![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 18, 2024, 2:17 PM IST
ಉದಯವಾಣಿ ಸಮಾಚಾರ
ಧಾರವಾಡ: ಕವಿವಿ ಮಹಿಳಾ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಮಹಿಳಾ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ವೇಗದ ಪ್ರಗತಿಯಲ್ಲಿ ಸ್ಫೂರ್ತಿದಾಯಕ ಮಹಿಳೆಯರು’ ಎಂಬ ವಿಷಯದ ಕುರಿತ ವಿಚಾರ ಸಂಕಿರಣ ಸಮಾರೋಪಗೊಂಡಿತು.
ವಿಚಾರ ಸಂಕಿರಣದಲ್ಲಿ ವಿವಿಧ ವಿಷಯಗಳ ಕುರಿತು 62 ಸಂಶೋಧಕರು ಪ್ರಬಂಧ ಮಂಡಿಸಿದರು. ಉತ್ತಮ ಪ್ರಬಂಧ ಮಂಡನೆಗೆ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ-ಪ್ರಮಾಣಪತ್ರ ವಿತರಿಸಲಾಯಿತು.
ಕರ್ನಾಟಕ ಕಾನೂನು ವಿವಿ ಹಿರಿಯ ಪ್ರಾಧ್ಯಾಪಕಿ ಡಾ| ರತ್ನಾ ಭರಮಗೌಡರ ಮಾತನಾಡಿ, ಭಾರತೀಯ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನಮಾನಗಳನ್ನು ನೀಡಲಾಗಿದೆ. ಇತಿಹಾಸವನ್ನು ಅವಲೋಕಿಸಿದಾಗ ಅನೇಕ ಮಹಿಳೆಯರು ರಾಜಕೀಯದಲ್ಲಿ ಸಾಧನೆ ಮಾಡಿದ್ದು, ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತನ್ನದೇ ಸಾಮರ್ಥ್ಯ ಹೊಂದಿದ್ದಾಳೆ ಎಂಬುದಕ್ಕೆ ಇಂದಿರಾಗಾಂಧಿ, ಪ್ರತಿಭಾ ಪಾಟೀಲ್, ದ್ರೌಪದಿ ಮುರ್ಮು, ನಿರ್ಮಲಾ ಸೀತಾರಾಮನ್ ಸೇರಿದಂತೆ ಇಂದು ರಾಜಕೀಯ ಕ್ಷೇತ್ರದಲ್ಲಿ
ಬಹಳಷ್ಟು ಸಾಧನೆ ಮಾಡಿದ್ದಾರೆ ಎಂದರು. ಕ್ರೀಡಾ ಕ್ಷೇತ್ರ ಪುರುಷರಿಗೆ ಮಾತ್ರ ಸೀಮಿತವಾಗಿತ್ತು.
ಆದರೆ ಪ್ರಸ್ತುತ ಮಹಿಳೆಯರು ಕ್ರೀಡೆ, ಆಡಳಿತ, ಪೊಲೀಸ್ ಇಲಾಖೆ, ರಕ್ಷಣಾ ಇಲಾಖೆಯಲ್ಲೂ ಸಾಧನೆ ಮಾಡಿದ್ದಾರೆ. ಆದರೆ ಇಂದಿಗೂ ಮಹಿಳೆಯರ ಮೇಲೆ ಅವ್ಯಾಹತವಾಗಿ ಮಾನಸಿಕ ಹಿಂಸೆ ನಡೆಯುತ್ತಿರುವುದು ದುರದೃಷ್ಟಕರ. ಮಹಿಳೆಯರು ಎಷ್ಟೇ ಮುಂದುವರಿದಿದ್ದರೂ ಅವಳ ಸಾಧನೆಯನ್ನು ಗುರುತಿಸದಿರುವುದು ವಿಪರ್ಯಾಸದ ಸಂಗತಿ ಎಂದು ಹೇಳಿದರು.
ಎಸ್ಬಿಐ ಕವಿವಿ ಶಾಖೆಯ ಮಧುಸ್ವಿನಿ ದೇಸಾಯಿ ಮಾತನಾಡಿದರು. ಕವಿವಿ ಸಮಾಜ ನಿಖಾಯದ ಡೀನ್ ಜಯಶ್ರೀ ಎಸ್. ಅಧ್ಯಕ್ಷತೆ ವಹಿಸಿದ್ದರು. ಕವಿವಿ ಮಹಿಳಾ ಅಧ್ಯಯನ ಸಂಶೋಧನೆ ಕೇಂದ್ರದ ನಿರ್ದೇಶಕಿ ಡಾ| ಸಂಗೀತಾ ಮಾನೆ ವರದಿ ಮಂಡಿಸಿದರು. ಶ್ಯಾಮಲಾ ರತ್ನಾಕರ, ಡಾ| ಶ್ಯಾಮಕುಮಾರ, ವೀಣಾ ಬಿರಾದರ, ಡಾ| ಪುಷ್ಪಾ ಹೊಂಗಲದ ಇನ್ನಿತರರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.