ಆತಂಕ ಸೃಷ್ಟಿಸಿದ ಡೆಂಘೀ – ಚಿಕೂನ್‌ಗುನ್ಯಾ


Team Udayavani, Mar 18, 2020, 10:34 AM IST

ಆತಂಕ ಸೃಷ್ಟಿಸಿದ ಡೆಂಘೀ – ಚಿಕೂನ್‌ಗುನ್ಯಾ

ಧಾರವಾಡ: ಎರಡೂವರೆ ತಿಂಗಳೊಳಗೆ 14 ಜನರಲ್ಲಿ ಡೆಂಘೀ ದೃಢವಾಗಿದ್ದರೆ ಚಿಕೂನ್‌ಗುನ್ಯಾ ರೋಗ ಐವರಲ್ಲಿ ಖಚಿತವಾಗಿದೆ. ಇದರ ಜೊತೆಗೆ ಮಲೇರಿಯಾ ರೋಗ ಮೂವರಲ್ಲಿ ಕಂಡು ಬಂದಿದ್ದರೆ ಮಿದುಳು ಜ್ವರ ಖಚಿತವಾಗಿಲ್ಲ.

ಡೆಂಘೀ ಆತಂಕ: 2015ರಲ್ಲಿ 46, 2016ರಲ್ಲಿ 97, 2017ರಲ್ಲಿ 172, 2018ರಲ್ಲಿ 112, 2019ರಲ್ಲಿ 250 ಜನರಲ್ಲಿ ಡೆಂಘೀ ರೋಗ ದೃಢಪಟ್ಟಿದೆ. ಸದ್ಯ ಈ ವರ್ಷದ ಮಾಚ್‌ 1ರಿಂದ 17ರೊಳಗೆ ಸಂಶಯ ಮೇರೆಗೆ 49 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ 5 ಜನರಲ್ಲಿ ಡೆಂಘೀ ದೃಢಪಟ್ಟಿದೆ. ಇನ್ನೂ ಈ ವರ್ಷದ ಜನೇವರಿಯಿಂದ ಮಾ. 17ರ ವರೆಗೆ 109 ಜನರ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಈ ಪೈಕಿ 106 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ 14 ಜನರಲ್ಲಿ ಡೆಂಘೀ ದೃಢಪಟ್ಟಿದೆ. ಈ ಪೈಕಿ ಕಲಘಟಗಿಯಲ್ಲಿ 1, ಕುಂದಗೋಳದಲ್ಲಿ 2, ನವಲಗುಂದದಲ್ಲಿ 2, ಧಾರವಾಡದ ಶಹರದಲ್ಲಿ 1 ಹಾಗೂ ಹುಬ್ಬಳ್ಳಿಯ ಶಹರದಲ್ಲಿ 8 ಜನರಲ್ಲಿ ಡೆಂಘೀ ಖಚಿತವಾಗಿದೆ.

ಚಿಕೂನ್‌ಗುನ್ಯಾ ಗುನ್ನ: 2015ರಲ್ಲಿ 17, 2016ರಲ್ಲಿ 6, 2017ರಲ್ಲಿ 11, 2018ರಲ್ಲಿ 85, 2019 ರಲ್ಲಿ 121 ಜನರಲ್ಲಿ ಚಿಕೂನ್‌ಗುನ್ಯಾ ಕಾಣಿಸಿಕೊಂಡು ತೊಂದರೆ ಉಂಟು ಮಾಡಿತ್ತು. ಈ ವರ್ಷ ಕಳೆದ ಎರಡೂವರೆ ತಿಂಗಳಲ್ಲಿ 34 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ ಈ ಪೈಕಿ ಐವರಲ್ಲಿ ರೋಗ ದೃಢಪಟ್ಟಿದೆ. ಧಾರವಾಡ ಗ್ರಾಮೀಣದಲ್ಲಿ 2, ಕಲಘಟಗಿ, ಕುಂದಗೋಳ, ನವಲಗುಂದಲ್ಲಿ ತಲಾ ಒಬ್ಬರಲ್ಲಿ ರೋಗ ದೃಢಪಟ್ಟಿರುವುದು ಗ್ರಾಮೀಣದಲ್ಲಿ ಆತಂಕ ಮನೆ ಮಾಡಿದೆ.

ಮಲಗಿದ ಮಲೇರಿಯಾ: 2015ರಲ್ಲಿ 96, 2016ರಲ್ಲಿ 78, 2017ರಲ್ಲಿ 76, 2018ರಲ್ಲಿ 25, 2019ರಲ್ಲಿ 17 ಜನರಲ್ಲಿ ಕಾಣಿಸಿಕೊಂಡಿದ್ದ ಮಲೇರಿಯಾ ರೋಗವು 2020 ರ ಎರಡೂವರೆ ತಿಂಗಳಲ್ಲಿ 3 ಜನರಲ್ಲಿ ದೃಢಪಟ್ಟಿದೆ. ಜಿಲ್ಲೆಯ ನವಲಗುಂದ ತಾಲೂಕಿನಲ್ಲಿಯೇ 3 ಜನರಿಗೆ ಇದು ಬಂದಿದೆ. ವರ್ಷದಿಂದ ವರ್ಷಕ್ಕೆ ಇದರ ಪ್ರಭಾವ ಕಡಿಮೆ ಆಗುತ್ತಲಿದೆ. ಇದರ ಜೊತೆಗೆ ಮೆದುಳು ಜ್ವರವು 2016, 2017, 2019ರಲ್ಲಿ ಕಂಡು ಬಂದಿಲ್ಲ. ಆದರೆ 2018ರಲ್ಲಿ ಈ ಜ್ವರಕ್ಕೆ ಜಿಲ್ಲೆಯಲ್ಲಿ ಓರ್ವ ಮೃತಪಟ್ಟಿದ್ದ. ಆದರೆ ಈ ವರ್ಷ ಮೆದುಳು ಜ್ವರದ ಲಕ್ಷಣಗಳು ಕಂಡು ಬಂದ ಮೂವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಮೆದುಳು ಜ್ವರ ಇಲ್ಲದಿರುವುದು ದೃಢಪಟ್ಟಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.