Dharwad ಬಸವಣ್ಣನವರ ತತ್ವವೇ ‘ಬೆಲ್ಲದಚ್ಚು’ಮೆಚ್ಚು : ಸಿಎಂ ಸಿದ್ದು

ಚಂದ್ರಕಾಂತ ಬೆಲ್ಲದ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ

Team Udayavani, Dec 16, 2023, 8:35 PM IST

Dharwad ಬಸವಣ್ಣನವರ ತತ್ವವೇ ‘ಬೆಲ್ಲದಚ್ಚು’ಮೆಚ್ಚು : ಸಿಎಂ ಸಿದ್ದು

ಧಾರವಾಡ : ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ್ ಅವರಿಗೆ ಅಪಾರ ನಂಬಿಕೆಯಿದ್ದು, ಅದರಿಂದಾಗಿಯೇ ಅವರು ಎಲ್ಲರಿಗೂ ಅಚ್ಚುಮೆಚ್ಚು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಖಾಸಗಿ ರೇಸಾರ್ಟ್‌ನಲ್ಲಿ ಶನಿವಾರ ಸಂಜೆ ನಡೆದ ಮಾಜಿ ಶಾಸಕ ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬೆಲ್ಲದ ಅವರ ಅಭಿನಂದನಾ ಗ್ರಂಥ ಬೆಲ್ಲದಚ್ಚು ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವ್ಯಕ್ತಿ ಯಾವುದೇ ಧರ್ಮ,ಜಾತಿ, ಪ್ರದೇಶ, ಭಾಷೆ ಅಥವಾ ಸಂಸ್ಕೃತಿಗೆ ಸೇರಿರಲಿ. ಆತನಲ್ಲಿ ಮನುಷ್ಯರನ್ನು ಜಾತಿ ಧರ್ಮಗಳಾಚೆಗೆ ಪರಸ್ಪರ ಪ್ರೀತಿಸುವ, ಗೌರವಿಸುವ ಸಂಸ್ಕೃತಿ ಇರಬೇಕು. ಇಂತಹ ಸುಸಂಸ್ಕೃತಿಯನ್ನೇ ಚಂದ್ರಕಾಂತ ಬೆಲ್ಲದ್ ಅವರು ತಮ್ಮ ಬದುಕಿನಲ್ಲಿ ಆಚರಿಸಿಕೊಂಡು ಬಂದಿದ್ದು, ಹೀಗಾಗಿಯೇ ಬೆಲ್ಲದ್ ಮತ್ತು ನನ್ನ ಮಧ್ಯೆ ಉತ್ತಮ ಬಾಂಧ್ಯವ್ಯವಿದೆ ಎಂದು ಹೇಳಿದರು.

ಇನ್ನೊಬ್ಬರ ಮನಸ್ಸಿಗೆ ನೋವು ಮಾಡುವಂತಹ ಮಾತುಗಳನ್ನು ಯಾವತ್ತೂ ಆಡದ ಚಂದ್ರಕಾಂತ ಬೆಲ್ಲದ್, ಅತ್ಯುನ್ನತ ಮನುಷ್ಯ ಗೌರವವನ್ನು ಹೊಂದಿದ್ದು, ಇವರದ್ದು ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತಹ ಅಪರೂಪದ ವ್ಯಕ್ತಿತ್ವ .ಎಲ್ಲರಿಗೂ ಬೇಕಾಗಿಕೊಂಡು ಬದುಕಿದ ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು ಎಂದರು.

ಚಂದ್ರಣ್ಣನ ಸಾಧನೆ ಮಾದರಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಜಾತ್ರೆಗಳಲ್ಲಿ ಬಲೂನು ಮಾರಾಟ ಮಾಡಿ, ಕಡು ಬಡತನವನ್ನು ಎದುರಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಂಡ ಚಂದ್ರಕಾಂತ ಬೆಲ್ಲದ ಅವರದ್ದು ಸಾರ್ಥಕ ಜೀವನ. ಸರ್ಕಾರದಿಂದ ಉದ್ಯೋಗ ಮಾಡುವವರಿಗೆ ಯಾವುದೇ ಸಹಾಯವಿಲ್ಲದ ಸಂದರ್ಭದಲ್ಲಿ ಸ್ವಂತ ಪ್ರಯತ್ನದಿಂದ ಉದ್ಯಮಗಳನ್ನು ಕಟ್ಟಿ ಬೆಳೆಸಿದ್ದು ಅವರ ಸಾಧನೆ. ಇಂದಿನ ಯುವ ಜನರಿಗೆ ಚಂದ್ರಕಾಂತ ಬೆಲ್ಲದ ಅವರು ಖಂಡಿತವಾಗಿಯೂ ಮಾದರಿಯಾಗಿದ್ದಾರೆ ಎಂದರು.

ಡಂಬಳದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿಯ ಹಿರೇಮಠ ಸಂಸ್ಥಾನದ ಶ್ರೀ ಮ.ಘ.ಚ.ಡಾ.ಬಸವಲಿಂಗ ಪಟ್ಟದೇವರು, ಧಾರವಾಡ ಮುರುಘಾಮಠದ ಮ.ನಿ.ಪ್ರ.ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೋ.ರು.ಚನ್ನಬಸಪ್ಪ ಅವರು ವಹಿಸಿದ್ದರು.

