28-29ರಂದು ದೇಶಪಾಂಡೆ ಪ್ರತಿಷ್ಠಾನದಿಂದ ಅಭಿವೃದ್ಧಿ ಸಂವಾದ


Team Udayavani, Jan 24, 2017, 12:30 PM IST

hub1.jpg

ಹುಬ್ಬಳ್ಳಿ: ದಕ್ಷಿಣ ಏಷ್ಯಾದ ಅತಿ ದೊಡ್ಡ ಸಾಮಾಜಿಕ ಉದ್ಯಮಶೀಲತಾ ಸಮ್ಮೇಳನ ಹಾಗೂ ಅಭಿವೃದ್ಧಿ ಸಂವಾದ ಜ.28-29ರಂದು ಇಲ್ಲಿನ ಬಿವಿಬಿ ಇಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿನ ದೇಶಪಾಂಡೆ ಪ್ರತಿಷ್ಠಾನದ ಕಚೇರಿ ಆವರಣದಲ್ಲಿ ನಡೆಯಲಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇಶಪಾಂಡೆ ಪ್ರತಿಷ್ಠಾನದ ಸಂಸ್ಥಾಪಕ ಡಾ| ಗುರುರಾಜ ದೇಶಪಾಂಡೆ, ಸಾಮಾಜಿಕ ಉದ್ಯಮಶೀಲತೆ ಉದ್ದೇಶದೊಂದಿಗೆ ಹುಬ್ಬಳ್ಳಿ ಆರಂಭವಾದ ದೇಶಪಾಂಡೆ ಪ್ರತಿಷ್ಠಾನ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ಬಾರಿಯ ಅಭಿವೃದ್ಧಿ ಸಂವಾದದ ಧ್ಯೇಯ  ಅಭಿವೃದ್ಧಿ ಬೆಳವಣಿಗೆ ಸ್ಥಿತಿ ಪರಿಣಾಮಕಾರಿ ಹೆಚ್ಚಿಸುವುದುಎಂಬುದಾಗಿದೆ ಎಂದರು. 

ಈ ಬಾರಿಯ ಅಭಿವೃದ್ಧಿ ಸಂವಾದದಲ್ಲಿ ಸಚಿವ ಪ್ರಿಯಾಂಕ ಖರ್ಗೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ| ಸುಭಾಷ್‌ಚಂದ್ರ ಖುಂತಿಯ, ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಬೇಜವಾಡ ವಿಲ್ಸನ್‌, ಎಂಐಟಿ ಟಾಟಾ ಸೆಂಟರ್‌ ಫಾರ್‌ ಟೆಕ್ನಾಲಾಜಿ ಆ್ಯಂಡ್‌ ಡಿಸೈನ್‌ ನಿರ್ದೇಶಕ ಡಾ| ಚಿಂತನ್‌ ವೈಷ್ಣವ್‌, ಸೇವ್‌ ಮದರ್‌ ಸಂಸ್ಥಾಪಕ ಡಾ|ಶಿಬಿನ್‌ ಗಂಜು, ಅಗಸ್ತ್ಯ ಪ್ರತಿಷ್ಠಾನದ ರಾಮಜೀ ರಾಘವನ್‌, ಕೆಡಿಆರ್‌ ಡಿಪಿಯ ಡಾ| ಎಲ್‌.ಎಚ್‌.ಮಂಜುನಾಥ, ಇಸ್ರೇಲ್‌ನ ಇಸ್ರೇಲ್‌ ಗಾನೋಟ್‌, ದಿ ಬ್ರಿಜ್‌ಸ್ಪಾನ್‌ ಗ್ರೂಪ್‌ನ ಸೌಮಿತ್ರ ಪಾಂಡೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.  

ಎಲ್ಲ ಸಹಕಾರ ಅಗತ್ಯ: ದೇಶಪಾಂಡೆ ಪ್ರತಿಷ್ಠಾನ ಆರಂಭಗೊಂಡ ಹತ್ತು ವರ್ಷದಲ್ಲಿ ಹುಬ್ಬಳ್ಳಿಯ ಸಾಮರ್ಥ್ಯ ಹಲವು ರೀತಿಯಲ್ಲಿ ಹೆಚ್ಚಾಗಿದೆ. ಇಲ್ಲಿಗೆ ಇನ್ಫೋಸಿಸ್‌ ಬಂದಿದೆ. ದೇಶದಲ್ಲೇ ಅತಿ ದೊಡ್ಡ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರ ಹಾಗೂ ನವೋದ್ಯಮಿಗಳ ಉತ್ತೇಜನಕ್ಕೆ ದೇಶದಲ್ಲೇ ಅತಿ ದೊಡ್ಡ ಇನ್‌ಕುಬೇಷನ್‌ ಕೇಂದ್ರ ಕಾರ್ಯಾರಂಭಕ್ಕೆ ಸಿದ್ಧವಾಗಿವೆ ಎಂದರು. ಜಾಗತೀಕರಣ ಜಾರಿಗೊಂಡು 25-30 ವರ್ಷ ಆಗುತ್ತಿದೆ.

