ಹುಬ್ಬಳ್ಳಿ: ಅರಣ್ಯ ಇಲಾಖೆ ನಿದ್ದೆಗೆಡಿಸಿದ ಚಿರತೆ

ಕ್ಷಣ ಕ್ಷಣಕ್ಕೂ ಜಾಡು ಬದಲು|ಜನರಲ್ಲಿ ಮತ್ತಷ್ಟು ಆತಂಕ |ಮುಂದುವರಿದ ಕಾರ್ಯಾಚರಣೆ

Team Udayavani, Sep 20, 2021, 1:39 PM IST

hyt

ವರದಿ: ಶಿವಶಂಕರ ಕಂಠಿ

ಹುಬ್ಬಳ್ಳಿ: ರಾಜನಗರದ ಕೇಂದ್ರೀಯ ವಿದ್ಯಾಲಯ ನಂ.1ರ ಬಳಿ ಶನಿವಾರ ರಾತ್ರಿ ಪ್ರತ್ಯಕ್ಷವಾಗಿದ್ದ ಚಿರತೆ ಬೆಳಗಾಗುವುದರೊಳಗೆ ಅಲ್ಲಿಂದ ಕಣ್ಮರೆಯಾಗಿದ್ದು ಅರಣ್ಯ ಇಲಾಖೆಯವರ ನಿದ್ದೆಗೆಡಿಸಿದ್ದರೆ, ಜನರಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ.

ಮೂರು ದಿನಗಳ ಹಿಂದೆ ನೃಪತುಂಗ ಬೆಟ್ಟದಲ್ಲಿ ರಾತ್ರಿ ವಾಯುವಿಹಾರ ಮಾಡುತ್ತಿದ್ದ ಓರ್ವರಿಗೆ ಕಾಣಿಸಿಕೊಂಡಿದ್ದ ಚಿರತೆಯು ನಂತರ ಎಲ್ಲಿ ಹೋಗಿತ್ತೋ ಗೊತ್ತಾಗಿರಲಿಲ್ಲ. ಆದರೆ, ಶನಿವಾರ ರಾತ್ರಿ ಕೇಂದ್ರೀಯ ವಿದ್ಯಾಲಯದ ಪ್ರಾಂಗಣದಲ್ಲಿ ಪ್ರತ್ಯಕ್ಷವಾಗಿತ್ತು. ವಿದ್ಯಾರ್ಥಿಯೊಬ್ಬ ಮೊಬೈಲ್‌ನಲ್ಲಿ ಅದು ಓಡಾಡುವ ದೃಶ್ಯ ಸೆರೆ ಹಿಡಿದಿದ್ದ. ಚಿರತೆ ಇರುವ ಬಗ್ಗೆ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಅಶೋಕನಗರ ಪೊಲೀಸರು ಅದರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಆದರೆ ಚಿರತೆ ಕೆಲವೇ ಕ್ಷಣಗಳಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದು, ರಾತ್ರಿಯೆಲ್ಲ ಗಂಗೂಬಾಯಿಹಾನಗ‌ಲ್‌ ಸಂಗೀತ ವಿದ್ಯಾಲಯ, ಟಿಂಬರ್‌ ಯಾರ್ಡ್‌ ಸೇರಿದಂತೆ ನೃಪತುಂಗ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿರುಗಾಡಿದೆ ಎಂದು ಹೇಳಲಾಗುತ್ತಿದೆ.

ವಲಯ ಅರಣ್ಯಾಧಿಕಾರಿ ಶ್ರೀಧರ ಎಂ. ತೆಗ್ಗಿನಮನಿ‌ ನೇತೃತ್ವದಲ್ಲಿ ರಾತ್ರಿಯಿಂದ ಕಾರ್ಯಾಚರಣೆ ಮುಂದುವರಿಸಿದ್ದು, ಅದನ್ನು ಹೇಗಾದರೂ ಸೆರೆ ಹಿಡಿಯಬೇಕೆಂದು ಪ್ರತ್ಯೇಕ ಮೂರು ಕಡೆಗಳಲ್ಲಿ ಬೋನ್‌ ಇಟ್ಟಿದ್ದಾರೆ. ಆದರೆ ಚಿರತೆ ಮಾತ್ರ ಅವರ ಸೆರೆಗೆ ಬೀಳುತ್ತಿಲ್ಲ. ಚಿರತೆ ಕೆಲವು ಜನರ ಕಣ್ಣಿಗೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲಿ ಕಣ್ಮರೆಯಾಗುತ್ತಿದೆ. ಅದರ ಜಾಡು ಹಿ‌ಡಿದು ಅರಣ್ಯ ಇಲಾಖೆಯವರು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಅಲ್ಲಿಂದ ಅದು ಮಾಯವಾಗುತ್ತಿದೆ. ಅಲ್ಲದೆ ಅದರ ಜಾಡು ಹಿಡಿದು ಪತ್ತೆಗೆ ಮುಂದಾಗಬೇಕೆಂದರೆ ಭೂಮಿಯು ಒಣಗಿದ್ದರಿಂದ ಚಿರತೆಯ ಪಾದದ ಗುರುತುಗಳು ಸಿಗುತ್ತಿಲ್ಲ. ಅಲ್ಲದೆ ಯಾವುದೇ ನಾಯಿ, ಜನುವಾರುಗಳನ್ನು ತಿಂದು ಹಾಕಿದ ಕುರುಹು ಸಿಗುತ್ತಿಲ್ಲ. ಹೀಗಾಗಿ ಕಾರ್ಯಾಚರಣೆಗೆ ತೊಂದರೆ ಆಗುತ್ತಿದೆ ಎಂದು ತಿಳಿದು ಬಂದಿದೆ.

ಚಿರತೆ ಕಳೆದ ಮೂರು ದಿನಗಳಿಂದ ನೃತಪತುಂಗ ಬೆಟ್ಟ ಸುತ್ತಮುತ್ತಲಿನ ಜನರ ನಿದ್ದೆಗೆಡಿಸಿದೆ. ರಾತ್ರಿ ಹೊತ್ತು ಮಾತ್ರ ಕಾಣಿಸಿಕೊಳ್ಳುತ್ತಿರುವ ಅದು ಹಗಲು ಹೊತ್ತಿನಲ್ಲಿ ಯಾವ ಗಿಡ-ಗಂಟೆ, ಪೊದೆಯಲ್ಲಿ ಅವಿತುಕೊಂಡಿರುತ್ತದೋ ಗೊತ್ತಾಗುತ್ತಿಲ್ಲ. ಇದರ ಪತ್ತೆಗೆ ಸಿಸಿ ಕ್ಯಾಮರಾ ಹಾಗೂ‌ ಡ್ರೋನ್‌ ಸಹ ಬಳಕೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.