ಡೆಂಘೀ ಜಾಗೃತಿ ಕಾರ್ಯಕ್ರಮ
Team Udayavani, Sep 22, 2017, 1:01 PM IST
ಹುಬ್ಬಳ್ಳಿ: ದೇಶಪಾಂಡೆ ಫೌಂಡೇಶನ್ನ ಲೀಡರ್ ಎಕ್ಸಲ್ರೇಟಿಂಗ್ ಡೆವಲೆಪ್ಮೆಂಟ್ ಪ್ರೋಗ್ರಾಂ ವತಿಯಿಂದ ನಗರದ ಕೆಲವೆಡೆ ಫಾಗಿಂಗ್ ಮಾಡುವ ಮೂಲಕ ಡೆಂಘೀ ಜ್ವರದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ನಗರದ ಗೋಕುಲ, ಲಕ್ಷ್ಮಿವನ, ನೇಕಾರ ನಗರ, ಕಲ್ಯಾಣ ನಗರ, ಬಳಗೇರ ಒಣಿ ಮತ್ತು ಹಲಗೇರ ನಗರಗಳಲ್ಲಿ ಫಾಗಿಂಗ್ ಮಾಡಿ ಡೆಂಘೀ ಜ್ವರದ ಕುರಿತು ಜಾಗೃತಿ ಮೂಡಿಸುವ ಕೆಲಸ ನಡೆಯಿತು. ಸಂಸ್ಥೆಯ ಪೂಜಾ ಗಾವಡೆ ಮಾತನಾಡಿ, ನಗರದಲ್ಲಿ ಡೆಂಘೀ ಹೆಚ್ಚುತ್ತಿರುವ ಕಾರಣದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ನಗರದ ಕೆಲ ಪ್ರದೇಶಗಳಲ್ಲಿ ಫಾಗಿಂಗ್ ಮಾಡುವ ಮೂಲಕ ಜನರನ್ನು ಜಾಗೃತಿಗೊಳಿಸುವ ಕಾರ್ಯ ಮಾಡುತ್ತಿದ್ದೇವೆ. ಜನರ ಸಹಕಾರ ದೊರೆತರೆ ನಗರದ ಇನ್ನಿತರ ಪ್ರದೇಶಗಳಲ್ಲಿ ಫಾಗಿಂಗ್ ಮಾಡುವ ಕಾರ್ಯ ಸಂಸ್ಥೆಯಿಂದ ನಡೆಯಲಿದೆ.
ಅತೀಯಾದ ಸೊಳ್ಳೆ ಅಥವಾ ಡೆಂಘೀ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಮೊ. 7022680645ಗೆ ಕರೆ ಮಾಡಿದರೆ ಫಾಗಿಂಗ್ ಮಾಡಲಾಗುವುದು ಎಂದರು. ಲೀಡ್ನ ವಿದ್ಯಾರ್ಥಿ ಇಮ್ಯಾನುವಲ್ ಪಠಾರೆ ಮಾತನಾಡಿ, ಮಲೀನ ವಾತಾವರಣದಿಂದ ಹರಡುವ ಡೆಂಘೀ ಜ್ವರಕ್ಕೆ ಸೂಕ್ತ ಮಾಹಿತಿ ಕೊರತೆಯಿಂದ ಜನ ಪರದಾಡುತ್ತಿದ್ದಾರೆ.
ಗುಂಡಿಗಳು ಮತ್ತು ಟೈರ್ಗಳಲ್ಲಿ ನಿಂತ ನೀರಿನಿಂದ ಹುಟ್ಟಿಕೊಳ್ಳುವ ಸೊಳ್ಳೆಯಿಂದ ಈ ಜ್ವರ ಕಾಣಿಸಿಕೊಳ್ಳಲಿದೆ. ಹೀಗಾಗಿ ಸುತ್ತಲಿನ ಪರಿಸರ ಸ್ವತ್ಛತೆಯಿಂದ ಕಾಪಾಡಿಕೊಳ್ಳುವ ಮೂಲಕ ಡೆಂಘೀನಿಂದ ದೂರವಿರಬಹುದೆಂದು ಹೇಳಿದರು. ಆರ್ಯ ವಿಶ್ವನಾಥ ಹಳ್ಳಿಕೇರಿ, ಅಭಿನಂದನ ಕವ್ವಾಳೆ, ಗುರುಸಿದ್ದಯ್ಯ ಕೊಣ್ಣುರಮಠ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.