ಜನರಿಗೆ ಇದರಿಂದಾದ ಲಾಭವೇನು ಎಂಬುದರ ಬಗ್ಗೆ  ಅಮೆರಿಕ, ಭಾರತ ಸೇರಿದಂತೆ ಅನೇಕ ಕಡೆ ಚರ್ಚೆ ಇಂದಿಗೂ ನಡೆಯುತ್ತಿದೆ. ಉದ್ಯಮ, ಶಿಕ್ಷಣ, ಆರೋಗ್ಯ, ಕೃಷಿ ಇನ್ನಿತರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಜತೆಗೆ ಆರ್ಥಿಕಾಭಿವೃದ್ಧಿ ವೇಗಕ್ಕೆ ಗಮನ ನೀಡಬೇಕಿದೆ ಎಂದರು. ದೇಶಪಾಂಡೆ ಪ್ರತಿಷ್ಠಾನ ಕಳೆದ 10 ವರ್ಷಗಳಲ್ಲಿ ಕೈಗೊಂಡ ಯೋಜನೆಗಳ ಸಾಮರ್ಥ್ಯ ಇನ್ನಷ್ಟು ಹೆಚ್ಚಬೇಕಿದೆ. ಮುಂದಿನ ಹೆಜ್ಜೆಯಾಗಿ ಹೈದರಾಬಾದ ಕರ್ನಾಟಕ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆಗೊಳ್ಳಬೇಕಿದೆ.

ಇದಕ್ಕೆ ಸರಕಾರ,ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳು, ಸ್ವಯಂ ಸಂಸ್ಥೆಗಳ ಸಹಕಾರವೂ ಮುಖ್ಯವಾಗಿದೆ. ಐಐಟಿ, ಎಂಐಟಿ, ತಾಂತ್ರಿಕ ಕಾಲೇಜುಗಳು, ಪ್ರತಿಷ್ಠಾನಗಳ ಸಂಖ್ಯೆ ಹೆಚ್ಚಬೇಕಿದೆ. ಸುಸ್ಥಿರ ಸ್ಥಿತಿ ನಿರ್ಮಾಣಗೊಂಡ ಸಮಸ್ಯೆಗಳಿಗೆ ಜನರೇ ಪರಿಹಾರ ಕಂಡುಕೊಳ್ಳುವಂತಾಗಬೇಕು. ಸಮುದಾಯ ಬಳಕೆ ಸಾಮರ್ಥ್ಯ ಹೆಚ್ಚಳವಾಗಬೇಕು. ಈ ಭಾಗದಲ್ಲಿ ಬದಲಾವಣೆ ಶಕೆ ಆರಂಭವಾಗಿದ್ದು, ಮುಂದಿನ 10 ವರ್ಷಗಳಲ್ಲಿ ಇದು ಸ್ಪಷ್ಟರೂಪ ಪಡೆದುಕೊಳ್ಳಲಿದೆ ಎಂದರು. 

ಡಾ| ನೀಲಂ ಮಹೇಶ್ವರಿ ಮಾತನಾಡಿ, ಅಭಿವೃದ್ಧಿ ಸಂವಾದಕ್ಕೆ ಈಗಾಗಲೇ 326 ಜನರು ನೋಂದಣಿ ಮಾಡಿದ್ದು, ಸುಮಾರು 40ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 65-70 ಜನ ಸಂಪನ್ಮೂಲ ವ್ಯಕ್ತಿಗಳು, 25  ಹೂಡಿಕೆದಾರರು, 10ಕ್ಕೂ ಹೆಚ್ಚು ಸಿಎಸ್‌ಆರ್‌ ಮುಖ್ಯಸ್ಥರು ಭಾಗವಹಿಸುತ್ತಿದ್ದಾರೆ ಎಂದರು. ದೇಶಪಾಂಡೆ ಪ್ರತಿಷ್ಠಾನದ ಸಹ ಸಂಸ್ಥಾಪಕಿ ಜಯಶ್ರೀ  ದೇಶಪಾಂಡೆ, ಸಿಇಒ ನವೀನ ಝಾ, ಐಟಿ ಮುಖ್ಯಸ್ಥ ಎಸ್‌.ಕೆ.ಸುನಿಲ್‌, ಇನ್‌ಕುಬೇಷನ್‌ ಮುಖ್ಯಸ್ಥ ಸಿ.ಎಂ.ಪಾಟೀಲ ಇನ್ನಿತರರು ಇದ್ದರು.   

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.