ಸಂಕಷ್ಟ ದಲ್ಲಿರುವವರ ಸಮಸ್ಯೆ ಆಲಿಸಿದ ಡಿಕೆಶಿ

ತೊಂದರೆಯಲ್ಲಿರುವವರಿಗೆ ಆತ್ಮಸ್ಥೈರ್ಯ | ಆಹಾರ ಕಿಟ್‌-ಆರ್ಥಿಕ ನೆರವು ವಿತರಣೆ

Team Udayavani, Jun 1, 2021, 6:09 PM IST

31hub-31

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ನಗರದ ವಿವಿಧೆಡೆ ಸಂಚರಿಸಿ ಕೋವಿಡ್‌ ಕರ್ಫ್ಯೂ ಪರಿಣಾಮ ಸಂಕಷ್ಟಕ್ಕೊಳಗಾಗಿರುವ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿದರು. ಸರಕಾರದ ಸೌಲಭ್ಯ, ಕೋವಿಡ್‌ ಪ್ಯಾಕೇಜ್‌ ಕುರಿತು ಮಾಹಿತಿ ಪಡೆದರು.

ಬೆಳಗ್ಗೆ ಧಾರವಾಡದಿಂದ ನಗರಕ್ಕೆ ಆಗಮಿಸಿ ನವನಗರದ ಅಲೆಮಾರಿ ಜನಾಂಗದವರ ಗುಡಿಸಲುಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಕೋವಿಡ್‌ ಸಂದರ್ಭದಲ್ಲಿ ದುಡಿಮೆ ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ದಾನಿಗಳು ನೀಡುತ್ತಿರುವ ಆಹಾರ ಧಾನ್ಯಗಳಿಂದ ಜೀವನ ನಡೆಯುತ್ತಿದೆ. ಸರಕಾರದಿಂದ ಯಾವುದೇ ನೆರವು ದೊರೆತಿಲ್ಲ. ಏನಾದರು ಕೇಳಿದರೆ ನಿಮ್ಮ ದಾಖಲೆಗಳು ಇಲ್ಲ. ಹೀಗಾಗಿ ಯಾವುದೇ ಅನುದಾನ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಇವರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಟಿಪ್ಪಣಿ ಮಾಡಿಕೊಂಡ ಡಿಕೆಶಿ, ಕಾಂಗ್ರೆಸ್‌ ಮುಖಂಡ ನಾಗರಾಜ ಗೌರಿ ನೀಡುವ ಆಹಾರ ಧಾನ್ಯ ಕಿಟ್‌ ವಿತರಿಸಿ ಆರೋಗ್ಯ ಹಾಗೂ ಧೈರ್ಯದಿಂದ ಇರುವಂತೆ ಹೇಳಿದರು. ನಂತರ ಅಮರಗೋಳದಲ್ಲಿರುವ ಕೆಸಿಸಿ ಬ್ಯಾಂಕ್‌ ಚೇರ¾ನ್‌ ಬಾಪುಗೌಡ ಪಾಟೀಲ ಅವರ ನಿವಾಸಕ್ಕೆ ತೆರಳಿದರು. ಅಲ್ಲಿ ಆಟೋರಿಕ್ಷಾ ಚಾಲಕರು, ದಿನಗೂಲಿ ನೌಕರು, ಸವಿತಾ ಸಮಾಜದ ಪ್ರಮುಖರೊಂದಿಗೆ ಮಾತನಾಡಿದರು. ಕಳೆದ ವರ್ಷದ ಪ್ಯಾಕೇಜ್‌ ಹಂಚಿಕೆ ಕುರಿತು ಮಾಹಿತಿ ಪಡೆದುಕೊಂಡರು. ವಿವಿಧ ಕಾರಣಗಳನ್ನು ಹೇಳಿ ಪರಿಹಾರ ನೀಡಿಲ್ಲ. ಆಟೋರಿಕ್ಷಾಗಳು ಸಂಚರಿಸುವಂತಿಲ್ಲ. ಇದರಿಂದ ಜೀವನ ನಡೆಸಲು ತುಂಬ ಕಷ್ಟವಾಗಿದೆ. ಹೇಗಾದರೂ ಮಾಡಿ ಸರಕಾರದಿಂದ ನಮಗೆ ಪರಿಹಾರ ಕೊಡಿಸಿ ಎಂದು ತಮ್ಮ ಸಮಸ್ಯೆ ಹೇಳಿಕೊಂಡರು. ನಂತರ ಆಟೋರಿಕ್ಷಾ ಚಾಲಕರು, ದಿನಗೂಲಿ ನೌಕರರು, ಕೂಲಿ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಣೆಗೆ ಮಾಡಿದರು. ಉಣಕಲ್ಲ ದುರ್ಗದ ಓಣಿಯಲ್ಲಿರುವ ಉದ್ಯಮಿ ವೀರೇಶ ಉಂಡಿ ಅವರ ನಿವಾಸದ ಬಳಿ ಅಂಗನವಾಡಿ, ಆಶಾ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು, ಸರಕಾರ ನಮ್ಮಿಂದ ಸರ್ವೇ ಸೇರಿದಂತೆ ಇನ್ನಿತರೆ ಕಾರ್ಯಗಳನ್ನು ಮಾಡಿಸಿಕೊಳ್ಳುತ್ತಿದೆ. ಆದರೆ ಈ ಕೆಲಸಕ್ಕೆ ಒಂದಿಷ್ಟು ಗೌರವಧನ ನೀಡಿಲ್ಲ ಎಂದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಉದ್ಯಮಿ ವೀರೇಶ ಉಂಡಿ ತಲಾ 2 ಸಾವಿರ ರೂ. ವಿತರಣೆ ಮಾಡಿದರು. ರೈತಾಪಿ ಕೆಲಸಕ್ಕೆ, ಅಂಗಡಿ, ಎಪಿಎಂಸಿ ಹೋಗುವ ರೈತರ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ ಎಂದು ಉಣಕಲ್ಲನ ಕೆಲ ರೈತರು ಡಿ.ಕೆ. ಶಿವಕುಮಾರ ಗಮನಕ್ಕೆ ತಂದರು. ನಂತರ ಉಪಹಾರ ಮುಗಿಸಿಕೊಂಡು ನೂಲ್ವಿ ಗ್ರಾಮದತ್ತ ತೆರಳಿದರು. ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರಾದ ಅಲ್ತಾಫ್‌ ಹಳ್ಳೂರು, ಅನೀಲಕುಮಾರ ಪಾಟೀಲ, ನಾಗರಾಜ ಛಬ್ಬಿ, ನಾಗರಾಜ ಗೌರಿ, ರಜತ ಉಳ್ಳಾಗಡ್ಡಿಮಠ ಇನ್ನಿತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.