ಸೇವಾ ಸಂಗಮಕ್ಕೆ ವಾಣಿಜ್ಯನಗರಿ ಸಜ್ಜು


Team Udayavani, Nov 22, 2017, 12:49 PM IST

h4-rss.jpg

ಹುಬ್ಬಳ್ಳಿ: ರಾಷ್ಟ್ರಪ್ರೇಮ, ಪರಂಪರೆ-ಸಂಸ್ಕೃತಿ ಸಂರಕ್ಷಣೆಯಲ್ಲಿ ತೊಡಗಿರುವ ರಾಷ್ಟ್ರೀಯ ಸೇವಾ ಭಾರತಿ, ವಿವಿಧ ಸಾಮಾಜಿಕ ಸೇವೆಯ ಸುಮಾರು 1ಸಾವಿರಕ್ಕೂ ಅಧಿಕ ಸಂಘ-ಸಂಸ್ಥೆಗಳನ್ನು ಮಡಿಲಲ್ಲಿರಿಸಿಕೊಂಡಿದೆ. ಅದೆಷ್ಟೋ ಸಂಸ್ಥೆಗಳಿಗೆ ಮಾತೃಮಯಿಯಾಗಿದೆ. 

ಇಂತಹ ಸಂಘ-ಸಂಸ್ಥೆಗಳ ರಾಜ್ಯಮಟ್ಟದ ಎರಡನೇ ಸೇವಾ ಸಂಗಮಕ್ಕೆ ವೇದಿಕೆಯಾಗಲು ವಾಣಿಜ್ಯ ನಗರಿ ಸಜ್ಜುಗೊಳ್ಳುತ್ತಿದೆ. ರಾಷ್ಟ್ರೀಯ ಸೇವಾ ಭಾರತಿ ಸೇವಾ ಸಂಗಮ ಸಮಾವೇಶ ರಾಷ್ಟ್ರ ಹಾಗೂ ಆಯಾ ರಾಜ್ಯಮಟ್ಟದಲ್ಲಿ ನಡೆಯುತ್ತದೆ. ಕರ್ನಾಟಕದಲ್ಲಿ ಮೊದಲ ಸೇವಾ ಸಂಗಮ ಶಿವಮೊಗ್ಗದಲ್ಲಿ ಮೂರು ವರ್ಷಗಳ ಹಿಂದೆ ನಡೆದಿತ್ತು.

ಇದೀಗ ಎರಡನೇ ಸೇವಾ ಸಂಗಮ ಡಿಸೆಂಬರ್‌ 1ರಿಂದ 3ರವರೆಗೆ ಹುಬ್ಬಳ್ಳಿಯಲ್ಲಿ ನಡೆಯಲಿದೆ. ರಾಷ್ಟ್ರೀಯ ಸೇವಾ ಭಾರತಿ 2003ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಸಾಮಾಜಿಕ ಸೇವೆ, ಆರೋಗ್ಯ, ಶಿಕ್ಷಣ, ಸ್ವಾವಲಂಬನೆ, ರಾಷ್ಟ್ರಪ್ರೇಮ ಹಾಗೂ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. 

ಇದೇ ಚಿಂತನೆ ಹಾಗೂ ಸೇವೆಯಲ್ಲಿ ತೊಡಗಿದ ಅನೇಕ ಸಂಘ-ಸಂಸ್ಥೆಗಳಿಗೆ ಪ್ರೇರಣೆಯಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌  ಎಸ್‌)ಅಡಿಯಲ್ಲಿ ಬರುವ ವಿವಿಧ ಸೇವಾ ವಿಭಾಗಗಳಲ್ಲಿ ಸೇವಾ ಭಾರತಿಯೂ ಒಂದಾಗಿದೆ.

ಸೇವಾ ಭಾರತಿ ಬಾಲ ಗೋಕುಲ, ವಿದ್ಯಾವಿಕಾಸ ಕೇಂದ್ರ(ಮನೆ ಪಾಠ), ಆರೋಗ್ಯ ಸೇವೆ, ಬುದ್ಧಿಮಾಂದ್ಯ ಮಕ್ಕಳ ಶಾಲೆ, ಮಹಿಳಾ ಸ್ವಾವಲಂಬನೆ, ಸಂಚಾರಿ ಚಿಕಿತ್ಸಾಲಯ, ಬಾಲ ಸಂಸ್ಕಾರ, ಕೌಟುಂಬಿಕ ಮೌಲ್ಯ ವೃದ್ಧಿ, ಪರಂಪರೆ ಸಂರಕ್ಷಣೆ, ದೇಸಿ ಆಟ ಹೀಗೆ ವಿವಿಧ ಸೇವಾ ಕಾರ್ಯದಲ್ಲಿ ತೊಡಗಿದೆ. ದೇಶದಲ್ಲಿ ಒಟ್ಟಾರೆ 1.70ಲಕ್ಷ ಚಟುವಟಿಕೆಗಳು ನಡೆಯುತ್ತಿದ್ದು,

ಕರ್ನಾಟಕದಲ್ಲಿ 8,700ಕ್ಕೂ  ಅಧಿಕ ಚಟುವಟಿಕೆಗಳು ನಡೆಯುತ್ತಿವೆ. 2010ರಲ್ಲಿ ರಾಷ್ಟ್ರಮಟ್ಟದ ಮೊದಲ ಸಮಾವೇಶ ಬೆಂಗಳೂರಿನಲ್ಲಿ ನಡೆದಿತ್ತು. ನಂತರ 2015ರಲ್ಲಿ ದೆಹಲಿಯಲ್ಲಿ ಎರಡನೇ ಸಮಾವೇಶ ನಡೆದಿತ್ತು. ಅದೇ ರೀತಿ ರಾಜ್ಯಮಟ್ಟದಲ್ಲೂ ಮೂರ್‍ನಾಲ್ಕು ವರ್ಷಕ್ಕೊಮ್ಮೆ ಸೇವಾ ಸಂಗಮ ನಡೆಯುತ್ತದೆ. 

