ಧಾರವಾಡ: ದನದ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆ


Team Udayavani, Apr 1, 2024, 5:51 PM IST

ಧಾರವಾಡ: ದನದ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆ

ಉದಯವಾಣಿ ಸಮಾಚಾರ
ಧಾರವಾಡ : ಬರಗಾಲದ ಬರೆಗೆ ರೈತನ ಪಾಲಿನ ಜೀವನಾಡಿ ಆಗಿರುವ ಜಾನುವಾರುಗಳು ಪರಭಾರೆ ಆಗುತ್ತಿದ್ದು, ಆದರೆ ಮಾರಾಟಕ್ಕೆಂದು ಜಾನುವಾರು ಮಾರುಕಟ್ಟೆಗೆ ಬರುವ ಜಾನುವಾರುಗಳ ದಾಹ ಮಾತ್ರ ತೀರದಾಗಿದೆ. ಜಾನುವಾರುಗಳ ನೀರಿನ ದಾಹ ನೀಗಿಸಲೆಂದೇ ತೊಟ್ಟಿಗಳಿದ್ದರೂ ಅವುಗಳಲ್ಲಿ ನೀರಿಲ್ಲ…!

ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪೂರದ ಜಾನುವಾರು ಮಾರುಕಟ್ಟೆಯ ದುಸ್ಥಿತಿಯಿದು. ಜಾನುವಾರುಗಳ ದಾಹ ನೀಗಿಸಬೇಕಾದ ನೀರಿನ ತೊಟ್ಟಿಗಳಲ್ಲಿ ನೀರಿಲ್ಲ, ಖಾಲಿ ತೊಟ್ಟಿಗಳಲ್ಲಿ ಬರೀ ಮದ್ಯದ ಬಾಟಲಿಗಳದ್ದೇ ಸಾಮ್ರಾಜ್ಯ. ಶುಚಿತ್ವದ ಕೊರತೆಯ ಜತೆಗೆ ಅನೈತಿಕ ಚಟುವಟಿಕೆಗಳದ್ದೇ ಕಾರುಬಾರು, ಎಣ್ಣೆ ಪಾರ್ಟಿಗಳ ಕಟ್ಟೆಯಾಗಿರುವ ಹರಾಜು ಕಟ್ಟೆಯೇ ಮಾರುಕಟ್ಟೆಯ ದುಸ್ಥಿತಿಗೆ ಸಾಕ್ಷಿ. ಇಲ್ಲಿಗೆ ಮಾರಾಟಕ್ಕೆಂದು ಬರುವ ಜಾನುವಾರುಗಳಿಗೆ ಕುಡಿಯುವ ನೀರು ಕೂಡ ಸಿಗದಂತಹ ಕೆಟ್ಟ ದುಸ್ಥಿತಿ ಇಲ್ಲಿದೆ.

ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪೂರದ ಜಾನುವಾರು ಮಾರುಕಟ್ಟೆ ಜಿಲ್ಲೆಯಲ್ಲೇ ದೊಡ್ಡದಾಗಿದ್ದು, ವಾರದ ಪ್ರತಿ ಮಂಗಳವಾರ ಜಾನುವಾರು ಸಂತೆ ಜೋರಾಗಿಯೇ ನಡೆದುಕೊಂಡು ಬಂದಿದೆ. ಸದ್ಯ ಮಾರುಕಟ್ಟೆಯಲ್ಲಿಯೇ ಬರಗಾಲದ ಹೊಡೆತಕ್ಕೆ ಮಾರಾಟಕ್ಕೆಂದು ಜಾನುವಾರುಗಳ ದಂಡೇ ಬರುತ್ತಿದ್ದು, ಆದರೆ ಜಾನುವಾರುಗಳ ದಾಹ ನೀಗಿಸಬೇಕಾದ ತೊಟ್ಟಿಗಳಲ್ಲಿ ಮಾತ್ರ ನೀರಿಲ್ಲದಂತಹ ದುಸ್ಥಿತಿ ಜಾನುವಾರು ಮಾರುಕಟ್ಟೆಯಲ್ಲಿದೆ.

ಮಾರುಕಟ್ಟೆಯ ದುಸ್ಥಿತಿಯಿದು: ಈ ಮಾರುಕಟ್ಟೆಯಲ್ಲಿ ದನಗಳನ್ನು ಕಟ್ಟಲು ಕಲ್ಲು ಹೂತಿದ್ದು, ಒಂದಿಷ್ಟು ಕಡೆ ಕಲ್ಲುಗಳೇ ಇಲ್ಲದ ಕಾರಣ ರೈತರೇ ತಾವೇ ಕಲ್ಲು ತಂದಿಟ್ಟು ದನಗಳನ್ನು ಕಟ್ಟುವ ಪರಿಸ್ಥಿತಿ ಇದೆ. ಇಲ್ಲಿ ರೈತರ ದಾಹ ನೀಗಿಸಲು ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಜಾನುವಾರುಗಳ ನೀರಿನ ದಾಹ ನೀಗಿಸಲು ಕಟ್ಟಿರುವ ತೊಟ್ಟಿಗಳಲ್ಲಿ ನೀರಿಲ್ಲದೇ ಖಾಲಿ
ಇರುವ ಈ ತೊಟ್ಟಿಗಳಲ್ಲಿ ಸಾರಾಯಿ ಬಾಟಲಿಗಳು ಬಿದ್ದಿವೆ. ಮದ್ಯದ ಪಾಕೇಟ್‌, ಬಾಟಲಿಗಳು ತೊಟ್ಟಿಯಲ್ಲಿ ರಾರಾಜಿಸುತ್ತಿವೆ. ಹೀಗಾಗಿ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಶುಚಿತ್ವದ ಕೊರತೆ ಎದ್ದು ಕಾಣುತ್ತಿದೆ.

