Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Team Udayavani, Sep 23, 2024, 12:10 PM IST
ಹುಬ್ಬಳ್ಳಿ: ಬಿಜೆಪಿ ರಾಜಭವನವನ್ನು ಯಾವುದೇ ರೀತಿಯಿಂದ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ ಕಾಂಗ್ರೆಸ್ ರಾಜಭವನವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ದೊಡ್ಡ ಇತಿಹಾಸವೇ ಇದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ (Mahesh Tenginakai) ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು, ಮಾಹಿತಿ ಪಡೆಯಲು ರಾಜ್ಯಪಾಲರು ಮುಂದಾಗಿದ್ದಾರೆ ಇದರಲ್ಲಿತಪ್ಪೇನಿದೆ. ಅಂತಹ ಅಧಿಕಾರ ರಾಜ್ಯಪಾಲರಿಗಿದೆ ಎಂದರು.
ಮುಡಾ, ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿಲ್ಲವೆಂದರೆ ಸಿಎಂಗೆ ಭಯ ಯಾಕೆ. ಆರೋಪದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಈ ವೇಳೆಗೆ ಸಿಎಂ ರಾಜೀನಾಮೆ ನೀಡಬೇಕಾಗಿತ್ತು. ಅದು ಬಿಟ್ಟು ಭಂಡತನದಿಂದ ರಾಜ್ಯಪಾಲರ ವಿರುದ್ದವೇ ಆರೋಪಕ್ಕಿಳಿದಿದ್ದಾರೆ ಎಂದು ಹೇಳಿದರು.
ರಾಜಭವನದಿಂದ ಯಾವ ದಾಖಲೆ ಮಾಹಿತಿ ಸೋರಿಕೆ ಆಗಿರದು. ನಟ ದರ್ಶನ ವಿಚಾರದಲ್ಲಿ ಜೈಲಿನ ಹಲವು ಮಾಹಿತಿಗಳು ಹೇಗೆ ಹೊರಬಂದವು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದರು.
ತಿರುಪತಿ ಪ್ರಸಾದ ಪ್ರಕರಣ ದುರ್ದೈವದ ಸಂಗತಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಆಗಲೇಬೇಕು. ಹಿಂದೂ ಧರ್ಮಕ್ಕೆ ಧಕ್ಕೆ ತರುವ ಹುನ್ನಾರವಿದು ಎಂದು ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನದಲ್ಲಿ ವಿಫಲವಾಗಿದ್ದು, ಅಭಿವೃದ್ದಿಗೂ ಅನುದಾನ ಇಲ್ಲವಾಗಿದೆ. ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ದೊರೆಯುತ್ತಿಲ್ಲ. ಗ್ಯಾರಂಟಿಗಳನ್ನು ಬಂದ್ ಮಾಡಬೇಕೆಂದು ಕಾಂಗ್ರೆಸ್ ಶಾಸಕರೇ ಖಾಸಗಿಯಾಗಿ ಹೇಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ
ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಸಿಸಿ ಕೆಮರಾದ ಇಂಟರ್ನೆಟ್ಗೆ ರೀಚಾರ್ಜ್ ಮಾಡದ ಪಾಲಿಕೆ!
Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ
ಪ್ಯಾಸೆಂಜರ್ ರೈಲು ಓಡಾಟ ಎಂದು? ರೈಲ್ವೆ ಹೋರಾಟಗಾರರಿಗೆ ಬೇಸರ…
Multi-level ಕಾರ್ ಪಾರ್ಕಿಂಗ್ ಮತ್ತೆ ಸಾಕಾರದ ಆಶಾಭಾವ!
Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.