![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 19, 2019, 9:20 AM IST
ಹುಬ್ಬಳ್ಳಿ: ನಗರದ ಮಿನಿ ವಿಧಾನಸೌಧದ ತಾಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಹುಬ್ಬಳ್ಳಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ 2019-20ನೇ ಸಾಲಿನ ಬೆಳೆ ವಿಮೆಗೆ ಮುಂಗಾರು ಕಂತು ತುಂಬುವ ಕೊನೆಯ ದಿನಾಂಕವನ್ನು ಜು. 31ರಂದು ನಿಗದಿಪಡಿಸಲಾಗಿದ್ದು, ಬ್ಯಾಂಕ್ಗಳು ರೈತರಿಗೆ ಪೂರಕ ಮಾಹಿತಿ ನೀಡಬೇಕು ಎಂದು ಜಿಲ್ಲಾ ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಈಶ್ವರನಾಥ ಹೇಳಿದರು.
ತಾಪಂ ಸಭಾಭವನದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ವಿಮೆ ಕಂತು ತುಂಬಲು ಭಾರತಿ ಅಕ್ಸಾ ಜನರಲ್ ಇನ್ಶೂರೆನ್ಸ್ ಕಂಪನಿಗೆ ವಹಿಸಲಾಗಿದೆ. ಬ್ಯಾಂಕ್ಗಳ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದರು.
2018-19ನೇ ಸಾಲಿನ ಬೆಳೆ ವಿಮೆ ಹಣ ಇನ್ನೂ ಬಂದಿಲ್ಲ. ಲೋಕಸಭೆ ಚುನಾವಣೆ ಸೇರಿದಂತೆ ಹಲವು ಕಾರಣಗಳಿಂದ ಅದು ವಿಳಂಬವಾಗಿರಬಹುದು. ಬ್ಯಾಂಕ್ ಅಧಿಕಾರಿಗಳು ರೈತರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಬಾರದು. ಬೆಳೆ ವಿಮೆ ಹಣವನ್ನು ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಳ್ಳುವುದಾಗಿ ಕೆಲ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಹೇಳುತ್ತಿರುವುದು ಗಮನಕ್ಕೆ ಬಂದಿದೆ. ಆಲ್ಲದೇ ಸಾಲ ಹೊಂದಿರುವ ರೈತರ ಬ್ಯಾಂಕ್ ಖಾತೆ ಸ್ಥಗಿತಗೊಳಿಸಲಾಗುತ್ತದೆ ಎಂದು ಗೊಂದಲ ಮೂಡಿಸಲಾಗಿದೆ. ಈ ಕುರಿತು ಕೆಲವರು ಜಿಲ್ಲಾಧಿಕಾರಿಗೂ ದೂರು ನೀಡಿದ್ದಾರೆ. ಸರಕಾರಕ್ಕೆ ಕೆಟ್ಟ ಹೆಸರು ತರುವುದು ಸರಿಯಲ್ಲ ಎಂದು ಹೇಳಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕವಾಗಿ 6000 ರೂ. ನೀಡಲಾಗುತ್ತದೆ. 4 ತಿಂಗಳಿಗೆ 2000ರೂ.ಗಳಂತೆ ಫಲಾನುಭವಿ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ. ಇದು ಕೇಂದ್ರ ಸರಕಾರದ ಯೋಜನೆಯಾಗಿದ್ದು, ಸಂಪೂರ್ಣ ಹಣವನ್ನು ಕೇಂದ್ರ ಸರಕಾರವೇ ನೀಡುತ್ತದೆ ಎಂದರು.
ಗ್ರಾಹಕ ಸೇವಾ ಕೇಂದ್ರ: ಭಾರತಿ ಅಕ್ಸಾ ಜನರಲ್ ಇನ್ಶೂರೆನ್ಸ್ ಕಂಪನಿ ಜಿಲ್ಲಾ ವ್ಯವಸ್ಥಾಪಕ ವಿಜಯಾನಂದ ಬೆಲ್ಲದ ಮಾತನಾಡಿ, ಭಾರತಿ ಅಕ್ಸಾ ಬ್ಯಾಂಕ್ 2019-20ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ವಿಮೆ ಕಂತು ಭರಿಸಿಕೊಳ್ಳಲಿದೆ. ನಮ್ಮ ಸಂಸ್ಥೆಯ ವತಿಯಿಂದ ಇಲ್ಲಿನ ವಿದ್ಯಾನಗರ, ಬ್ಯಾಹಟ್ಟಿ, ತಾರಿಹಾಳ, ಛಬ್ಬಿಯಲ್ಲಿ ಗ್ರಾಹಕರ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಬ್ಯಾಂಕ್ಗಳಲ್ಲಿ ಅಲ್ಲದೇ ಸೇವಾ ಕೇಂದ್ರಗಳಲ್ಲಿಯೂ ಕಂತು ತುಂಬಬಹುದು ಎಂದು ತಿಳಿಸಿದರು.
ಅರ್ಜಿ, ಆರ್ಟಿಸಿ ಉತಾರ, ಬ್ಯಾಂಕ್ ಪಾಸ್ಬುಕ್ ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಬೇಕಾಗುತ್ತದೆ. ಕೆಂಪು ಮೆಣಸಿನಕಾಯಿ ಹಾಗೂ ಹತ್ತಿಯನ್ನು ವಾಣಿಜ್ಯ ಬೆಳೆಯಾಗಿ ಗುರುತಿಸಲಾಗಿದ್ದು, ವಾಣಿಜ್ಯ ಬೆಳೆಗಳಿಗೆ ವಿಮಾ ಮೊತ್ತದ ಶೇ.5 ಹಾಗೂ ಉಳಿದ ಬೆಳೆಗಳಿಗೆ ಶೇ.2 ಹಣವನ್ನು ಕಂತು ರೂಪದಲ್ಲಿ ಭರಿಸಿಕೊಳ್ಳಲಾಗುತ್ತದೆ ಎಂದರು.
ರೈತರು ಹೆಚ್ಚಿನ ವಿಮಾ ಮೊತ್ತದ ಆಸೆಗಾಗಿ ಮಳೆಯಾಶ್ರಿತ ಬೇಸಾಯವಿದ್ದರೂ ನೀರಾವರಿ ಬೇಸಾಯ ಎಂದು ಅರ್ಜಿಯಲ್ಲಿ ಬರೆಯುತ್ತಾರೆ. ಉತಾರದಲ್ಲಿ ಒಣ ಬೇಸಾಯ ಎಂದು ನಮೂದಾಗಿರುವುದರಿಂದ ವಿಮಾ ಮೊತ್ತ ನೀಡಲು ತೊಂದರೆಯಾಗುತ್ತದೆ. ಆದ್ದರಿಂದ ರೈತರು ನಿಜ ಸ್ಥಿತಿ ಬರೆಯಬೇಕು ಎಂದು ಹೇಳಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.