ಇನ್ನು ಕಟ್ಟಿರುವ ಶೌಚಾಲಯಗಳು ಗಬ್ಬೇದ್ದು ನಾರುವಂತಾಗಿವೆ. ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪುರದ ಜಾನುವಾರು ಮಾರುಕಟ್ಟೆ 11 ಎಕರೆ 23 ಗುಂಟೆ ಜಾಗ ಹೊಂದಿದ್ದು, ಈಗಾಗಲೇ 2 ಎಕರೆಯಲ್ಲಿ ಅಗ್ನಿಶಾಮಕದಳ ಕಚೇರಿ ಇದೆ. ಈ ಜಾಗಕ್ಕೆ ಕಟ್ಟಿರುವ ಕಾಂಪೌಂಡ್‌ ಒಂದೆರಡು ಕಡೆ ಹೊಡೆದು ಹೋಗಿದೆ. ಹೀಗಾಗಿ ರಾತ್ರಿ ಅಕ್ರಮ ಚಟುವಟಿಕೆಗಳಿಗೆ ತಾಣ ಆಗುತ್ತಿದ್ದು, ಹಗಲು-ರಾತ್ರಿಯ ಬೇಧವಿಲ್ಲದೇ ಎಣ್ಣೆ ಪಾರ್ಟಿ ಸೇರಿದಂತೆ ನೈತಿಕ ಚಟುವಟಿಕೆಗಳಿಗೆ ಸೂಕ್ತ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಮಾರುಕಟ್ಟೆಯ ಪ್ರಾಂಗಣದಲ್ಲಿ ಸಾರಾಯಿ ಬಾಟಲಿಗಳು ರಾರಾಜಿಸುವಂತಾಗಿದೆ.

ಅನೈತಿಕ ತಾಣವಾದ ಕಟ್ಟೆ: ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿಯೇ ಹೋಲ್‌ಸೇಲ್‌ ಎಲೆ ವ್ಯಾಪಾರಕ್ಕಾಗಿಯೇ 2017-18ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ಅಂದಾಜು 55 ಲಕ್ಷ ರೂ. ಗಳಲ್ಲಿ ಮೂರು ಮುಚ್ಚು ಹರಾಜು ಕಟ್ಟೆ ನಿರ್ಮಾಣ ಮಾಡಲಾಗಿತ್ತು. ಈಗ ಹಳೇ ಎಪಿಎಂಸಿಯಲ್ಲಿ ನಡೆಯುತ್ತಿರುವ ಹೋಲ್‌ಸೇಲ್‌ ಎಲೆ ವ್ಯಾಪಾರ ಮಾರುಕಟ್ಟೆ ಈ ಕಟ್ಟೆಗೆ ಸ್ಥಳಾಂತರ ಆಗಬೇಕಿತ್ತು. ಆದರೆ ಈ ಕಾರ್ಯವಾಗದೇ ಹರಾಜು ಕಟ್ಟೆಗಳು ಹಾಗೇ ಉಳಿದುಕೊಂಡು, ಅನೈತಿಕ ಚಟುವಟಿಕೆಗಳ ಕಟ್ಟೆಯಾಗಿದ್ದವು. ಈ ಪೈಕಿ ಎರಡು ಹರಾಜು ಕಟ್ಟೆಗಳಲ್ಲಿ ಇದೀಗ ಕಳೆದ 2-3 ತಿಂಗಳಿಂದ ಘನತಾಜ್ಯ ವಿಲೇವಾರಿ ಘಟಕ ನಿರ್ಮಾಣದ ಮೂಲಕ ಸದ್ಬಳಕೆ ಮಾಡಿಕೊಂಡಿದ್ದು, ಆದರೆ ಇನ್ನೊಂದು ಹರಾಜು ಕಟ್ಟೆಯಂತೂ ಹಾಗೇ ಉಳಿದುಕೊಂಡು ಬಿಟ್ಟಿದೆ. ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿಯೇ ಇರುವ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರ ಕಚೇರಿ ಪಕ್ಕದಲ್ಲೇ ಈ ಹರಾಜು ಕಟ್ಟೆಯಿದ್ದು, ಇದು ಅನೈತಿಕ ಚಟುವಟಿಕೆಗಳ ತಾಣದ ಕಟ್ಟೆಯಾಗಿ ಮಾರ್ಪಟ್ಟಿವೆ.

