ಗೋಡೆಗಳ ಮೇಲೆ ಕೋವಿಡ್ ಜಾಗೃತಿ ಚಿತ್ತಾರ

ಕೋವಿಡ್ ವಾರಿಯರ್ಸ್‌ಗೆ ಗೌರವ, ಮಾಸ್ಕ್ ಧರಿಸುವ ಅವಶ್ಯಕತೆಯ ಸಂದೇಶ

Team Udayavani, Jul 14, 2020, 12:31 PM IST

ಗೋಡೆಗಳ ಮೇಲೆ ಕೋವಿಡ್ ಜಾಗೃತಿ ಚಿತ್ತಾರ

ಹುಬ್ಬಳ್ಳಿ: ಗೋಡೆಗಳ ಮೂಲಕ ವರ್ಣಮಯ ಚಿತ್ರಗಳ ಮೂಲಕ ವಿವಿಧ ಜಾಗೃತಿ ಮೂಡಿಸುವ ಕಲರ್‌ ಮೈ ಸಿಟಿ ಸಂಸ್ಥೆ ಇದೀಗ ಕೋವಿಡ್ ಸೋಂಕಿನ ಕುರಿತು ಜನರಲ್ಲಿ ಅರಿವು ಮೂಡಿಸಲು ಮುಂದಾಗಿದೆ.

ಇಲ್ಲಿನ ದೇಸಾಯಿ ವೃತ್ತದ ಕೆಳ ಸೇತುವೆ ಗೋಡೆಗಳ ಮೇಲೆ ಜನರಲ್ಲಿ ಅರಿವು ಮೂಡಿಸುವ ಚಿತ್ರಗಳನ್ನು ಬಿಡಿಸಲಾಗಿದೆ. ಸೇತುವೆ ನಿರ್ಮಾಣದ ನಂತರ ಗೋಡೆಗೆ ಬಣ್ಣ ಕೂಡ ಬಳೆದಿರಲಿಲ್ಲ. ಹೀಗಾಗಿ ಗೋಡೆಗಳು ಪೋಸ್ಟರ್‌ಗಳನ್ನು ಅಂಟಿಸುವ ಸ್ಥಳವಾಗಿ ಮಾರ್ಪಟ್ಟಿದ್ದವು. ಕಲರ್‌ ಮೈ ಸಿಟಿ ಸಂಸ್ಥೆಯ ಸದಸ್ಯರು ಅಲ್ಲಿ ಅಂಟಿಸಿದ್ದ ಪೋಸ್ಟರ್‌ ಗಳನ್ನೆಲ್ಲಾ ತೆಗೆದು ಗೋಡೆ ಸ್ವತ್ಛಗೊಳಿಸಿ ಎರಡು ಗೋಡೆಯ ಮೇಲೆ ಬಿಡಿಸಿರುವ ಬಣ್ಣ ಬಣ್ಣದ ಚಿತ್ತಾರಗಳು ಜನರನ್ನು ಆಕರ್ಷಿಸುತ್ತಿವೆ. ಜಾಗೃತಿ ಸಂದೇಶದ ಜತೆಗೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರತರಾಗಿರುವ ಕೋವಿಡ್ ವಾರಿಯರ್ಸ್‌ಗಳ ಸೇವೆ ಸ್ಮರಿಸುವ ಚಿತ್ರಗಳು ಬಹು ಆಕರ್ಷಣೀಯವಾಗಿವೆ.

ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರ ಕಾರ್ಮಿಕರು, ಮಾಧ್ಯಮದ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿರುವ ಸಂದೇಶ ಬಿಡಿಸಲಾಗಿದೆ. ನಾಲ್ವರು ಸದಸ್ಯರು ಮಾತ್ರ ಈ ಕಾರ್ಯದಲ್ಲಿ ತೊಡಗಿದ್ದು, ಧಾರವಾಡದಲ್ಲಿಯೂ ಜನನಿಬಿಡ ಪ್ರದೇಶದಲ್ಲಿ ಜಾಗೃತಿ ಮೂಡಿಸುವ ಚಿತ್ರಗಳನ್ನು ಬಿಡಿಸುವ ಯೋಜನೆಯಿದೆ. ಯುವಕರ ಈ ಕಾರ್ಯ ಜನರ ಪ್ರಶಂಸೆಗೆ ಪಾತ್ರವಾಗಿದೆ.