ಹೊಳೆದಾಟಿದವರು ಬಿಡುಗಡೆ : ಇನ್ನು ಕಾರ್ಯಕ್ರಮದಲ್ಲಿ ಅಲ್ಲಮ ಲೋಕ ಕೃತಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದರು. ಇನ್ನು ಚಂದ್ರಕಾಂತ ಬೆಲ್ಲದ ಅವರ ಆತ್ಮಚರಿತ್ರೆ ದೊಡ್ಡ ಹೊಳೆ ದಾಟಿದವರು ಕೃತಿಯನ್ನು ಸಚಿವ ಸಂತೋಷ ಲಾಡ್ ಬಿಡುಗಡೆಗೊಳಿಸಿದರು.

ಬೆಲ್ಲದ ಅಭಿನಂದನಾ ಸಮಿತಿ ಅಧ್ಯಕ್ಷ ಸಂಶೋಧಕ ಡಾ.ವೀರಣ್ಣ ರಾಜೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಕಾಂತ ಬೆಲ್ಲದ ಪತ್ನಿ ಲೀಲಾವತಿ ಬೆಲ್ಲದ, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ ಮಾನೆ , ಮಹೇಶ್ ಟೆಂಗಿನಕಾಯಿ, ಎಸ್.ವಿ.ಸಂಕನೂರ.ಸಾಹಿತಿಗಳಾದ ನಾ.ಮೊಗಸಾಲೆ, ಡಾ.ಶಂಭು ಬಳಿಗಾರ, ಸಾಹಿತಿ ರಂಜಾನ್ ದರ್ಗಾ, ಪ್ರೊ.ಶಶಿಧರ ತೋಡಕರ, ದಿವಾಕರ ಹೆಗಡೆ ಮತ್ತು ಚಿತ್ರಕಲಾವಿದ ಚಂದ್ರು ಗಂಗೊಳ್ಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು. ಬಸವಪ್ರಭು ಹೊಸಕೇರಿ ಸ್ವಾಗತಿಸಿದರು. ಅಭಿನಂದನಾ ಸಮಾರಂಭದಲ್ಲಿ ಬೆಲ್ಲದ ಕುಟುಂಬ ಪರಿಹಾರಮತ್ತು ಅವರ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬೆಲ್ಲದ್125 ವರ್ಷ ಬದುಕಲಿ : ಜೋಶಿಗೆ ಸಿದ್ದು ಚಟಾಕಿ
ಅಭಿನಂದಾನ ಪರ ನುಡಿಗಳನ್ನು ಆಡುವಾಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಚಂದ್ರಕಾಂತ ಬೆಲ್ಲದವರಿಗೆ ಈಗ 86 ವರ್ಷ. ಅವರು ಇನ್ನು ಕನಿಷ್ಠ 14 ವರ್ಷ ಬದುಕಿ ಶತಕ ಬಾರಿಸಲಿ ಎಂದು ಹೇಳಿದರು. ತಮ್ಮ ಭಾಷಣದಲ್ಲಿ ಇದಕ್ಕೆ ಮಹಾತ್ಮಾ ಗಾಂಽಜಿ ಅವರ ಪತ್ರದ ಕಥೆ ಹೇಳಿ, ಬೆಲ್ಲದ್ ನೂರು ವರ್ಷ ಅಲ್ಲ 125 ವರ್ಷ ಬದುಕಬೇಕು. ಇದನ್ನು ನಾನು ಹೇಳಿಲ್ಲ, ಜೋಶಿ ಅವರೇ ಗಾಂಧಿಜಿಯನ್ನು ಯಾರೋ ಕೇಳಿದ್ದಾಗ ಹೇಳಿದ್ದರಂತೆ ಎಂದರು. ನೆರೆದ ಸಭಿಕರೆಲ್ಲ ನಗೆ ಗಡಲಲ್ಲಿ ತೇಲಿದರು.

ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ್ ಅವರಿಗೆ ಅಪಾರ ನಂಬಿಕೆ ಇದೆ. ನಾನು ಚಂದ್ರಕಾಂತ ಬೆಲ್ಲದ್ ಗೋಕಾಕ್ ಚಳವಳಿಯ ಒಡನಾಡಿಗಳು. ಅವರು ಎಲ್ಲಾ ವರ್ಗದ ಜನರಿಂದ ಅಪಾರ ಪ್ರೀತಿ ಗಳಿಸಿದವರು. ಪ್ರಾಮಾಣಿಕಯೇ ಅವರನ್ನು ಎತ್ತರಕ್ಕೆ ಬೆಳೆಸಿದ್ದು, ಸಾರ್ಥಕ ಜೀವನ ಮೆಚ್ಚುವಂತದ್ದು.
-ಸಿದ್ದರಾಮಯ್ಯ, ಮುಖ್ಯಮಂತ್ರಿಗಳು

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.