ಹೀಗಾಗಿ ಮದ್ಯದ ಬಾಟಲಿ ರಾರಾಜಿಸುತ್ತಿದ್ದು,ಪ್ರತಿ ದಿನ ರಾತ್ರಿ ಎಣ್ಣೆ ಪಾರ್ಟಿಗಳು ನಡೆಯುತ್ತಿರುವುದಕ್ಕೆ ಪುಷ್ಠಿ ನೀಡುತ್ತಿವೆ. ಈ ಕಟ್ಟೆ ಆವರಣದಲ್ಲಿ ಅಷ್ಟೇ ಅಲ್ಲ ಜಾನುವಾರು ಮಾರುಕಟ್ಟೆಯೂ ಅನೈತಿಕ ಚಟುವಟಿಕೆಯ ತಾಣವಾಗಿದೆ. ಇನ್ನು ಈ ಪ್ರಾಂಗಣದಲ್ಲಿಯೇ ಕುರಿ ಮತ್ತು ಮೇಕೆಗಳ ಮಾರುಕಟ್ಟೆ ಆಧುನೀಕರಣ ಮಾಡುವ 10 ಲಕ್ಷ ರೂ.ಗಳ ಕಾಮಗಾರಿಗೆ ಅನುಮೋದನೆ ಲಭಿಸಿದ್ದಲ್ಲದೇ ಅದಕ್ಕಾಗಿ ಜಾಗವನ್ನೂ ಮೀಸಲಿಡಲಾಗಿತ್ತು. ಆದರೆ ನನೆಗುದಿಗೆ ಬಿದ್ದಿರುವ ಈ ಯೋಜನೆ ಕಾಮಗಾರಿ ಮಾತ್ರ
ವರ್ಷಗಳೇ ಕಳೆದರೂ ಆರಂಭಗೊಂಡಿಲ್ಲ. ಈ ರೀತಿಯ ಅಭಿವೃದ್ಧಿ ಕಾಣದ ಜಾನುವಾರು ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿವೆ.

ಮೂಲ ಸೌಕರ್ಯ ಮರೀಚಿಕೆ
ಜಿಲ್ಲೆಯಲ್ಲಿ ಧಾರವಾಡ ಎಪಿಎಂಸಿ, ಹುಬ್ಬಳ್ಳಿ ಎಪಿಎಂಸಿ, ಅಣ್ಣಿಗೇರಿ ಎಪಿಎಂಸಿ, ನೂಲ್ವಿ ಎಪಿಎಂಸಿ ವ್ಯಾಪ್ತಿಯಲ್ಲಿ ಸೇರಿ ಒಟ್ಟು ನಾಲ್ಕು ಜಾನುವಾರು ಮಾರುಕಟ್ಟೆಗಳಿವೆ. ಈ ಪೈಕಿ ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪೂರದ ಜಾನುವಾರು
ಮಾರುಕಟ್ಟೆಯೇ ದೊಡ್ಡದು. ಇಲ್ಲಿ ವಾರದಲ್ಲಿ ಒಂದು ದಿನ ನಡೆಯುವ ಜಾನುವಾರು ಸಂತೆಗೆ ಬರುವ ಜಾನುವಾರುಗಳ ನೀರಿನ ದಾಹ ಸಹ ನೀಗಿಸದಂತಹ ದುಸ್ಥಿತಿ. ಈ ರೀತಿ ಮೂಲಭೂತ ಸೌಕರ್ಯಗಳಿಂದ ದಿನದಿಂದ ದಿನಕ್ಕೆ ಸೊರಗುತ್ತಿದ್ದು, ಅದೇ ರೀತಿ ಜಿಲ್ಲೆಯ ಉಳಿದ ಜಾನುವಾರು ಮಾರುಕಟ್ಟೆಗಳು ಸಹ ಮೂಲಭೂತ ಸೌಲಭ್ಯಗಳಿಂದ ಮರೀಚಿಕೆಯಾಗಿರುವುದಂತೂ ಸತ್ಯ.

ಜಾನುವಾರು ಮಾರುಕಟ್ಟೆಯಲ್ಲಿ ನಿರ್ಮಿಸಿರುವ ನೀರಿನ ತೊಟ್ಟಿಯಲ್ಲಿ ನೀರಿಲ್ಲ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಿ ನೀರಿನ ತೊಟ್ಟಿಗಳಲ್ಲಿ ನೀರು ಬಿಡುವ ಕಾರ್ಯ ಮಾಡಲಾಗುವುದು. ಇದರ ಜತೆಗೆ ಮಾರುಕಟ್ಟೆಯ ಮೂಲಸೌಕರ್ಯಗಳಿಗೆ ಆದ್ಯತೆ ಕೊಡಲಾಗುವುದು.
*ವಿ.ಜಿ.ಹಿರೇಮಠ
ಕಾರ್ಯದರ್ಶಿ, ಎಪಿಎಂಸಿ, ಧಾರವಾಡ

*ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.