ಮಹಿಳಾ-ಯುವ ಸಮಾವೇಶ ವಿಶೇಷ: ರಾಜ್ಯಮಟ್ಟದ ಮೊದಲ ಸೇವಾ ಸಂಗಮ 2013ರಲ್ಲಿ ಶಿವಮೊಗ್ಗದಲ್ಲಿ ಎರಡು ದಿನ ನಡೆದಿತ್ತು. ಸುಮಾರು 120ಕ್ಕೂ ಅಧಿಕ ಸೇವಾ ಸಂಸ್ಥೆಗಳು ಭಾಗಿಯಾಗಿದ್ದವು. ಈಗ 2ನೇ ಸಮ್ಮೇಳನ ಡಿಸೆಂಬರ್‌1-3ರವರೆಗೆ ಎರಡನೇ ಸೇವಾ ಸಂಗಮ ನಡೆಯಲಿದೆ.

ಮೂರು ದಿನ ನಡೆಯುವ ಸಮಾವೇಶದಲ್ಲಿ ಸುಮಾರು 250ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು, 1,000ಕ್ಕೂ ಅಧಿಕ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಹಾಗೂ ಯುವ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

ಪರಿಸರ, ಕೃಷಿ-ಗೋವು, ಸಂಸ್ಕಾರ, ಆರೋಗ್ಯ, ಸಾಮರಸ್ಯ ವಿಷಯಗಳಿಗೆ ಒತ್ತು ನೀಡಿ ಚಿಂತನ-ಮಂಥನ ನಡೆಯಲಿದೆ. ಯುವ ಸಮಾವೇಶದಲ್ಲಿ ಯುವಕರಿಗೆ ಉತ್ತಮ ಮಾರ್ಗದರ್ಶನ, ರಾಷ್ಟ್ರಪ್ರೇಮ, ಮೌಲ್ಯಯುತ ಬದುಕು ಕುರಿತಾಗಿ ಸಂವಾದ, ಮಾರ್ಗದರ್ಶನ ನೀಡಲಾಗುತ್ತದೆ. 

ಮಹಿಳಾ ಸಮಾವೇಶದಲ್ಲಿ ಸುಮಾರು 500-600 ಮಹಿಳೆಯರು ಪಾಲ್ಗೊಳ್ಳಲಿದ್ದು, ಸಂಸ್ಕಾರ, ಸ್ವಾವಲಂಬನೆ, ವಿವಿಧ ಸಾಮಾಜಿಕ ಸೇವಾ ಕಾರ್ಯಗಳ ಕುರಿತು ಅನುಭವ ಮಂಡನೆ, ವಿಚಾರ ವಿನಿಮಯ, ದೇಶಭಕ್ತಿ, ಹಬ್ಬಗಳ ಮಹತ್ವ ಹಾಗೂ ಅರ್ಥಪೂರ್ಣ ಆಚರಣೆ ಕುರಿತಾಗಿ ಚರ್ಚೆ, ಸಂವಾದ ನಡೆಯಲಿದೆ.

ಎರಡು ಸಮಾವೇಶದಲ್ಲೂ ಸಾಧಕ ಮಹಿಳೆಯರು ಹಾಗೂ ಯುವಕರನ್ನು ಸನ್ಮಾನಿಸಲಾಗುತ್ತದೆ. ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸುಮಾರು 100ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗುತ್ತಿದ್ದು, ವಿವಿಧ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿದ ಸಂಘ- ಸಂಸ್ಥೆಗಳು ತಮ್ಮ ಕಾರ್ಯ-ಸಾಧನೆ ಪರಿಚಯಿಸಲು ಇವುಗಳನ್ನು ಮೀಸಲಿಡಲಾಗಿದೆ.

ಒಟ್ಟಾರೆಯಾಗಿ ಹುಬ್ಬಳ್ಳಿಯಲ್ಲಿ ನಡೆಯುವ ಸೇವಾ ಸಂಗಮ ಹಲವು ಹೊಸತನಗಳಿಗೆ ಸಾಕ್ಷಿಯಾಗಿದ್ದು, ಸೇವಾ ಮನೋಭಾವ, ಚಟುವಟಿಕೆಗಳ ಕಿಚ್ಚೊತ್ತಿಸುವ ಹಾಗೂ ಪ್ರೋತ್ಸಾಹಿಸುವ ಕಾರ್ಯ ಮಾಡಲಿದೆ ಎಂಬುದು ಹುಬ್ಬಳ್ಳಿ ಸೇವಾ ಭಾರತಿ ಅಧ್ಯಕ್ಷ ಡಾ|ರಘು ಅಕಮಂಚಿ ಅವರ ಅನಿಸಿಕೆ. 

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.