ಮಾಸ್ಕ್ ಸಂದೇಶ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಇರಲ್ಲ ಎನ್ನುವ ಕಾರಣಕ್ಕೆ ಸಂಸ್ಥೆಯ ನಾಲ್ವರು ಸದಸ್ಯರು ಸ್ವಯಂ ಪ್ರೇರಣೆಯಿಂದ ಚಿತ್ರ ಬಿಡಿಸಿದ್ದಾರೆ. ಒಂದು ಭಾಗದ ಗೋಡೆಗೆ ಜನರು ಹಾಗೂ ಒಂದು ಕುಟುಂಬದ ಸದಸ್ಯರೆಲ್ಲರೂ ಮಾಸ್ಕ್ ಧರಿಸಿರುವ ಚಿತ್ರಗಳನ್ನು ಬಿಡಿಸಲಾಗಿದೆ. ಮಾಸ್ಕ್ ಧರಿಸಿದರೆ ಮಾತ್ರ ಸೋಂಕಿನಿಂದ ದೂರ ಇರಬಹುದಾಗಿದ್ದು, ತಪ್ಪದೆ ಪ್ರತಿಯೊಬ್ಬರು ಮಾಸ್ಕ್ ಧರಿಸಿ ಮನೆಯಿಂದ ಹೊರ ಬನ್ನಿ ಎನ್ನುವ ಜಾಗೃತಿ ಮೂಡಿಸಲಾಗುತ್ತಿದೆ. ಮಾಸ್ಕ್ ಧರಿಸಿ ಹೀರೋ ಆಗಿ, ನಿಮ್ಮ ಜೀವ ಉಳಿಸಿಕೊಳ್ಳಿ ಎನ್ನುವ ಸಂದೇಶ ಸಾರಲಾಗುತ್ತಿದೆ. ಮಹಾನಗರ ಸ್ವಚ್ಚತೆ, ಪ್ಲಾಸ್ಟಿಕ್‌ ಮುಕ್ತ ನಗರ, ಪೋಸ್ಟರ್‌ ಮುಕ್ತ ನಗರ ಹೀಗೆ ಒಂದಲ್ಲಾ ಒಂದು ಕಾರ್ಯಕ್ರಮದ ಮೂಲಕ ಕಲರ್‌ ಮೈ ಸಿಟಿ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಹೀಗಾಗಿ ಬಹುತೇಕ ವೃತ್ತಗಳು, ಸರಕಾರಿ ಕಚೇರಿಗಳ ಗೋಡೆಗಳು ಬಣ್ಣ ಬಣ್ಣದ ಕಲಾಕೃತಿಗಳ ಚಿತ್ತಾರಗಳಿಂದ ಕಂಗೊಳಿಸುವಂತಾಗಿದೆ.

ಅನೇಕ ಜನರು ಕೋವಿಡ್ ಸೋಂಕನ್ನು ಹಗುರುವಾಗಿ ತೆಗೆದುಕೊಂಡಿದ್ದಾರೆ. ಸರಕಾರದ ಮಾರ್ಗಸೂಚಿಯ ಪ್ರಕಾರ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಆದರೆ ಕೆಲವರು ಇದನ್ನು ಪಾಲಿಸುತ್ತಿಲ್ಲ. ಹೀಗಾಗಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕೆನ್ನುವ ಕಾರಣದಿಂದ ಕಲರ್‌ ಮೈ ಸಿಟಿ ಮುಂದಾಗಿದ್ದು, ರಾಜ್ಯದಲ್ಲಿ ಇದು ಮೊದಲ ಪ್ರಯತ್ನವಾಗಿದೆ. -ಕಿರಣ ಉಪ್ಪಾರ, ಸಂಸ್ಥಾಪಕ, ಕಲರ್‌ ಮೈ ಸಿಟಿ ಸಂಸ್ಥೆ

ಕಲರ್‌ ಮೈ ಸಿಟಿ ಸಂಸ್ಥೆ ಸದಸ್ಯರು ಮಹಾನಗರ ಸ್ವಚ್ಛತೆಗೆ ಸೇರಿದಂತೆ ಪ್ರತಿಯೊಂದು ಹಂತದಲ್ಲಿಯೂ ವಿನೂತನವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಕೋವಿಡ್‌ -19 ಕುರಿತು ಜನರಲ್ಲಿ ಮೂಡಿಸುತ್ತಿರುವ ಜಾಗೃತಿ ಕಾರ್ಯಕ್ರಮ ಪ್ರಶಂಸನೀಯ. ಇಂಥ ಕಲಾಕೃತಿಗಳ ಮೇಲೆ ಉಗುಳುವುದು, ಪೋಸ್ಟರ್‌ಗಳನ್ನು ಅಂಟಿಸುವುದನ್ನು ಮಾಡಬಾರದು. -ಅಶ್ವಿ‌ನ್‌ ಮಗಜಿಕೊಂಡಿ

 

-ವಿಶೇಷ ವರದಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.