಾಲೆಗೆ ಬಂದಿದ್ದಾರೆ ಎಂದು ಪ್ರೌಢಶಾಲೆ ಮುಖ್ಯ ಶಿಕ್ಷಕಿ ಆರ್‌. ವೈ. ಗೋಕಾಕ ಸುದ್ದಿಗಾರರಿಗೆ ತಿಳಿಸಿದರು.

10-15 ದಿನಗಳಿಂದ ಇಲ್ಲಿಯೇ ಇದೆಯೇ? 

ನೃಪತುಂಗ ಬೆಟ್ಟ ಸುತ್ತಮುತ್ತ ಕಾಣಿಸಿಕೊಂಡಿರುವ ಚಿರತೆ ಕಳೆದ 10-15 ದಿನಗಳಿಂದ ಇಲ್ಲಿನ ಪ್ರದೇಶದಲ್ಲಿಯೇ ವಾಸಿಸುತ್ತಿದೆಯೇ ಎಂಬ ಸಂದೇಹ ಜನರಲ್ಲಿ ಕಾಡುತ್ತಿದೆ. ಸಂಜೆಯಾದರೆ ಸಾಕು ಚಿರತೆಯು ಗಿಡ, ಪೊದೆಗಳಿಂದ ಹೊರಗೆ ಬಂದು ನಾಯಿ, ಹಂದಿಗಳನ್ನು ಹಿಡಿದುಕೊಂಡು ಹೋಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರ ಕಣ್ಣಿಗೆ ಅದು ಕಾಣಿಸಿಕೊಂಡಿದೆ. ಯಾರು ಅದರತ್ತ ಚಿತ್ತ ಹರಿಸಿರಲಿಲ್ಲ ಎಂದು ಶಿರಡಿನಗರದ ನಿವಾಸಿಗಳು ಅನುಮಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.