ಸಿದ್ದರಾಮಯ್ಯ ಕಾರ್ಯಕ್ರಮದಿಂದ ಕಾಂಗ್ರೆಸ್ಗೇ ಹಾನಿ: ಶೆಟ್ಟರ್
Team Udayavani, Aug 5, 2022, 10:15 PM IST
ಹುಬ್ಬಳ್ಳಿ: ಸಿದ್ದರಾಮಯ್ಯ “ಅಮೃತಮಹೋತ್ಸವ’ದಿಂದ ಹಾನಿಯಾಗುವುದು ಕಾಂಗ್ರೆಸ್ಗೇ ಹೊರತು ಬಿಜೆಪಿಗಲ್ಲ.
2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾದ ಜನ್ಮದಿನ ಆಚರಣೆಯಿಂದ ಬಿಜೆಪಿ ಬೆಳವಣಿಗೆ, ಸಂಘಟನೆ, ವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗುವುದಿಲ್ಲ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ರಾಹುಲ್ ಗಾಂಧಿ ಸೂಚನೆ ಮೇರೆಗೆ ಕೃತಕವಾಗಿ ಅಪ್ಪಿಕೊಂಡಿದ್ದಾರೆ ವಿನಃ ಮನಪೂರ್ವಕವಾಗಿ ಅಲ್ಲ. ತೋರಿಕೆಗಾಗಿ ನಾವೆಲ್ಲ ಒಂದಾಗಿದ್ದೇವೆ ಎಂದು ತೋರಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲಿನ ಆಂತರಿಕ ಕದನ ದೊಡ್ಡಮಟ್ಟದಲ್ಲಿ ತಳಮಟ್ಟದಿಂದ ಆರಂಭಗೊಳ್ಳಲಿದೆ ಎಂದರು.
ಬಿಜೆಪಿ ಈ ಹಿಂದೆ ರೈತ ಸಮಾವೇಶ, ಸಂಕಲ್ಪ ಯಾತ್ರೆ ಸೇರಿದಂತೆ ಹಲವು ಸಮಾವೇಶ ಮಾಡಿದೆ. ಅಲ್ಲಿಯೂ ಲಕ್ಷಾಂತರ ಜನ ಸೇರಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಹಜವಾಗಿ ನಾಲ್ಕೈದು ಲಕ್ಷ ಜನ ಸೇರುತ್ತಾರೆ. ಸಿದ್ದು ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಯತ್ನಿಸಿ, ಹೆಚ್ಚಿನ ಹಣ ಖರ್ಚು ಮಾಡಿ ಜನ ಸೇರಿಸಿದ್ದಾರೆ.
ಮತೀಯ ಗಲಭೆ ಸೃಷ್ಟಿಸುತ್ತಿರುವ ಎಸ್ಡಿಪಿಐ-ಪಿಎಫ್ಐ ಸಂಘಟನೆಗಳನ್ನು ರಾಷ್ಟ್ರಾದ್ಯಂತ ನಿಷೇಧಿಸುವ ಬಗ್ಗೆ ಕೇಂದ್ರ ಸರಕಾರದಿಂದ ಚಿಂತನೆ ನಡೆದಿದೆ. ಇದು ಯಾವುದೇ ಹಂತದಲ್ಲೂ ಜಾರಿಗೊಳ್ಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.